Get Updates
Get notified of breaking news, exclusive insights, and must-see stories!

ಶಾಸಕರಿಗೆ ಸ್ಪೀಕರ್‌ ಕಾಗೇರಿ ಎಚ್ಚರಿಕೆ: ವಿಪಕ್ಷಗಳಿಂದ ತೀವ್ರ ಆಕ್ರೋಶ

ಬೆಂಗಳೂರು, ಜನವರಿ 30: ಶಾಸಕರಿಗೆ ಸ್ಪೀಕರ್ ಕಾಗೇರಿ ಎಚ್ಚರಿಕೆ ನೀಡುವ ರೀತಿಯ ಆದೇಶವನ್ನು ಹೊರಡಿಸಿದ್ದು, ಇದು ಭಾರಿ ವಿವಾದ ಸೃಷ್ಟಿಸಿದೆ.

ಜಂಟಿ ಅಧಿವೇಶನದ ವೇಳೆ ರಾಜ್ಯಪಾಲರ ಭಾಷಣದ ವೇಳೆ ಯಾವ ಶಾಸಕರೂ ಗದ್ದಲ ಎಬ್ಬಿಸುವಂತಿಲ್ಲ, ಕ್ರಿಯಾಲೋಪ ಎತ್ತಿ ಭಾಷಣಕ್ಕೆ ಅಡ್ಡಿಪಡಿಸುವಂತಿಲ್ಲ, ಹಾಗೊಂದು ವೇಳೆ ಮಾಡಿದರೆ ಆ ಶಾಸಕರನ್ನು ಅಮಾನತ್ತು ಮಾಡಲಾಗುತ್ತದೆ ಎಂದು ಸ್ಪೀಕರ್ ಕಾಗೇರಿ ಆದೇಶ ಹೊರಡಿಸಿದ್ದಾರೆ.

ಕೇರಳದಲ್ಲಿ ಈಗಾಗಲೇ ಅಧಿವೇಶನ ಸಂದರ್ಭದಲ್ಲಿ ರಾಜ್ಯಪಾಲರ ಭಾಷಣದ ವೇಳೆ ವಿಪಕ್ಷಗಳು ಫಲಕಗಳನ್ನು ಪ್ರದರ್ಶಿಸಿ ಅಡ್ಡಿಪಡಿಸಿವೆ. ಇದೇ ಘಟನೆ ರಾಜ್ಯದಲ್ಲಿ ಮರುಕಳಿಸಬಾರದೆಂಬ ಮುಂಜಾಗೃತೆಯಿಂದ ಕಾಗೇರಿ ಅವರು ಈ ಆದೇಶ ಹೊರಡಿಸಿದ್ದಾರೆ.

Karnataka Assembly Speaker Vishweshwar Hegde Kageri Order

ವಿಪಕ್ಷಗಳು ಸಿಎಎ-ಎನ್‌ಆರ್‌ಸಿ ಸಂಬಂಧಿಸಿದಂತೆ ಹಾಗೂ ಇನ್ನಿತರೆ ವಿಷಯಗಳ ಬಗ್ಗೆ ಭಾರಿ ಪ್ರತಿಭಟನೆಗೆ ಸಜ್ಜಾಗಿವೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿಲುವಳಿ ಮಂಡಿಸುವುದಾಗಿ ಸಿದ್ದರಾಮಯ್ಯ ಈಗಾಗಲೇ ಹೇಳಿದ್ದಾರೆ. ಹೀಗಾಗಿ ಸ್ಪೀಕರ್ ಕಾಗೇರಿ ಈ ಆದೇಶ ಹೊರಡಿಸಿದ್ದಾರೆ.

ವಿಧಾನಸಭೆ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿ ಹೊರಡಿಸಿರುವ ಪ್ರಕಟಣೆಯಲ್ಲಿ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ವೇಳೆ ಕರ್ನಾಟಕ ವಿಧಾನಪರಿಷತ್‍ನ ನಿಯಮ 26ರ ಪ್ರಕಾರ ರಾಜ್ಯಪಾಲರು ಬರುವಾಗ ಇಲ್ಲವೇ ಹೊರಡುವಾಗ ಅಥವಾ ಭಾಷಣದ ಸಂದರ್ಭದಲ್ಲಿ ಯಾವುದೇ ಸದಸ್ಯರು ಕ್ರಿಯಾಲೋಪ ಎತ್ತುವಂತಿಲ್ಲ. ಫೆಬ್ರವರಿ 17 ರಂದು ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡುವರಿದ್ದಾರೆ.

ರಾಜ್ಯಪಾಲರ ಭಾಷಣದ ಮುನ್ನಾ ಭಾಷಣ ನಡೆಯುವಾಗ ಹಾಗೂ ನಿರ್ಗಮಿಸುವಾಗ ಶಾಸಕರು ಯಾವುದೇ ಪ್ರತಿಭಟನೆ ಮಾಡುವಂತಿಲ್ಲ ಎಂದು ಸೂಚನೆ ಹೊರಡಿಸಲಾಗಿದೆ. ಆದರೆ ರಾಜ್ಯಪಾಲರ ಭಾಷಣದ ವೇಳೆಯೇ ಪ್ರತಿಭಟನೆ ನಡೆಸಿ ಅಸಮಾಧಾನ ಪ್ರಕಟಮಾಡುವ ಉದ್ದೇಶವನ್ನು ವಿಪಕ್ಷ ಶಾಸಕರು ಹೊಂದಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+