ಹಣ ಹಂಚಿಕೆ ಮಾಡಿಲ್ಲ: ದಿಶಾ ಸುರೇಶ್ ಕುಮಾರ್ ಸ್ಪಷ್ಟೀಕರಣ
Recommended Video

ಬೆಂಗಳೂರು, ಮೇ 9: 'ನಾನು ವೈದ್ಯೆ. ರಾಜಕೀಯಕ್ಕೂ ನನಗೂ ಯಾವುದೇ ಸಂಬಂಧವಿಲ್ಲ' ಎಂದು ರಾಜಾಜಿನಗರ ಕ್ಷೇತ್ರದ ಶಾಸಕ ಸುರೇಶ್ ಕುಮಾರ್ ಅವರ ಮಗಳು ದಿಶಾ ಸ್ಪಷ್ಟನೆ ನೀಡಿದ್ದಾರೆ.
ರಾಜಾಜಿನಗರದ ಇಎಸ್ಐ ಆಸ್ಪತ್ರೆ ಸಮೀಪದ ಮನೆಯಲ್ಲಿ ಹಂಚಿಕೆ ಮಾಡಲು ಚೀಲದಲ್ಲಿ ಹಣ ಇರಿಸಿಕೊಂಡಿದ್ದರು ಎಂಬ ಆರೋಪ ದಿಶಾ ಅವರ ವಿರುದ್ಧ ಕೇಳಿಬಂದಿತ್ತು. ಈ ಸಂಬಂಧ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದೂ ವರದಿಯಾಗಿತ್ತು.
ಇವೆಲ್ಲವೂ ಸತ್ಯಕ್ಕೆ ದೂರ ಎಂದು ದಿಶಾ ಹೇಳಿದ್ದಾರೆ. ಇದು ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಯಶಸ್ ನಾಯಕ್ ಅವರ ಕಚೇರಿ. ದೆಹಲಿಯಿಂದ ತಂಡವೊಂದು ಬಂದಿದ್ದು, ಸಾಮಾಜಿಕ ಮಾಧ್ಯಮದ ಕೆಲಸದಲ್ಲಿ ನಾವು ತೊಡಗಿದ್ದೆವು.
ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಕಚೇರಿಗೆ ಬಂದೆ. ಮೂರು ಜನ ಮಾತ್ರ ಇದ್ದೆವು. ಇದ್ದಕ್ಕಿದ್ದಂತೆ ಒಳನುಗ್ಗಿದ ಕೆಲವರು, ನನ್ನ ಬಳಿ ಬಂದು ನಿನ್ನ ಚೀಲದಲ್ಲಿ ದುಡ್ಡಿದೆ ತೋರಿಸು ಎಂದರು. ಸಾಮಾನ್ಯವಾಗಿ ನನ್ನನ್ನು ಮಾತನಾಡಿಸುವವರು ಗೌರವದಿಂದ ಮಾತನಾಡುತ್ತಾರೆ. ಆದರೆ, ಈ ಜನರು ಏಕವಚನದಲ್ಲಿ ದಾರ್ಷ್ಟ್ಯದಿಂದ ಮಾತನಾಡಿದರು. ನನ್ನ ಚೀಲದಲ್ಲಿ ಮೊಬೈಲ್, ಲ್ಯಾಪ್ಟಾಪ್ ಚಾರ್ಜರ್ ಬಿಟ್ಟು ಬೇರೆ ಏನೂ ಇರಲಿಲ್ಲ. ದುಡ್ಡು ಎಲ್ಲಿಟ್ಟಿದ್ದೀಯಾ ಎಂದು ಗೊತ್ತು ಎಂದು ಕೆಟ್ಟ ಪದಗಳಿಂದ ನಿಂದಿಸಿ ಹೊರಟುಹೋದರು ಎಂದು ದಿಶಾ ವಿವರಿಸಿದ್ದಾರೆ.

