ವಿಧಾನಸಭಾ ಚುನಾವಣೆ: 25 ಸ್ಥಾನಗಳಲ್ಲಿ ಟಿಕೆಟ್ ನೀಡಿ ಎಂದು ಬ್ರಾಹ್ಮಣ ಮಹಾಸಭಾದ ಒತ್ತಾಯ
ಬ್ರಾಹ್ಮಣ ಸಮುದಾಯ ಹೆಚ್ಚು ಇರುವ ಸುಮಾರು 25 ವಿಧಾನಸಭಾ ಕ್ಷೇತ್ರದಲ್ಲಿ ಬ್ರಾಹ್ಮಣರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯ .
ಬೆಂಗಳೂರು, ಫೆಬ್ರವರಿ. 12: ವಿಧಾನಸಭಾ ಚುನಾವಣೆಗಳು ಹತ್ತಿರವಾಗುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗುತ್ತಾರೆ. ತಮ್ಮ ಸಮುದಾಯವರಿಗೆ ಟಿಕೆಟ್ ನೀಡಿ ಎಂದು ಹಲವು ಸಮುದಾಯಗಳು ಸಹ ರಾಜಕೀಯ ಪಕ್ಷಗಳಿಗೆ ಮನವಿ ಮಾಡುವುದು ಸಹಜ. ಹೀಗೆಯೇ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಕೂಡ ತಮ್ಮ ಬೇಡಿಕೆಯನ್ನು ಮುಂದಿಟ್ಟಿದೆ.
ಸಿಲಿಕಾನ್ ಸಿಟಿಯ ಜಯನಗರ, ಬಸವನಗುಡಿ, ರಾಜಾಜಿನಗರ, ಪದ್ಮನಾಭನಗರ, ಚಿಕ್ಕಪೇಟೆ, ಮಲ್ಲೇಶ್ವರ ಸೇರಿದಂತೆ 25 ವಿಧಾನಸಭಾ ಕ್ಷೇತ್ರಗಳಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಟಿಕೆಟ್ ನೀಡಬೇಕು ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಒತ್ತಾಯಿಸಿದೆ.
ನಗರದಲ್ಲಿ ನಡೆದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ಸಮುದಾಯದ ಮುಖಂಡರು ಭಾಗವಹಿಸಿದ್ದು, ಬ್ರಾಹ್ಮಣ ಸಮುದಾಯ ಹೆಚ್ಚು ಇರುವ ಸುಮಾರು 25 ವಿಧಾನಸಭಾ ಕ್ಷೇತ್ರದಲ್ಲಿ ಬ್ರಾಹ್ಮಣರಿಗೆ ಟಿಕೆಟ್ ನೀಡಬೇಕೆಂದು ಸಭೆಯಲ್ಲಿ ಒತ್ತಾಯಿಸಲಾಗಿದೆ.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅದರ ಅಧ್ಯಕ್ಷ ಅಶೋಕ್ ಹಾರನಹಳ್ಳಿ ಅವರ ನೇತೃತ್ವದ ಕರ್ನಾಟಕದ ಮಾಜಿ ಅಡ್ವೊಕೇಟ್ ಜನರಲ್ ಈ ವಿಷಯದ ಬಗ್ಗೆ ನಿರ್ಣಯವನ್ನು ಅಂಗೀಕರಿಸಿತು.
"ಸಮುದಾಯದವರು ತಮ್ಮ ಸಂಖ್ಯೆ ಹೆಚ್ಚಿರುವ ಅನೇಕ ವಿಧಾನಸಭಾ ಕ್ಷೇತ್ರಗಳಲ್ಲಿ ರಾಜಕೀಯ ಪಕ್ಷಗಳು ಬ್ರಾಹ್ಮಣರನ್ನು ಅಭ್ಯರ್ಥಿಗಳಾಗಿ ಪರಿಗಣಿಸುತ್ತಿಲ್ಲ ಎಂದು ಭಾವಿಸಿದ್ದಾರೆ. ಹೀಗಾಗಿ ಮುಂಬರುವ ದಿನಗಳಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸಮುದಾಯದ ಅರ್ಹ ಅಭ್ಯರ್ಥಿಗಳಿಗೆ ಟಿಕೆಟ್ ಸಿಗುವಂತೆ ನೋಡಿಕೊಳ್ಳಬೇಕು ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ್ ಹಾರನಹಳ್ಳಿ ಹೇಳಿದ್ದಾರೆ.
ಬೆಂಗಳೂರಿನ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಬ್ರಾಹ್ಮಣ ಮತದಾರರು ಹೆಚ್ಚಿದ್ದಾರೆ. ಹಾಗಾಗಿ ಭಾರತೀಯ ಜನತಾ ಪಕ್ಷವಷ್ಟೇ ಅಲ್ಲ, ಎಲ್ಲ ಪಕ್ಷಗಳೂ ಯಾವುದೇ ತಾರತಮ್ಯವಿಲ್ಲದೆ ಬ್ರಾಹ್ಮಣರಿಗೆ ರಾಜಕೀಯ ಅಧಿಕಾರ ನೀಡಲು ಮುಂದಾಗಬೇಕು ಎಂದು ಮಹಾಸಭಾ ಸದಸ್ಯರೊಬ್ಬರು ತಿಳಿಸಿದ್ದಾರೆ.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳ ಸಮುದಾಯದ ಮುಖಂಡರು, ಸಭಾದ ಉಪಾಧ್ಯಕ್ಷ ಸಿ ಕೆ ರಾಮಮೂರ್ತಿ, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಬಟ್ ಉಪಸ್ಥಿತರಿದ್ದರು.












Click it and Unblock the Notifications