ಪತ್ರಕರ್ತ ರವಿಬೆಳಗೆರೆಗೆ ಒಂದು ವರ್ಷ ಜೈಲು: ಕೋಳಿವಾಡ ಆದೇಶ
ಬೆಂಗಳೂರು, ಜೂನ್ 22: ಶಾಸಕಾಂಗ ಮತ್ತು ಹಾಲಿ ಸ್ಪೀಕರ್ ಕೆ.ಬಿ.ಕೋಳಿವಾಡ ಅವರ ಕುರಿತು ಮಾನಹಾನಿಯಾಗುವಂಥ ಲೇಖನ ಬರೆದಿದ್ದ ಕಾರಣಕ್ಕೆ ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆ ಸೇರಿದಂತೆ ಇಬ್ಬರು ಪತ್ರಕರ್ತರಿಗೆ ಒಂದು ವರ್ಷಗಳ ಕಾಲ ಜೈಲು ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸುವಂತೆ ವಿಧಾನ ಸಭಾ ಸ್ಪೀಕರ್ ಕೋಳಿವಾಡ ಆದೇಶಿಸಿದ್ದಾರೆ.
'ಶಾಸಕಾಂಗದ ಕುರಿತು ಮಾನಹಾನಿಯಾಗುವಂಥ ಲೇಖನ ಪ್ರಕಟಿಸಿದ ಕಾರಣಕ್ಕೆ ಟ್ಯಾಬ್ಲಾಯ್ಡ್ ಪತ್ರಿಕೆಯ ಇಬ್ಬರು ಪತ್ರಕರ್ತರಿಗೆ ಶಿಕ್ಷೆ ನೀಡಲು ರಾಜ್ಯ ವಿಧಾನ ಸಭೆ ನಿರ್ಧರಿಸಿದೆ' ಎಂದು ಕೋಳಿವಾಡ ಹೇಳಿದರು. ಪ್ರಿವಿಲೇಜ್ ಸಮಿತಿ ನೀಡಿದ ಶಿಫಾರಸ್ಸಿನನ್ವಯ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇಬ್ಬರು ಪತ್ರಕರ್ತರಿಗೂ ತಲಾ 10,000 ರೂ.ದಂಡ ವಿಧಿಸಲಾಗಿದೆ.
'ಹಾಯ್ ಬೆಂಗಳೂರು' ಪತ್ರಿಕೆಯ ಸಂಪಾದಕ ರವಿ ಬೆಳಗೆರೆ ಮತ್ತು 'ಯಲಹಂಕ ವಾಯ್ಸ್' ಪತ್ರಿಕೆಯ ಸಂಪಾದಕ ಅನಿಲ್ ರಾಜು ಅವರನ್ನು ಬಂಧಿಸುವಂತೆ ಕೋಳಿವಾಡ ಆದೇಶಿಸಿದ್ದಾರೆ.

'ಹಾಯ್ ಬೆಂಗಳೂರು' ಪತ್ರಿಕೆಯ 2014 ರ ಸೆಪ್ಟೆಂಬರ್ ಸಂಚಿಕೆಯಲ್ಲಿ ಶಾಸಕಾಂಗದ ಕುರಿತು ಮತ್ತು ಕಾಂಗ್ರೆಸ್ ಮುಖಂಡ ಕೋಳಿವಾಡ ಕುರಿತು ಮಾನಹಾನಿಯಾಗುವಂಥ ಲೇಖನವನ್ನು ರವಿಬೆಳಗೆರೆಯವರು ಬರೆದಿದ್ದರು. ಹಾಗೆಯೇ ಅನಿಲ್ ರಾಜು ಅವರು ಸಹ ತಮ್ಮ ಪತ್ರಿಕೆಯಲ್ಲಿ ಅಂಥದೇ ಲೇಖನವನ್ನು ಬರೆದಿದ್ದರು.
ಇಬ್ಬರಿಗೂ ಒಂದು ವರ್ಷ ಜೈಲು ಶಿಕ್ಷೆ, ಜೊತೆಗೆ 10,000 ರೂ. ದಂಡ ವಿಧಿಸಲಾಗಿದ್ದು, ದಂಡ ಪಾವತಿಸಲು ವಿಫಲರಾದರೆ ಇನ್ನೂ ಆರು ತಿಂಗಳು ಹೆಚ್ಚುವರಿ ಶಿಕ್ಷೆ ನೀಡಲಾಗುವುದು ಎಂದು ಕೋಳಿವಾಡ ತಿಳಿಸಿದರು.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD









Click it and Unblock the Notifications