ಹಿಂದುತ್ವ ಸಿದ್ಧಾಂತದ ಬಿಜೆಪಿ ನಾಯಕರಿಂದ ಹಿಂದೂ ದೇವರುಗಳಿಗೆ ಅಪಮಾನ: ಕಾಂಗ್ರೆಸ್ ಆರೋಪ
ಬೆಂಗಳೂರು, ಮಾರ್ಚ್ 31: ಸದಾ ತಾವು ಹಿಂದುಗಳು ಎಂದು ಹಿಂದುತ್ವದ ಪರವಾಗಿ ಮಾತನಾಡುವ ಆಡಳಿತಾರೂಢ ಬಿಜೆಪಿ ನಡೆ ಬಗ್ಗೆ ಕರ್ನಾಟಕ ಕಾಂಗ್ರೆಸ್ ಟೀಕಿಸಿದೆ. ಹಿಂದೂ ವಿರೋಧಿ ಚಟವಟಿಕೆ ಕುರಿತು ಏಕೆ ಮೌನ ವಹಿಸಿದೆ?, ಏಕೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಕಾಂಗ್ರೆಸ್ ಖಾರವಾಗಿ ಪ್ರಶ್ನೆ ಮಾಡಿದೆ.
◆ಮುರುಗೇಶ್ ನಿರಾಣಿ ದೇವತೆಗಳನ್ನು ಅವಮಾನಿಸಿದರು
— Karnataka Congress (@INCKarnataka) March 31, 2023
◆ @CTRavi_BJP ಮಾಂಸ ತಿಂದು ದೇವಸ್ಥಾನಕ್ಕೆ ಹೋದರು
◆ @RAshokaBJP @drashwathcn ಭೂತ ಕೋಲವನ್ನು ಅವಮಾನಿಸಿದರು
◆ @JnanendraAraga ಗುಳಿಗ ದೈವದ ಅವಹೇಳನ ಮಾಡಿದರು
◆ ಶರಣು ಸಲಗರ ರಾಮನ ಮೇಲೆ ಕಾಲಿಟ್ಟರು
ಇದೇನಾ @BJP4Karnataka ಯ
ಧರ್ಮರಕ್ಷಣೆಯ ಕೈಂಕರ್ಯಗಳು?
ಶ್ರೀರಾಮನವಮಿ ಪ್ರಯುಕ್ತ ಶ್ರೀರಾಮನ ಬೃಹತ್ ಪ್ರತಿಮೆಗೆ ಹಾರ ಹಾಕುವ ವೇಳೆ ಬಿಜೆಪಿ ಮುಖಂಡ ಶರಣು ಸಲಗರ ಅವರು ಯಡವಟ್ಟು ಮಾಡಿದ್ದಾರೆ. ಶ್ರೀರಾಮನ ಪ್ರತಿಮೆ ಮೇಲೆ ಕಾಲಿಟ್ಟು ಹಾರ ಹಾಕಿದ್ದ ಫೋಟೊ ಎಲ್ಲೆಡೆ ವೈರಲ್ ಆಗಿದೆ. ಈ ಫೋಟೋ ಸಮೇತ ಟ್ವೀಟ್ ಮಾಡಿರುವ ಕಾಂಗ್ರೆಸ್ ಹಿಂದುತ್ವ ಸಿದ್ಧಾಂತದ ಪರ ಎನ್ನುವ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ.

ಶರಣು ಸಲಗರ ಅವರ ಘಟನೆಯಿಂದಾಗಿ ಬಿಜೆಪಿ ನಾಯಕರಿಂದಾದ ಅವಘಡಗಳು ಸರಣಿಯನ್ನು ಕಾಂಗ್ರೆಸ್ ಬಿಚ್ಚಿದೆ. ಕರ್ನಾಟಕ ಕಾಂಗ್ರೆಸ್ ಆಡಳಿತಾರೂಢ ಬಿಜೆಪಿಯ ಹಿಂದುತ್ವ ಸಿದ್ಧಾಂತವನ್ನು ಪ್ರಶ್ನಿಸಿದೆ. ರಾಜ್ಯದಲ್ಲಿ ಬಿಜೆಪಿ ನಾಯಕರು ಹಿಂದೂ ಸಂಪ್ರದಾಯವನ್ನು ಅವಮಾನಿಸಲು ಹೆಸರುವಾಸಿಯಾಗಿದ್ದಾರೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.
ಬಿಜೆಪಿ ನಾಯಕರನ್ನು ಟ್ಯಾಗ್ ಮಾಡಿ ಹಂಚಿಕೊಂಡ ಟ್ವೀಟ್ ಪೋಸ್ಟ್ನಲ್ಲಿ ಕಾಂಗ್ರೆಸ್, ''ಬಿಜೆಪಿಯ ನಾರಯಕ ಹಾಲಿ ಕೈಗಾರಿಎಕ ಸಚಿವ ಮುರುಗೇಶ್ ನಿರಾಣಿ ಹಿಂದೂ ದೇವರುಗಳನ್ನು ಅವಮಾನಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ದೇವಸ್ಥಾನಕ್ಕೆ ಕಾಲಿಡುವ ಮುನ್ನ ಮಾಂಸಾಹಾರ ಸೇವಿಸಿದ್ದರು.
ಹಾಲಿ ಸಚಿವರ ವಿರುದ್ಧವೂ ಕಾಂಗ್ರೆಸ್ ವಾಗ್ದಾಳಿ
ಇನ್ನೂ ಐಟಿ ಬಿಟಿ ಸಚಿವ ಸಚಿವರಾದ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಮತ್ತು ಕಂದಾಯ ಸಚಿವ ಆರ್.ಅಶೋಕ್ ಅವರು ಭೂತ ಕೋಲ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಗುಳಿಗ ದೇವರನ್ನು ಅವಮಾನಿಸಿದ್ದಾರೆ. ಇನ್ನೂ ಇದೇ ಶ್ರೀರಾಮನವಿ ಸಂದರ್ಭದಲ್ಲಿ ಬಿಜೆಪಿ ಮುಖಂಡ ಶರಣು ಸಲಗರನೂ ಶ್ರೀರಾಮನ ಮೇಲೆ ಕಾಲಿಟ್ಟು ಹಾರ ಹಾಕಿದ್ದಾರೆ. ಇವರೆಲ್ಲ ಹಿಂದೂ ಧರ್ಮದ ರಕ್ಷಕರೆ ಎಂದು ಕಾಂಗ್ರೆಸ್ ಕುಟುಕಿದೆ.

ಕಳೆದ ತಿಂಗಳು ಫೆಬ್ರವರಿಯಲ್ಲಿ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಮಾಂಸ ಸೇವಿಸಿದ ನಂತರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂದು ಬಿಜೆಪಿಯ ಸಿಟಿ ರವಿ ವಿರುದ್ಧ ಅವರು ವಾಗ್ದಾಳಿ ನಡೆಸಿದ್ದರು. ನಂತರ ಟ್ವೀಟ್ ಮಾಡಿದ ಸಿದ್ದರಾಮಯ್ಯನವರು, ಮಾಂಸ ತಿನ್ನುವುದು ಅಥವಾ ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಅಥವಾ ಹೋಗದಿರುವುದು ವೈಯಕ್ತಿಕ ಆಯ್ಕೆಯಾಗಿದೆ. ಇದು ರಾಜಕೀಯ ಚರ್ಚೆಯ ವಿಷಯವಾಗಬಾರದು. ರಾಜಕೀಯ ಮುಖಂಡರು ಜನರ ಹಿತ ಹಾಗೂ ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಬೇಕು. ನಿಂದೆಯಲ್ಲಿ ತೊಡಗಿರುವ ಸಿಟಿ ರವಿಯವರೆಗೆ ಅವರಿಗೆ ದೇವರು ಒಳ್ಳೆಯ ಬುದ್ದಿ ನೀಡಲಿ ಎಂದು ಹೇಳಿದ್ದರು.
ಮಾಂಸ ತಿಂದು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ ಎಂಬ ಆರೋಪದ ಸಾಲಿನಲ್ಲಿ ಸಿದ್ದರಾಮಯ್ಯ ಅವರು ಮೊದಲಿದ್ದಾರೆ. ಬಿಜೆಪಿ ಕಾರ್ಯಕರ್ತರು ಸಿದ್ಧರಾಮಯ್ಯನವರ ಬಗ್ಗೆ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ. ಇದೇ ವಿಚಾರವಾಗಿ ಸಿದ್ದರಾಮಯ್ಯನವರನ್ನು ಹಿಂದೂ ವಿರೋಧಿ ಎಂದು ಜರಿದಿದ್ದರು.
ಇದೆಲ್ಲವನ್ನು ಟ್ವೀಟ್ನಲ್ಲಿ ಕುಟುಕಿದ್ದ ಸಿದ್ದರಾಮಯ್ಯನವರು ಸಿಟಿ ರವಿ ಅವರ ನಡವಳಿಕೆ, ಮಾಂಸ ತಿಂದು ದೇವಸ್ಥಾನಕ್ಕೆ ತೆರಳಿರುವ ಅವರ ಕ್ರಮಗಳು ಈಗ 'ತಮ್ಮ ವಾಂತಿ ತಿನ್ನುವಂತೆ ಮಾಡಿವೆ ಎಂದು ಅವರು ವಾಗ್ದಾಳಿ ನಡೆಸಿದ್ದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?












Click it and Unblock the Notifications