ರಾಜಾಜಿನಗರ ಕಾಂಗ್ರೆಸ್ ಅಭ್ಯರ್ಥಿ ಪದ್ಮಾವತಿ ವಿರುದ್ಧ ಎಫ್ಐಆರ್
ಬೆಂಗಳೂರು, ಮೇ 03: ರಾಜಾಜಿನಗರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಬಿಬಿಎಂಪಿಯ ಮಾಜಿ ಮೇಯರ್ ಪದ್ಮಾವತಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸಂಪತ್ ಕುಮಾರ್ ಎಂಬುವರು ಪದ್ಮಾವತಿ ಅವರ ವಿರುದ್ಧ 420 ಕೇಸ್ ಹಾಕಿದ್ದರು. ಪದ್ಮಾವತಿ ಅವರು ಸಾಲ ಪಡೆದು ವಾಪಸ್ ನೀಡಿಲ್ಲ ಎಂದು ಆರೋಪಿಸಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಪದ್ಮಾವತಿ, ಇದೆಲ್ಲಾ ಸುಳ್ಳು ದೂರು. ಈ ದೂರಿನ ಹಿಂದೆ ಶಾಸಕ ಸುರೇಶ್ ಕುಮಾರ್ ಅವರ ಕೈವಾಡ ಇದೆ ಎಂದು ಆರೋಪಿಸಿದ್ದಾರೆ.

ಪದ್ಮಾವತಿ ಹಾಗೂ ಸಹ ಆರೋಪಿಗಳಾದ ಜಯಪಾಲ್ ಮತ್ತು ಸಂತೋಷ್ ವಿರುದ್ಧ ಕೋರ್ಟ್ ನಲ್ಲಿ ದೂರು ದಾಖಲಾಗಿತ್ತು. ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಸೂಚನೆ ಮೇರೆಗೆ ರಾಜಾಜಿನಗರ ಪೊಲೀಸರು ಆರೋಪಿಗಳ ವಿರುದ್ಧ ಏಪ್ರಿಲ್ 26 ರಂದು ಐಪಿಸಿ ಸೆಕ್ಷನ್ 420 ವಂಚನೆ ಪ್ರಕರಣ ದಾಖಲಾಗಿತ್ತು. ಈಗ ಕೋರ್ಟ್ ಅನುಮತಿ ಮೇರೆಗೆ ಎಫ್ಐಆರ್ ದಾಖಲಿಸಲಾಗಿದೆ.
ಏನಿದು ಪ್ರಕರಣ : 2012ರಲ್ಲಿ ಸಂಪತ್ ಕುಮಾರ್ ಅವರ ಬಳಿ ಪದ್ಮಾವತಿ, ಜಯಪಾಲ್ ಮತ್ತು ಸಂತೋಷ್ 3.4 ಕೋಟಿ ಸಾಲ ಪಡೆದಿದ್ದರು. ಒಂದು ಕಂತಿನಲ್ಲಿ ಸಾಲಕ್ಕೆ 1.4 ಕೋಟಿ ಮತ್ತು ಇನ್ನೊಂದು ಕಂತಿನಲ್ಲಿ 2 ಕೋಟಿ ಹಣ ಪಡೆದಿದ್ದರು.
ಇದಕ್ಕೆ ಪ್ರತಿಯಾಗಿ ರಾಜಾಜಿನಗರದ ಎರಡನೇ ಬ್ಲಾಕ್ನಲ್ಲಿದ್ದ ಕಟ್ಟಡವನ್ನು ಸಂಪತ್ ಕುಮಾರ್ಗೆ ಮಾರಾಟ ಮಾಡಲಾಗಿತ್ತು. ಸೇಲ್ ಅಗ್ರಿಮೆಂಟ್ ಆಗಿ, 180 ದಿನ ಕಳೆದರೂ ಆರೋಪಿಗಳು ರಿಜಿಸ್ಟರ್ ಮಾಡಿಸಿರಲಿಲ್ಲ. ಇದರ ಜೊತೆಗೆ ಅದೇ ಕಟ್ಟಡದ ಮೇಲೆ ಬ್ಯಾಂಕ್ನಿಂದ 3.5 ಕೋಟಿ ಸಾಲವನ್ನೂ ಪಡೆದಿದ್ದಾರೆ ಎಂದು ಸಂಪತ್ ಕುಮಾರ್ ಅವರು ದೂರಿನಲ್ಲಿ ಹೇಳಿದ್ದಾರೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications