ದೊರೆತ ಎಲ್ಲ ವೋಟರ್ ಐಡಿಗಳು ಅಸಲಿ: ಚುನಾವಣಾ ಆಯೋಗ
ಬೆಂಗಳೂರು: ರಾಜರಾಜೇಶ್ವರಿ ನಗರದ ವಿಧಾನಸಭೆ ಕ್ಷೇತ್ರದ ಫ್ಲಾಟ್ ಒಂದರಲ್ಲಿ ದೊರೆತ ಎಲ್ಲ ಮತದಾರರ ಗುರುತಿನ ಚೀಟಿಗಳು ಅಸಲಿ ಎಂದು ಚುನಾವಣಾ ಆಯೋಗ ತಿಳಿಸಿದೆ.
ಜಾಲಹಳ್ಳಿಯ ಮನೆಯೊಂದರಲ್ಲಿ 9,896 ಗುರುತಿನ ಚೀಟಿಗಳು ಪತ್ತೆಯಾಗಿದ್ದು, ಎಲ್ಲವೂ ಅಸಲಿ ಎನ್ನುವುದು ಪ್ರಾಥಮಿಕ ಪರಿಶೀಲನೆಯಿಂದ ದೃಢಪಟ್ಟಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ಸ್ಪಷ್ಟಪಡಿಸಿದರು.
ಈ ಐಡಿಗಳ ಜತೆಗೆ ರಾಜಕೀಯ ಪಕ್ಷಗಳ ಕರಪತ್ರಗಳು ಸಹ ಇದ್ದವು. ಮತದಾರರ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಅವುಗಳನ್ನು ಇರಿಸಿರಬಹುದು. ಆದರೆ, ಕ್ಷೇತ್ರದ ಚುನಾವಣೆಯನ್ನು ರದ್ದು ಮಾಡಲು ಇವಿಷ್ಟೇ ಕಾರಣಗಳು ಸಾಕು ಎನಿಸುವುದಿಲ್ಲ ಎಂದು ತಿಳಿಸಿದರು.

ಚುನಾವಣಾ ಆಯೋಗ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ. ಇನ್ನೂ ಅನೇಕರನ್ನು ಬಂಧಿಸುವ ಸಾಧ್ಯತೆ ಇದೆ. ಸದ್ಯ ಪ್ರಕರಣದ ವಿಚಾರಣೆಯನ್ನು ನಡೆಸಲಾಗುತ್ತಿದೆ ಎಂದರು.
We are trying to reach the truth at the earliest. However, one thing is certain that nobody has broken into our system & no new voter ID cards have been made: Sanjiv Kumar, Chief Election Officer on Fake voter ID issue #KarnatakaElections2018 pic.twitter.com/FCnm4vTLy4
— ANI (@ANI) 9 May 2018
ಆದಷ್ಟು ಶೀಘ್ರವೇ ಸತ್ಯವನ್ನು ಕಂಡುಕೊಳ್ಳುವ ಪ್ರಯತ್ನ ಮಾಡುತ್ತಿದ್ದೇವೆ. ಯಾರೂ ನಮ್ಮ ವ್ಯವಸ್ಥೆಯನ್ನು ಭೇದಿಸಿಲ್ಲ ಮತ್ತು ಹೊಸ ಮತದಾರರ ಚೀಟಿಗಳನ್ನು ಸೃಷ್ಟಿಸಿಲ್ಲ ಎನ್ನುವುದು ಖಚಿತ ಎಂದು ತಿಳಿಸಿದರು.
ಯಾವುದೇ ಪಕ್ಷದ ಕೆಲವು ವಸ್ತುಗಳು ಸಿಕ್ಕಿದೆ ಎಂಬ ಕಾರಣಕ್ಕೆ ತರಾತುರಿಯ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಪ್ರಕರಣ ಸಂಬಂಧ ಕೇಂದ್ರದ ಉಪ ಚುನಾವಣಾ ಆಯುಕ್ತರು ಭೇಟಿ ನೀಡಲಿದ್ದಾರೆ ಎಂದು ಮಾಹಿತಿ ನೀಡಿದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications