ವಿಧಾನಮಂಡಲ ಅಧಿವೇಶನ ಆರಂಭ: ಸರ್ಕಾರದ ಮೇಲೆ ಮುಗಿಬೀಳಲಿರುವ ವಿಪಕ್ಷ
ಬೆಂಗಳೂರು, ಮಾರ್ಚ್ 4: ಇಂದಿನಿಂದ ಕರ್ನಾಟಕ ವಿಧಾನ ಮಂಡಲದ ಬಜೆಟ್ ಅಧಿವೇಶನ ಪ್ರಾರಂಭವಾಗಲಿದ್ದು, ಸುಮಾರು ಮಾರ್ಚ್ ತಿಂಗಳ ಅಂತ್ಯದವರೆಗೆ ಈ ಅಧಿವೇಶನ ನಡೆಯಲಿದೆ.
ಸೋಮವಾರ (ಮಾ.8) ರಂದು ಸಿಎಂ ಯಡಿಯೂರಪ್ಪ ಅವರು ರಾಜ್ಯದ ಬಜೆಟ್ ಮಂಡನೆ ಮಾಡಲಿದ್ದಾರೆ. ಅದಕ್ಕೂ ಮುನ್ನ ಗುರುವಾರ ಮತ್ತು ಶುಕ್ರವಾರ ವಿಧಾನಸಭೆ ಹಾಗೂ ವಿಧಾನ ಪರಿಷತ್ ನಲ್ಲಿ "ಒಂದು ರಾಷ್ಟ್ರ ಒಂದು ಚುನಾವಣೆ' ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ.
ವಿಧಾನಸಭೆ ಕಲಾಪ ಪ್ರಾರಂಭವಾದ ಕೂಡಲೇ "ಒಂದು ರಾಷ್ಟ್ರ ಒಂದು ಚುನಾವಣೆ' ಬಗ್ಗೆ ಚರ್ಚೆಗೆ ಅವಕಾಶ ಕೊಡಲಾಗಿದೆ. ಮೇಲ್ಮನೆಯಲ್ಲಿ ಮೊದಲು ಅಗಲಿದ ಗಣ್ಯರಿಗೆ ಸಂತಾಪ ಸೂಚಿಸುವ ಕಾರ್ಯ ಕಲಾಪ ನಡೆಯುತ್ತದೆ.

ಆ ಬಳಿಕ ಪ್ರಶ್ನೋತ್ತರ ಮತ್ತು ನಿಯಮ 330ರ ಪ್ರಕಾರ ಗಮನ ಸೆಳೆಯುವ ಸೂಚನೆ, ನಂತರ "ಒಂದು ರಾಷ್ಟ್ರ ಮತ್ತು ಚುನಾವಣೆ' ಬಗ್ಗೆ ಚರ್ಚೆ ನಡೆಯಲಿದೆ. ಈ ಚರ್ಚೆ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಬಗ್ಗೆ ಮಾತ್ರ ಇರಲಿದೆ. ರಾಜ್ಯ ಚುನಾವಣೆ ಆಯೋಗ ನಡೆಸುವ ಚುನಾವಣೆ ಬಗ್ಗೆ ಚರ್ಚೆ ಆಗುವುದಿಲ್ಲ ಎಂದು ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ಸ್ಪಷ್ಟಪಡಿಸಿದ್ದಾರೆ.
ಇತ್ತ ಕಲಾಪದಲ್ಲಿ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಸಿಡಿ ಪ್ರಕರಣ ಪ್ರಸ್ತಾಪವಾಗುವ ಸಾಧ್ಯತೆ ಇದೆ. ಈಗಾಗಲೇ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟರೂ ಅಧಿವೇಶನದಲ್ಲಿ ವಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರದ ಮೇಲೆ ಮುಗಿಬೀಳುವ ಸಾಧ್ಯತೆ ಇದೆ. ರಾಸಲೀಲೆ ಸಿಡಿ ಕುರಿತು ಪ್ರಸ್ತಾಪ ಮಾಡಿ ಸರ್ಕಾರಕ್ಕೆ ಮುಜುಗರ ತಂದೊಡ್ಡುವ ಯೋಚನೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮಾಡಿವೆ.

ರಮೇಶ್ ಜಾರಕಿಹೊಳಿ ಸಿಡಿ ವಿಚಾರ ಪ್ರಸ್ತಾಪಿಸಿ ಸರ್ಕಾರಕ್ಕೆ ಮುಜುಗರ ತರುವ ತಂತ್ರವಿದ್ದು, ಆ ಮೂಲಕ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಬಿಜೆಪಿಗೆ ಹಿನ್ನಡೆ ಮಾಡುವುದಾಗಿದೆ. ಸದ್ಯ ನಡೆಯುತ್ತಿರುವ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮುಜುಗರ ಉಂಟುಮಾಡುವ ಮಾಡುವುದಾಗಿದೆ.
ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣವನ್ನು ತನಿಖೆಗೆ ಒತ್ತಾಯಿಸಿ ಸಿಎಂ ಯಡಿಯೂರಪ್ಪರನ್ನು ಇಕ್ಕಟ್ಟಿಗೆ ಸಿಲುಕಿಸಬಹುದು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications