ಕದ್ದು ಮುಚ್ಚಿ ಕೆಲ್ಸ, ಟೆಕ್ಕಿಗಳಿಗೆ ಬಿಸಿ ಮುಟ್ಟಿಸಿದ ಕನ್ನಡಿಗರು
ಬೆಂಗಳೂರು, ಸೆ. 09: ಬೆಂಗಳೂರಿನ ಪ್ರಮುಖ ಐಟಿ ಬಿಟಿ ಕಂಪನಿಗಳು ಶುಕ್ರವಾರ(ಸೆಪ್ಟೆಂಬರ್ 09) ರಜೆ ಘೋಷಿಸಿವೆ. ಆದರೆ, ಕೆಲವು ಐಟಿ ಕಂಪನಿಯ ಉದ್ಯೋಗಿಗಳು ಕಚೇರಿಗೆ ಹಾಜರಾಗಿ ಕದ್ದು ಮುಚ್ಚಿ ಕೆಲ್ಸ ಮಾಡುತ್ತಿರುವುದು ಕಂಡು ಬಂದಿದೆ. ವಿಷಯ ತಿಳಿದ ಕನ್ನಡ ಪರ ಹೋರಾಟಗಾರರು, ಪ್ರತಿಭಟನೆ ನಡೆಸಿ ಕನ್ನಡ ವಿರೋಧಿ ಟೆಕ್ಕಿಗಳನ್ನು ಮನೆಗೆ ಕಳಿಸಿದ್ದಾರೆ.
ಶನಿವಾರ ಕಡ್ಡಾಯ ಹಾಜರಾತಿ ತಪ್ಪಿಸಿಕೊಳ್ಳಲು ಯತ್ನಿಸಿದ ಕೆಲವು ಸಾಫ್ಟ್ ವೇರ್ ಉದ್ಯೋಗಿಗಳು ಶುಕ್ರವಾರದಂದು ಬಂದ್ ಆಚರಣೆಗೆ ಬೆಂಬಲ ನೀಡದೆ ಕೆಲಸಕ್ಕೆ ಹಾಜರಾಗಿದ್ದರು. ಅದರಲೂ ರಜೆ ಘೋಷಿಸಿ ನಂತರ ಕೆಲ್ಸ ಮಾಡಲು ಅವಕಾಶ ನೀಡಿದ ಮಾನ್ಯತಾ ಟೆಕ್ ಪಾರ್ಕ್ ವಿರುದ್ಧ ಕರವೇ ಕಾರ್ಯಕರ್ತರು(ಪ್ರವೀಣ್ ಶೆಟ್ಟಿ ಬಳಗ) ತೀವ್ರವಾಗಿ ಪ್ರತಿಭಟನೆ ನಡೆಸಿದರು. [ನೀರಿಗಾಗಿ ಬಂದ್ ಟೆಕ್ಕಿಗಳಿಗೆ ರಜೆಯ ಚಿಂತೆ]

ಮಾನ್ಯತಾ ಟೆಕ್ ಪಾರ್ಕ್ ಮುಂಭಾಗ ಧಿಕ್ಕಾರ ಕೂಗಿ, ಒಳಗಿರುವ ಟೆಕ್ಕಿಗಳು ಹೊರಕ್ಕೆ ಬರುವಂತೆ ಮಾಡಿದರು. ಬಂದ್ ಗೆ ಬೆಂಬಲ ನೀಡದೆ, ಇಲ್ಲಿನ ನೆಲ, ಜಲ, ಭಾಷೆಗೆ ಗೌರವ ತೋರದಿದ್ದರೆ ನಾಳೆಯಿಂದ ಮಾನ್ಯತಾ ಟೆಕ್ ಪಾರ್ಕ್ ಗೆ ನೀರು ಬಿಡಬೇಡಿ ಅಂತಾ ಕರವೇ ಪ್ರವೀಣ್ ಶೆಟ್ಟಿ ಬಣ ಅಭಿಯಾನ ಆರಂಭಿಸುವುದಾಗಿ ಎಚ್ಚರಿಸಲಾಯಿತು.[LIVE: ಕೆಆರ್ ಎಸ್ ಗೆ ನುಗ್ಗಲು ಯತ್ನಿಸಿದವರ ಮೇಲೆ ಲಾಠಿಚಾರ್ಜ್]
ಎಲೆಕ್ಟ್ರಾನಿಕ್ ಸಿಟಿ, ವೈಟ್ ಫೀಲ್ಡ್, ಮಾನ್ಯತಾ ಟೆಕ್ ಪಾರ್ಕ್, ಬೃಂದಾವನ ಟೆಕ್ ಪಾರ್ಕ್, ಬಾಗ್ ಮನೆ ಟೆಕ್ ಪಾರ್ಕ್ ಗಳಲ್ಲಿರುವ ಕಂಪನಿಗಳು ರಜೆ ನೀಡಲು ಮುಂದಾಗಿರುವುದಾಗಿ ಅಲ್ಲಿನ ಮುಖ್ಯಸ್ಥರು ಘೋಷಿಸಿದ್ದರು. ಆದರೆ, ಮಾನ್ಯತಾ ಟೆಕ್ ಪಾರ್ಕ್, ಎಲೆಕ್ಟ್ರಾನಿಕ್ ಸಿಟಿಯ ಕೆಲ ಕಂಪನಿಗಳು ಎಂದಿನಂತೆ ಉದ್ಯೋಗ ನಿರತರಾಗಿದ್ದು ಕರವೇ ಆಕ್ರೋಶಕ್ಕೆ ಕಾರಣವಾಗಿದೆ.
ಕೋರಮಂಗಲದಲ್ಲಿ ಕೆಲಸ ನಿರತ ಉದ್ಯೋಗಿಗಳನ್ನು ಹೊರ ಕಳಿಸುವಂತೆ ಮಾಡಿದ ಕಿರಿಕ್ ಕೀರ್ತಿ ಹಾಗೂ ಸಂಗಡಿಗರು
ಇನ್ನೊಂದೆಡೆ ಐಟಿ ಬಿಟಿ ಕಂಪನಿಗಳಲ್ಲಿರುವ ಕನ್ನಡಿಗರು ಬಂದ್ ದಿನ ಕನ್ನಡ ಪರ ಘೋಷಣೆ, ಟ್ರಾಲ್, ಮೀಮ್ಸ್, ಟ್ವೀಟ್ಸ್, ಸಂದೇಶಗಳನ್ನು ಹರಡಿದ್ದಾರೆ. ಅಷ್ಟೇ ಅಲ್ಲದೆ, ಟೌನ್ ಹಾಲ್ ಹಾಗೂ ಫ್ರೀಡಂ ಪಾರ್ಕ್ ಬಳಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಅಲ್ಲಿಂದಲೇ ನೇರ ವಿಡಿಯೋ ವರದಿ ನೀಡಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications