ರಾಕೇಶ್ ಫ್ಲಾಟ್ನ ಬಾಡಿಗೆದಾರರಲ್ಲ: ನಕಲಿ ವೋಟರ್ ಐಡಿ ಸಿಕ್ಕ ಮನೆ ಮಾಲಕಿ ಸ್ಪಷ್ಟನೆ
ಬೆಂಗಳೂರು, ಮೇ 9: ಜಾಲಹಳ್ಳಿಯ ಫ್ಲಾಟ್ ಒಂದರಲ್ಲಿ ದೊರೆತ ನಕಲಿ ಮತದಾರರ ಗುರುತಿನ ಚೀಟಿ ಪ್ರಕರಣಕ್ಕೂ ತಮಗೂ ಸಂಬಂಧವಿಲ್ಲ ಎಂದು ಫ್ಲಾಟ್ ಮಾಲೀಕರಾದ ಮಂಜುಳಾ ನಂಜಾಮರಿ ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿರುವ ಆರೋಪಗಳ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ನಕಲಿ ಗುರುತಿನ ಚೀಟಿ ದೊರೆತ ಫ್ಲಾಟ್ನಲ್ಲಿ ರಂಗರಾಜು ಮತ್ತು ರೇಖಾ ಎಂಬುವವರು ಬಾಡಿಗೆದಾರರಾಗಿದ್ದರು. ಕಾಂಗ್ರೆಸ್ ಆರೋಪಿಸಿರುವಂತೆ ಬಿಜೆಪಿ ಬೆಂಬಲಿಗ ರಾಕೇಶ್ ಇಲ್ಲಿ ಬಾಡಿಗೆಗೆ ಇರಲಿಲ್ಲ ಎಂದು ತಿಳಿಸಿದರು.
ಆಫೀಸಿನ ಕೆಲವು ಬೇಡದ ಸಾಮಾಗ್ರಿಗಳನ್ನು ಹಾಕಲು ಈ ಜಾಗ ಬೇಕು ಎಂದು ಹೇಳಿ ರಂಗರಾಜನ್ ಮತ್ತು ರೇಖಾ ಅವರು ಏಪ್ರಿಲ್ 5 ರಂದು ಫ್ಲಾಟ್ಅನ್ನು ಬಾಡಿಗೆಗೆ ತೆಗೆದುಕೊಂಡಿದ್ದರು.
The tenants are Rangaraju and Rekha and not Rakesh(BJP Supporter who Congress alleged was tenant of Bengaluru flat where voter IDs were seized). They took the place on rent on April 5 saying they just wanted place to dump some of their office stuff :Manjula Nanjamari,flat owner pic.twitter.com/PeoJEBbph0
— ANI (@ANI) 9 May 2018
1997-2002ರ ಅವಧಿಯಲ್ಲಿ ನಾನು ಕಾರ್ಪೊರೇಟರ್ ಆಗಿದ್ದೆ. ಕೇವಲ ಸಾಮಾನ್ಯ ಗೃಹಿಣಿಯಾಗಿದ್ದ ನನಗೆ ಗೆಲುವು ಸಿಗಲು ಬಿಜೆಪಿ ನೆರವು ನೀಡಿತ್ತು. ಅವರಿಗೆ ನಾನು ಎಂದಿಗೂ ಕೃತಜ್ಞಳಾಗಿರುತ್ತೇನೆ. ನಾನು ಕಾಂಗ್ರೆಸ್ ಬೆಂಬಲಿಗಳಲ್ಲ. ಎಂದಿಗೂ ಅದನ್ನು ಬೆಂಬಲಿಸುವುದೂ ಇಲ್ಲ ಎಂದು ಮಂಜುಳಾ ಹೇಳಿದರು.

ರಾಕೇಶ್ ಅವರು ನನ್ನ ಸಂಬಂಧಿ ನಿಜ. ಆದರೆ ಅವರಿಗೂ ಫ್ಲಾಟ್ಗೂ ಯಾವುದೇ ಸಂಬಂಧವಿಲ್ಲ. ಅಲ್ಲದೆ, ಕಾಂಗ್ರೆಸ್ ಜೊತೆ ನಮಗೆ ನಂಟು ಇದೆ ಎಂಬ ವರದಿಯೂ ಸುಳ್ಳು ಎಂದು ಮಂಜುಳಾ ನಂಜಾಮರಿ ಅವರ ಮಗ ಶ್ರೀಧರ್ ತಿಳಿಸಿದರು.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು











Click it and Unblock the Notifications