ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೊರೆಸ್ವಾಮಿ ವಿರುದ್ಧ ಹೇಳಿಕೆ; ಯತ್ನಾಳ ಬೆಂಬಲಕ್ಕೆ ನಿಂತ ಬಿಜೆಪಿ

|
Google Oneindia Kannada News

ಬೆಂಗಳೂರು, ಫೆಬ್ರವರಿ 29: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬೆಂಬಲಕ್ಕೆ ಬಿಜೆಪಿ ಮುಖಂಡರು ನಿಂತಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಹಲವು ಬಿಜೆಪಿ ಮುಖಂಡರು ಯತ್ನಾಳ ಸರ್ಮಥನೆಯ ಹೇಳಿಕೆ ನೀಡಿದ್ದಾರೆ. ಶುಕ್ರವಾರ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಕೂಡ ಯತ್ನಾಳ ಸಮರ್ಥಿಸಿದ್ದರು.

ಮೋದಿ ವಿರುದ್ಧ ಹೇಳಿಕೆ ನೀಡಿದರೆ ನಾಲಿಗೆ ಸುಡಬೇಕಾಗುತ್ತದೆ: ಯತ್ನಾಳ ವಿವಾದಮೋದಿ ವಿರುದ್ಧ ಹೇಳಿಕೆ ನೀಡಿದರೆ ನಾಲಿಗೆ ಸುಡಬೇಕಾಗುತ್ತದೆ: ಯತ್ನಾಳ ವಿವಾದ

ಕೊಡಗಿನಲ್ಲಿ ಶನಿವಾರ ಮಾತನಾಡಿರುವ ಸಚಿವ ಸುರೇಶ್ ಕುಮಾರ್ ಅವರು, ಯತ್ನಾಳ ಹೇಳಿಕೆ ಸರಿ ತಪ್ಪು ಎಂದು ನಾನು ಹೇಳುವುದಿಲ್ಲ. ಆದರೆ ದೊರೆಸ್ವಾಮಿ ಅವರು ಮೋದಿ ಬಗ್ಗೆ ಯಾವ ರೀತಿ ಮಾತನಾಡಿದ್ದರು ಎಂಬುದನ್ನು ನೀವೇ ನೋಡಿ ಎಂದು ಹೇಳಿದ್ದಾರೆ.

Karnataka BJP Leaders Defends MLA Yatnal Remark On Doreswamy

ಬಳ್ಳಾರಿಯಲ್ಲಿ ಮಾತನಾಡಿರುವ ಶಾಸಕ ಸೋಮಶೇಖರ ರೆಡ್ಡಿ ಅವರು, ಪಾಕಿಸ್ತಾನ್ ಏಜೆಂಟ್‌ಗಳಿಗೆ ಇನ್ನೇನು ಭಾರತದ ದೇಶಭಕ್ತರು ಎನ್ನಲಾಗುತ್ತದಾ ಎಂದು ಯತ್ನಾಳ ಹೇಳಿಕೆಯನ್ನು ಸಮರ್ಥಿಸಿದ್ದಾರೆ.

ಕಳೆದ ಫೆ 25 ರಂದು ವಿಜಯಪುರದಲ್ಲಿ ಯತ್ನಾಳ, ದೊರೆಸ್ವಾಮಿ ದೇಶದ್ರೋಹಿಗಳನ್ನು ಸಮರ್ಥಿಸಿಕೊಳ್ಳುವುದನ್ನು ನೋಡಿದ್ದೇವೆ. ಆ ಮುದುಕ ಪಾಕಿಸ್ತಾನ್ ಏಜೆಂಟ್ ಇದ್ದಂತೆ ಎಂದು ಹೇಳಿದ್ದರು. ಇದು ವಿವಾದ ಸೃಷ್ಠಿಸಿದೆ.

English summary
Karnataka BJP Leaders Defends MLA Yatnal Remark On Doreswamy hate speach. many more bjp leaders defends yatnal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X