Assembly Session: ಇಂದಿನಿಂದ ಹೈವೋಲ್ಟೇಜ್ ಅಧಿವೇಶನ, ಹಗರಣಗಳ ಚರ್ಚೆಗೆ ಬಿಜೆಪಿ ಸಜ್ಜು: 'ಸಿಎಂ'ಗೆ ಅಗ್ನಿಪರೀಕ್ಷೆ
ಬೆಂಗಳೂರು, ಜುಲೈ 15: ಕರ್ನಾಟಕದಲ್ಲಿ ವಿಧಾನಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ (Assembly Monsoon Session) ಇಂದು ಜುಲೈ 15 ಸೋಮವಾರದಿಂದ ಆರಂಭವಾಗಲಿದೆ. ಅಧಿಕಾರಕ್ಕೆ ಬಂದ 14 ತಿಂಗಳಲ್ಲಿ ವಿವಿಧ ಹಗರಣ, ಸಚಿವರ ಮೇಲೆ ನೇರ ಆರೋಪಗಳಿಗೆ ಸಾಕ್ಷಿಯಾದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಪ್ಲಾನ್ ಮಾಡಿಕೊಂಡಿದೆ.
ಪರಿಶಿಷ್ಟ ಪಂಗಡಕ್ಕೆ (ಎಸ್ಟಿ) ಕಲ್ಯಾಣಕ್ಕೆ ಸಿಮಿತವಾದ ವಾಲ್ಮಿಕಿ ನಿಗಮದ ಹಗರಣ, ಮುಡಾ ಹಗರಣ, ಸಚಿವ ನಾಗೇಂದ್ರ ತಲೆದಂಡ ಮತ್ತು ಬಂಧನ, ಅಧಿಕಾರಿಗಳ ವರ್ಗಾವಣೆ, ಬೆಲೆ ಏರಿಕೆ ಸೇರಿದಂತೆ ಹಲವು ಮಹತ್ವದ ವಿಚಾರಗಳನ್ನು ಬಿಜೆಪಿಗೆ ಚರ್ಚೆಗೆ ತರಲಿದೆ. ಸರ್ಕಾರದ ಮೇಲೆ ಮುಗಿಬೀಳಲಿದೆ.

ವಾಲ್ಮಿಕ ಅಭಿವೃದ್ಧಿ ಹಗರಣ, ಅಧಿಕಾರಿ ಆತ್ಮಹತ್ಯೆ ಬೆನ್ನಲ್ಲೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಹಗರಣವು ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಇದು ನೇರವಾಗಿ ಸಿಎಂ ಸಿದ್ದರಾಮಯ್ಯ ಅವರನ್ನೇ ಸುತ್ತಿಕೊಂಡಿದೆ. ಹೀಗಾಗಿ ಈ ಅಧಿವೇಶನ ಸಿಎಂ ಸಿದ್ದರಾಮಯ್ಯಗೆ ಅಗ್ನಿ ಪರೀಕ್ಷೆ ಎನ್ನಬಹುದಾಗಿದೆ.
ಬೆಲೆ ಏರಿಕೆಯು ಅಧಿವೇಶನದ ಪ್ರಮುಖ ವಿಷಯ?
ಇಂಧನ ದರ ಏರಿಕೆ, ಹಾಲಿನ ಬೆಲೆ ಬೆಲೆ, ವಿದ್ಯುತ್ ಮತ್ತು ನೀರಿನ ದರ ಏರಿಕೆ ಪ್ರಸ್ತಾವನೆ, ಸಾರ್ವಜನಿಕ ಸಾರಿಗೆ ಪ್ರಯಾಣ ದರಿ ಏರಿಕೆಯ ಮನವಿ ವಿಚಾರಗಳು ಸಹ ಅಧಿವೇಶನದಲ್ಲಿ ಬಿಜೆಪಿ ಮುನ್ನೆಲೆಗೆ ತರಲಿದೆ. ಬೆಲೆ ಏರಿಕೆ ಬಗ್ಗೆ ಈಗಾಗಲೇ ಬಿಜೆಪಿ ಒಂದು ಸುತ್ತಿನ ಹೋರಾಟ ಮಾಡಿತ್ತು. ಎಸ್ಸಿ ಎಸ್ಟಿಗೆ ಅಭಿವೃದ್ಧಿಗೆ ಮೀಸಲಾದ ಅಪಾರ ಹಣವನ್ನು ಸರ್ಕಾರ ಗ್ಯಾರೆಂಟಿ ಯೋಜನೆಗಳಿಗೆ ಬಳಸಿಕೊಂಡಿರುವುದು ಮುನ್ನೆಲೆಗೆ ಬರುವ ಸಾಧ್ಯತೆ ಇದೆ.
ಸಿಎಂ ಸಿದ್ದರಾಮಯ್ಯ ಸೂಚನೆ ಏನಿದೆ?
ಇದೆಲ್ಲ ಗಮನಿಸಿರುವ ಸಿಎಂ ಸಿದ್ದರಾಮಯ್ಯ, ಅಧಿವೇಶನದಲ್ಲಿ ಬಿಜೆಪಿ ಎತ್ತುವ ಚರ್ಚೆಗಳಿಗೆ ಆಯಾ ವಿಷಯಗಳಿಗೆ ಅನುಗುಣವಾಗಿ ತಕ್ಕ ಉತ್ತರ ನೀಡಲು ನಿಗದಿತ ಸಚಿವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅಲ್ಲದೇ ಬಿಜೆಪಿ ಅವಧಿಯಲ್ಲಿ ಆಗಿರುವ ಹಗರಣ, ಭ್ರಷ್ಟಾಚಾರ ಪ್ರಸ್ತಾಪಿಸಿ ತಕ್ಕ ಉತ್ತರ ಕೊಡುವಂತೆ ಸಚಿವರಿಗೆ ನಿರ್ದೇಶಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಮೇಲಿನ ಎಲ್ಲ ಅಂಶಗಳಿಂದ ಈ ಭಾರಿ ಮುಂಗಾರು ರಾಜ್ಯ ವಿಧಾನಮಂಡಲ ಅಧಿವೇಶನ ಹೈವೋಲ್ಟೇಜ್ ಅಧಿವೇಶನ ಆಗುವುದರಲ್ಲಿ ಸಂಶಯವಿಲ್ಲ. ಸಾರ್ವಜನಿಕರ ಚಿತ್ತವು ಈ ಅಧಿವೇಶನದತ್ತ ನೆಟ್ಟಿದೆ.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price












Click it and Unblock the Notifications