ಕೆಲವೇ ನಿಮಿಷದಲ್ಲಿ ಕಾಂಗ್ರೆಸ್ ಪಕ್ಷದ ಶಾಲು ಹಾಕಿದ್ದವರು ತುಂಬಾ ಜನರನ್ನು ಕರೆಯಿಸಿ ಏನೇನೋ ಘೋಷಣೆ ಕೂಗಿದರು. ಅದರ ಬೆನ್ನಲ್ಲೇ ಪೊಲೀಸರು ಬಂದು ಪರಿಶೀಲಿಸಿದರು. ಅವರಿಗೆ ಏನೂ ಸಿಗಲಿಲ್ಲ. ಅವರ ಹಿಂದೆಯೇ ಇವರೂ ಬಂದು ವಿಡಿಯೊ ತೆಗೆಯಲು ಶುರುಮಾಡಿದರು.
ಅವಾಚ್ಯ ಪದಗಳಲ್ಲಿ ಮಾತನಾಡಿದರು. ನನ್ನ ವಿಡಿಯೊ ತೆಗೆಯಲು ಆರಂಭಿಸಿದರು. ಹೊರಗೆ ಘೋಷಣೆಗಳು ಇನ್ನೂ ಜೋರಾಗಿತ್ತು. ನಾನು ನನ್ನ ಪಾಡಿಗೆ ಕೆಲಸ ಮುಂದುವರಿಸಿದೆ. ಅಷ್ಟರಲ್ಲಿ ಕಾರ್ಪೊರೇಟರ್ ಕೃಷ್ಣಮೂರ್ತಿ ಒಳಗೆ ಬಂದು ನೀವೆಲ್ಲ ಬಿಜೆಪಿ ಏಜೆಂಟ್ಗಳು ನಡೀರಿ ನಡೀರಿ ಎಂದು ಕೂಗಾಡಿದರು.

ನೀನು ಏನೇ ನೋಡ್ತಿದ್ದೀಯಾ ಎಂದು ಕೆಟ್ಟದಾಗಿ ಮಾತನಾಡಿದರು. ಅದನ್ನು ಕೇಳಿ ನನಗೆ ಶಾಕ್ ಆಯ್ತು. ಹಿಂದೆಂದೂ ಈ ರೀತಿ ಅನುಭವ ಆಗಿರಲಿಲ್ಲ. ತಂದೆಗೆ ತಿಳಿಸೋಣ ಎಂದು ಫೋನ್ ತೆಗೆದುಕೊಂಡೆ. ಕೂಡಲೇ ಅವರು ನನ್ನ ವಿಡಿಯೊ ತೆಗೆಯುತ್ತೀಯೇನೆ? ಎಂದು ಎಳೆದಾಡಲು ಬಂದರು. ಜನಪ್ರತಿನಿಧಿಯಾಗಿ ಒಬ್ಬ ಹೆಣ್ಣುಮಗಳ ಜೊತೆ ಹೇಗೆ ಮಾತನಾಡುವುದು ಅವರಿಗೆ ತಿಳಿದಿಲ್ಲ. ಗೂಂಡಾಗಿರಿ ಪ್ರದರ್ಶಿಸಿದರು ಎಂದು ದಿಶಾ ಆರೋಪಿಸಿದ್ದಾರೆ.
ನನ್ನ ಚೀಲದಲ್ಲಿ ಯಾವುದೇ ಹಣವಿರಲಿಲ್ಲ. ನನ್ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿಲ್ಲ. ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಇದರಿಂದ ನನ್ನ ವೃತ್ತಿಬದುಕಿಗೆ ತೊಂದರೆಯಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.
ಅಲ್ಲಿಗೆ ಬಂದಿದ್ದ ಕಾಂಗ್ರೆಸ್ ಕಾರ್ಯಕರ್ತರೇ ತಮ್ಮ ಜೇಬಿಂದ ದುಡ್ಡು ತೆಗೆದು ತೋರಿಸಿರಬಹುದು. ನಮ್ಮದು ಹಣಹಂಚಿ ರಾಜಕೀಯ ಮಾಡುವ ಕುಟುಂಬವಲ್ಲ. ಸ್ವಚ್ಛ ಕುಟುಂಬ ನಮ್ಮದು. ಜೀವನದಲ್ಲಿ ಇದೇ ಮೊದಲು ಇಂತಹ ಕೆಟ್ಟ ಅನುಭವ ಆಗಿದೆ ಎಂದು ದಿಶಾ ಹೇಳಿದರು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications