ಶಾಸಕರಿಗೆ ಸ್ಪೀಕರ್ ಕಾಗೇರಿ ಎಚ್ಚರಿಕೆ: ವಿಪಕ್ಷಗಳಿಂದ ತೀವ್ರ ಆಕ್ರೋಶ
ಬೆಂಗಳೂರು, ಜನವರಿ 30: ಶಾಸಕರಿಗೆ ಸ್ಪೀಕರ್ ಕಾಗೇರಿ ಎಚ್ಚರಿಕೆ ನೀಡುವ ರೀತಿಯ ಆದೇಶವನ್ನು ಹೊರಡಿಸಿದ್ದು, ಇದು ಭಾರಿ ವಿವಾದ ಸೃಷ್ಟಿಸಿದೆ.
ಜಂಟಿ ಅಧಿವೇಶನದ ವೇಳೆ ರಾಜ್ಯಪಾಲರ ಭಾಷಣದ ವೇಳೆ ಯಾವ ಶಾಸಕರೂ ಗದ್ದಲ ಎಬ್ಬಿಸುವಂತಿಲ್ಲ, ಕ್ರಿಯಾಲೋಪ ಎತ್ತಿ ಭಾಷಣಕ್ಕೆ ಅಡ್ಡಿಪಡಿಸುವಂತಿಲ್ಲ, ಹಾಗೊಂದು ವೇಳೆ ಮಾಡಿದರೆ ಆ ಶಾಸಕರನ್ನು ಅಮಾನತ್ತು ಮಾಡಲಾಗುತ್ತದೆ ಎಂದು ಸ್ಪೀಕರ್ ಕಾಗೇರಿ ಆದೇಶ ಹೊರಡಿಸಿದ್ದಾರೆ.
ಕೇರಳದಲ್ಲಿ ಈಗಾಗಲೇ ಅಧಿವೇಶನ ಸಂದರ್ಭದಲ್ಲಿ ರಾಜ್ಯಪಾಲರ ಭಾಷಣದ ವೇಳೆ ವಿಪಕ್ಷಗಳು ಫಲಕಗಳನ್ನು ಪ್ರದರ್ಶಿಸಿ ಅಡ್ಡಿಪಡಿಸಿವೆ. ಇದೇ ಘಟನೆ ರಾಜ್ಯದಲ್ಲಿ ಮರುಕಳಿಸಬಾರದೆಂಬ ಮುಂಜಾಗೃತೆಯಿಂದ ಕಾಗೇರಿ ಅವರು ಈ ಆದೇಶ ಹೊರಡಿಸಿದ್ದಾರೆ.

ವಿಪಕ್ಷಗಳು ಸಿಎಎ-ಎನ್ಆರ್ಸಿ ಸಂಬಂಧಿಸಿದಂತೆ ಹಾಗೂ ಇನ್ನಿತರೆ ವಿಷಯಗಳ ಬಗ್ಗೆ ಭಾರಿ ಪ್ರತಿಭಟನೆಗೆ ಸಜ್ಜಾಗಿವೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿಲುವಳಿ ಮಂಡಿಸುವುದಾಗಿ ಸಿದ್ದರಾಮಯ್ಯ ಈಗಾಗಲೇ ಹೇಳಿದ್ದಾರೆ. ಹೀಗಾಗಿ ಸ್ಪೀಕರ್ ಕಾಗೇರಿ ಈ ಆದೇಶ ಹೊರಡಿಸಿದ್ದಾರೆ.
ವಿಧಾನಸಭೆ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿ ಹೊರಡಿಸಿರುವ ಪ್ರಕಟಣೆಯಲ್ಲಿ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ವೇಳೆ ಕರ್ನಾಟಕ ವಿಧಾನಪರಿಷತ್ನ ನಿಯಮ 26ರ ಪ್ರಕಾರ ರಾಜ್ಯಪಾಲರು ಬರುವಾಗ ಇಲ್ಲವೇ ಹೊರಡುವಾಗ ಅಥವಾ ಭಾಷಣದ ಸಂದರ್ಭದಲ್ಲಿ ಯಾವುದೇ ಸದಸ್ಯರು ಕ್ರಿಯಾಲೋಪ ಎತ್ತುವಂತಿಲ್ಲ. ಫೆಬ್ರವರಿ 17 ರಂದು ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡುವರಿದ್ದಾರೆ.
ರಾಜ್ಯಪಾಲರ ಭಾಷಣದ ಮುನ್ನಾ ಭಾಷಣ ನಡೆಯುವಾಗ ಹಾಗೂ ನಿರ್ಗಮಿಸುವಾಗ ಶಾಸಕರು ಯಾವುದೇ ಪ್ರತಿಭಟನೆ ಮಾಡುವಂತಿಲ್ಲ ಎಂದು ಸೂಚನೆ ಹೊರಡಿಸಲಾಗಿದೆ. ಆದರೆ ರಾಜ್ಯಪಾಲರ ಭಾಷಣದ ವೇಳೆಯೇ ಪ್ರತಿಭಟನೆ ನಡೆಸಿ ಅಸಮಾಧಾನ ಪ್ರಕಟಮಾಡುವ ಉದ್ದೇಶವನ್ನು ವಿಪಕ್ಷ ಶಾಸಕರು ಹೊಂದಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications