ಮತದಾರರ ಪಟ್ಟಿಯಿಂದ ಅಲ್ಪಸಂಖ್ಯಾತರ ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂದು ಚುನಾವಣಾ ಅಧಿಕಾರಿಗೆ ದೂರು
2023 ರ ಅಂತಿಮ ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗವು ಜನವರಿ 15 ರಂದು ಬಿಡುಗಡೆ ಮಾಡಿದೆ.
ಬೆಂಗಳೂರು, ಫೆಬ್ರವರಿ. 15: ಶಿವಾಜಿನಗರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯಿಂದ ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಹೆಚ್ಚಿನ ಸಂಖ್ಯೆಯ ಹೆಸರುಗಳನ್ನು ಅಳಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಈ ಬಗ್ಗೆ ಬೆಂಗಳೂರು ಮಹಾಧರ್ಮಕ್ಷೇತ್ರದ (Archdiocese) ಪರವಾಗಿ ನಿಯೋಗವೂ ಮಂಗಳವಾರ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಅವರಿಗೆ ದೂರು ಸಲ್ಲಿಸಿದೆ.
ಶಿವಾಜಿನಗರ ಕ್ಷೇತ್ರದ ಒಟ್ಟು 9,195 ಹೆಸರುಗಳ ಪೈಕಿ ಸುಮಾರು 8,000 ಹೆಸರುಗಳು ಕಾಣೆಯಾಗಿದ್ದು, ಇವುಗಳಲ್ಲಿ ಎಸ್ಸಿ (ಪರಿಶಿಷ್ಟ ಜಾತಿ), ಹಿಂದುಳಿದ ವರ್ಗಗಳು ಮತ್ತು ಮುಸ್ಲಿಂ ಸಮುದಾಯಗಳ ಮತದಾರರು ಸೇರಿದ್ದಾರೆ ಎಂದು ನಿಯೋಗ ಆರೋಪಿಸಿದೆ.

"193 ಬೂತ್ಗಳಲ್ಲಿ 91 ಬೂತ್ಗಳನ್ನು ಆಯ್ದುಕೊಳ್ಳಲಾಗಿದ್ದು, ಮತದಾರರ ಪಟ್ಟಿಯಲ್ಲಿರುವ ಹೆಸರುಗಳನ್ನು ಅಳಿಸಲಾಗಿದೆ. ಈ ಬೂತ್ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರು ವಾಸಿಸುತ್ತಿದ್ದಾರೆ" ಎಂದು ದೂರಿನಲ್ಲಿ ತಿಳಿಸಲಾಗಿದೆ.
2023 ರ ಅಂತಿಮ ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗವು ಜನವರಿ 15 ರಂದು ಬಿಡುಗಡೆ ಮಾಡಿದೆ.
"ನಾವು ಈ ಬಗ್ಗೆ ತನಿಖೆ ನಡೆಸಬೇಕು ಎಂದು ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಅವರಿಗೆ ತಿಳಿಸಿದ್ದೇವೆ. ಶಿವಾಜಿನಗರ ಕ್ಷೇತ್ರದಲ್ಲಿ 9 ಸಾವಿರ ಹೆಸರು ನಾಪತ್ತೆಯಾಗಿದೆ. ಈ ಹೆಸರುಗಳು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮತದಾರರದ್ದು ಎಂದು ಬೆಂಗಳೂರು ಮಹಾಧರ್ಮಕ್ಷೇತ್ರ ವಕ್ತಾರ ಜೆಎ ಕಾಂತರಾಜ್ ತಿಳಿಸಿದ್ದಾರೆ.

ಇದರ ಜೊತೆಗೆ ಕೋರಮಂಗಲದ ಮತದಾರರ ಪಟ್ಟಿಯಲ್ಲೂ ಅವರ ಹೆಸರು ನಾಪತ್ತೆಯಾಗಿದೆ ಎಂದು ಕಾಂತರಾಜ್ ಆರೋಪಿಸಿದ್ದಾರೆ.
" ಕೋರಮಂಗಲದಲ್ಲಿ ನನ್ನ ಹೆಸರ, ನ್ನ ಹೆಂಡತಿಯ ಹೆಸರೂ ಕಾಣೆಯಾಗಿದೆ. ನಾನು 20 ವರ್ಷಗಳಿಂದ ಇಲ್ಲಿಯೇ ಇದ್ದೇನೆ. ಇದನ್ನು ಸ್ವತಃ ಮುಖ್ಯ ಚುನಾವಣಾಧಿಕಾರಿ ಪರಿಶೀಲಿಸಿದ್ದಾರೆ. ಕೋರಮಂಗಲದಲ್ಲಿ 20 ವರ್ಷಗಳಿಂದ ತೆರಿಗೆ ಕಟ್ಟುತ್ತಿದ್ದೇನೆ. ಮತದಾನದ ದಿನವೇ ಇದು ಗಮನಕ್ಕೆ ಬಂದಿದ್ದರೆ ನಾನು ಸುಮ್ಮನೆ ಇರಬೇಕಾಗಿತ್ತು. ಹೀಗೆ ಈಗ ಸಾವಿರಾರು ಜನರು ಆ ಅವಕಾಶವನ್ನು ಕಳೆದುಕೊಂಡಿರಬಹುದು" ಎಂದು ಹೇಳಿದ್ದಾರೆ.
ಇನ್ನು, ಕಳೆದ ತಿಂಗಳು ಶಿವಾಜಿನಗರದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ತಮ್ಮ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ 9,195 ಮತದಾರರನ್ನು, ಅದರಲ್ಲೂ8000 ಅಲ್ಪಸಂಖ್ಯಾತ ಸಮುದಾಯಗಳ ಮತದಾರರನ್ನು ಮರು ಪರಿಶೀಲಿಸುವ ನಿರ್ಧಾರವನ್ನು ಪ್ರಶ್ನಿಸಿದ್ದರು. ಜನವರಿ 15 ರಂದು ಕ್ಷೇತ್ರದ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಇದರಲ್ಲಿ 9,195 ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲು ತಯಾರಿ ನಡೆಸಲಾಗುತ್ತಿದೆ . ಅಂತಿಮ ಮತದಾರರ ಪಟ್ಟಿಯನ್ನು ಘೋಷಿಸಿದ ನಂತರವೂ ಮತ್ತೆ 9,195 ಮತದಾರರನ್ನು ಪಟ್ಟಿಯಿಂದ ಕೈಬಿಡಲು ನೋಟಿಸ್ ನೀಡಲಾಗಿದೆ ಎಂದು ಆರೋಪಿಸಿ, ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications