ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜು.19 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿರುವ ಬಿಜೆಪಿ

|
Google Oneindia Kannada News

ಬೆಂಗಳೂರು, ಜುಲೈ 18: ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆ ನೀಡಬೇಕು ಹಾಗೂ ಮಂಗಳೂರಿನ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹಂತಕರನ್ನು ಶೀಘ್ರವೇ ಬಂಧಿಸಬೇಕೆಂದು ಆಗ್ರಹಿಸಿ ಜುಲೈ 19ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕರ್ನಾಟಕ ಬಿಜೆಪಿ ನಿರ್ಧರಿಸಿದೆ.

ಪಕ್ಷದ ಎಲ್ಲ ಜಿಲ್ಲಾ ಘಟಕಗಳೂ ಪ್ರತಿಭಟನೆ ನಡೆಸಬೇಕೆಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಸೂಚನೆ ನೀಡಿದ್ದಾರೆ.

ಪ್ರತಿಭಟನಾನಿರತ ಬಿಜೆಪಿ ಸಂಸದ ಪ್ರಾಮಾಣಿಕತೆ ಪ್ರಶ್ನಿಸಿದ ಟ್ವಿಟ್ಟಿಗರುಪ್ರತಿಭಟನಾನಿರತ ಬಿಜೆಪಿ ಸಂಸದ ಪ್ರಾಮಾಣಿಕತೆ ಪ್ರಶ್ನಿಸಿದ ಟ್ವಿಟ್ಟಿಗರು

Karnataka BJP will Protest against Congress government on July 19th

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿದ್ದ ಅಕ್ರಮ ಮತ್ತು ಭ್ರಷ್ಟಾಚಾರವನ್ನು ಬಯಲಿಗೆಳೆಯಲು ಹೊರಟಿದ್ದ ಡಿಐಜಿ(ಕಾರಾಗೃಹ) ರೂಪಾ ಅವರಿಗೆ ವರ್ಗಾವಣೆ ಶಿಕ್ಷೆ ನೀಡಿದ ಸರ್ಕಾರದ ನಿರ್ಧಾರದ ಕುರಿತು ಜುಲೈ 18 ರಂದು ಸಂಸತ್ ಎದುರು ಪ್ರತಿಭಟನೆ ನಡೆಸಿದ್ದ ಬಿಜೆಪಿ ನಾಯಕರು, ರಾಜ್ಯದಲ್ಲೂ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಗೆ ಕಾರಣರಾದವರನ್ನು ಬಂಧಿಸುವಲ್ಲಿ ವಿಳಂಬಧೋರಣೆ ತೋರುತ್ತಿರುವ ರಾಜ್ಯ ಸರ್ಕಾರದ ನಡೆಯ ವಿರುದ್ಧವೂ ಬಿಜೆಪಿ ನಾಯಕರು ದನಿ ಎತ್ತಲಿದ್ದಾರೆ.

English summary
Karnataka BJP leaders have decided to protest against Karnataka state government's stand on DIG (prison) Roopa's transfer and governments neglegence to arrest culprits of RSS worker Sharat Madiwal's murder case in Mangaluru. The protest will be organised on 19th July in all BJP district units of Karnataka
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X