ಶಾಸಕರಿಗೆ ಸ್ಪೀಕರ್ ಕಾಗೇರಿ ಎಚ್ಚರಿಕೆ: ವಿಪಕ್ಷಗಳಿಂದ ತೀವ್ರ ಆಕ್ರೋಶ
ಬೆಂಗಳೂರು, ಜನವರಿ 30: ಶಾಸಕರಿಗೆ ಸ್ಪೀಕರ್ ಕಾಗೇರಿ ಎಚ್ಚರಿಕೆ ನೀಡುವ ರೀತಿಯ ಆದೇಶವನ್ನು ಹೊರಡಿಸಿದ್ದು, ಇದು ಭಾರಿ ವಿವಾದ ಸೃಷ್ಟಿಸಿದೆ.
ಜಂಟಿ ಅಧಿವೇಶನದ ವೇಳೆ ರಾಜ್ಯಪಾಲರ ಭಾಷಣದ ವೇಳೆ ಯಾವ ಶಾಸಕರೂ ಗದ್ದಲ ಎಬ್ಬಿಸುವಂತಿಲ್ಲ, ಕ್ರಿಯಾಲೋಪ ಎತ್ತಿ ಭಾಷಣಕ್ಕೆ ಅಡ್ಡಿಪಡಿಸುವಂತಿಲ್ಲ, ಹಾಗೊಂದು ವೇಳೆ ಮಾಡಿದರೆ ಆ ಶಾಸಕರನ್ನು ಅಮಾನತ್ತು ಮಾಡಲಾಗುತ್ತದೆ ಎಂದು ಸ್ಪೀಕರ್ ಕಾಗೇರಿ ಆದೇಶ ಹೊರಡಿಸಿದ್ದಾರೆ.
ಕೇರಳದಲ್ಲಿ ಈಗಾಗಲೇ ಅಧಿವೇಶನ ಸಂದರ್ಭದಲ್ಲಿ ರಾಜ್ಯಪಾಲರ ಭಾಷಣದ ವೇಳೆ ವಿಪಕ್ಷಗಳು ಫಲಕಗಳನ್ನು ಪ್ರದರ್ಶಿಸಿ ಅಡ್ಡಿಪಡಿಸಿವೆ. ಇದೇ ಘಟನೆ ರಾಜ್ಯದಲ್ಲಿ ಮರುಕಳಿಸಬಾರದೆಂಬ ಮುಂಜಾಗೃತೆಯಿಂದ ಕಾಗೇರಿ ಅವರು ಈ ಆದೇಶ ಹೊರಡಿಸಿದ್ದಾರೆ.

ವಿಪಕ್ಷಗಳು ಸಿಎಎ-ಎನ್ಆರ್ಸಿ ಸಂಬಂಧಿಸಿದಂತೆ ಹಾಗೂ ಇನ್ನಿತರೆ ವಿಷಯಗಳ ಬಗ್ಗೆ ಭಾರಿ ಪ್ರತಿಭಟನೆಗೆ ಸಜ್ಜಾಗಿವೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿಲುವಳಿ ಮಂಡಿಸುವುದಾಗಿ ಸಿದ್ದರಾಮಯ್ಯ ಈಗಾಗಲೇ ಹೇಳಿದ್ದಾರೆ. ಹೀಗಾಗಿ ಸ್ಪೀಕರ್ ಕಾಗೇರಿ ಈ ಆದೇಶ ಹೊರಡಿಸಿದ್ದಾರೆ.
ವಿಧಾನಸಭೆ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿ ಹೊರಡಿಸಿರುವ ಪ್ರಕಟಣೆಯಲ್ಲಿ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ವೇಳೆ ಕರ್ನಾಟಕ ವಿಧಾನಪರಿಷತ್ನ ನಿಯಮ 26ರ ಪ್ರಕಾರ ರಾಜ್ಯಪಾಲರು ಬರುವಾಗ ಇಲ್ಲವೇ ಹೊರಡುವಾಗ ಅಥವಾ ಭಾಷಣದ ಸಂದರ್ಭದಲ್ಲಿ ಯಾವುದೇ ಸದಸ್ಯರು ಕ್ರಿಯಾಲೋಪ ಎತ್ತುವಂತಿಲ್ಲ. ಫೆಬ್ರವರಿ 17 ರಂದು ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡುವರಿದ್ದಾರೆ.
ರಾಜ್ಯಪಾಲರ ಭಾಷಣದ ಮುನ್ನಾ ಭಾಷಣ ನಡೆಯುವಾಗ ಹಾಗೂ ನಿರ್ಗಮಿಸುವಾಗ ಶಾಸಕರು ಯಾವುದೇ ಪ್ರತಿಭಟನೆ ಮಾಡುವಂತಿಲ್ಲ ಎಂದು ಸೂಚನೆ ಹೊರಡಿಸಲಾಗಿದೆ. ಆದರೆ ರಾಜ್ಯಪಾಲರ ಭಾಷಣದ ವೇಳೆಯೇ ಪ್ರತಿಭಟನೆ ನಡೆಸಿ ಅಸಮಾಧಾನ ಪ್ರಕಟಮಾಡುವ ಉದ್ದೇಶವನ್ನು ವಿಪಕ್ಷ ಶಾಸಕರು ಹೊಂದಿದ್ದಾರೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications