Karnataka Budget 2023: ಇಂದಿನಿಂದ ಬಜೆಟ್ ಅಧಿವೇಶನ ಆರಂಭ; 7 ಮಸೂದೆಗಳು ಮಂಡನೆ
ರಾಜ್ಯದಲ್ಲಿ ಮೇ ತಿಂಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ಇಂದಿನಿಂದ ಆರಂಭವಾಗುವ ಬಜೆಟ್ ಅಧಿವೇಶನ ಮಹತ್ವ ಪಡೆದುಕೊಂಡಿದೆ.
ಬೆಂಗಳೂರು, ಫೆಬ್ರವರಿ. 10: ಬಿಜೆಪಿ ಸರ್ಕಾರದ ಅಡಿಯಲ್ಲಿ ವಿಧಾನಮಂಡಲದ ಅಧಿವೇಶನವು ಶುಕ್ರವಾರದಿಂದ ಆರಂಭವಾಗಲಿದ್ದು, ರಾಜ್ಯ ವಿಧಾನಸಭಾ ಚುನಾವಣೆ ಕೂಡ ಹತ್ತಿರದಲ್ಲಿ ಇರುವ ಕಾರಣ ಈ ಅಧಿವೇಶನ ಮೂರು ಪಕ್ಷಗಳಿಗೂ ಮುಖ್ಯವಾಗಿದೆ.
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ರಾಜಕೀಯ ಪಕ್ಷಗಳಿ ಅಧಿವೇಶನವನ್ನು ವಾಕ್ಸಮರಕ್ಕೆ ಬಳಸಿಕೊಳ್ಳುವ ಸಾಧ್ಯತೆಯಿದ್ದು, ಈಗಾಗಲೇ ಎಲ್ಲಾ ಪಕ್ಷಗಳು ತಯಾರಿ ಮಾಡಿಕೊಂಡಿವೆ. ರಾಜ್ಯದಲ್ಲಿ ಮೇ ತಿಂಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.
ಶುಕ್ರವಾರ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರಾದ ತಾವರಚಂದ್ ಗೆಹ್ಲೋಟ್ ಭಾಷಣ ಮಾಡುವುದರೊಂದಿಗೆ ಅಧಿವೇಶನ ಪ್ರಾರಂಭವಾಗುತ್ತದೆ. ಫೆಬ್ರವರಿ 24 ರವರೆಗೆ ಅಧಿವೇಶನ ನಡೆಯಲಿದೆ. ಈ ಚುನಾವಣಾ ಪೂರ್ವ ಬಜೆಟ್ ಅಧಿವೇಶನವು ಹದಿನೈದನೇ ರಾಜ್ಯ ವಿಧಾನಸಭೆಯ ಹದಿನೈದನೇ ವಿಧಾನಮಂಡಲದ ಅಧಿವೇಶನವಾಗಿದೆ.

ಫೆ.13 ರಿಂದ 16ರ ವರೆಗೆ ರಾಜ್ಯಪಾಲರ ಭಾಷಣಕ್ಕೆ ಧನ್ಯವಾದ ನಿರ್ಣಯವನ್ನು ವಿಧಾನಸಭೆ ಅಂಗೀಕರಿಸಲಿದ್ದು, ಫೆ.17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಬಜೆಟ್ ಮಂಡಿಸಲಿದ್ದು, ಇದಾದ ಬಳಿಕ ವಿಧಾನಸಭೆ ಪ್ರಕಾರ ಫೆ.24ರ ವರೆಗೆ ಬಜೆಟ್ ಮೇಲೆ ಚರ್ಚೆ ನಡೆಯಲಿದೆ.
ಚುನಾವಣಾ ತಯಾರಿಯಲ್ಲಿರುವ ವಿರೋಧ ಪಕ್ಷಗಳು ರಾಜ್ಯ ಸರ್ಕಾರದ ಭ್ರಷ್ಟಾಚಾರದ ಆರೋಪಗಳು, ಹಣದ ಕೊರತೆ ಮತ್ತು ಉದ್ಯೋಗ ಹಗರಣಗಳು ಸೇರಿದಂತೆ ಹಲವಾರು ವಿಷಯಗಳನ್ನು ಪ್ರಸ್ತಾಪಿಸಲು ಅವಕಾಶವನ್ನು ಹುಡುಕುತ್ತಿವೆ.
ಇನ್ನು, ಅಧಿವೇಶನಕ್ಕೆ ಹಾಜರಾತಿ ಕಡಿಮೆಯಾಗುವ ಭಯದಿಂದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಎಲ್ಲಾ ಸದಸ್ಯರು ತಪ್ಪದೇ ಅಧಿವೇಶನದಲ್ಲಿ ಹಾಜರಿರಬೇಕು. ವಿಧಾನಸಭಾ ಚುನಾವಣೆ ಇದೆ. ಆದರೆ, ಪ್ರಚಾರಕ್ಕೆ ಇನ್ನೂ ಸಮಯವಿದೆ. ಸದಸ್ಯರು ವಿಧಾನಮಂಡಲ ಕಲಾಪಕ್ಕೆ ಗೈರಾಗಬಾರದು ಎಂದು ಮನವಿ ಮಾಡಿದ್ದಾರೆ.

ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಲವಾರು ಚುನಾಯಿತ ಪ್ರತಿನಿಧಿಗಳ ವೇಳಾಪಟ್ಟಿಯನ್ನು ನೋಡಿದರೆ ಅವರು, ಅಧಿವೇಶನ ಬಿಟ್ಟು ಈಗಾಗಲೇ ಚುನಾವಣಾ ಚಟುವಟಿಕೆಗಳಲ್ಲಿ ನಿರತರಾಗಿರುವಂತೆ ಕಂಡುಬರುತ್ತಿದೆ ಎಂದು ಹೇಳಿದ್ದಾರೆ.
ವಿಧಾನಸಭೆ ಕಾರ್ಯದರ್ಶಿ ಕಚೇರಿಗೆ ಇದುವರೆಗೆ 1,300 ಪ್ರಶ್ನೆಗಳು ಬಂದಿದ್ದು, ಅಧಿವೇಶನದಲ್ಲಿ ಚರ್ಚಿಸಲಾಗುವುದು. ಅವುಗಳಲ್ಲಿ ಕೆಲವು ಸದನದಲ್ಲಿ ಉತ್ತರಿಸಲಾಗುವುದು. ಉಳಿದವರಿಗೆ ಲಿಖಿತ ಉತ್ತರಗಳನ್ನು ನೀಡಲಾಗುವುದು.
*7 ಮಸೂದೆಗಳು ಮಂಡನೆಯಾಗಲಿವೆ*
ಆರು ಖಾಸಗಿ ವಿಶ್ವವಿದ್ಯಾಲಯಗಳ ವಿಧೇಯಕ ಸೇರಿದಂತೆ ಏಳು ವಿಧೇಯಕಗಳನ್ನು ಸದನದಲ್ಲಿ ಮಂಡಿಸಲಾಗುವುದು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ಮಂಡನೆಯಾಗಲಿರುವ ಮಸೂದೆಗಳು
1. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಮಸೂದೆ, 2022
2. ಕರ್ನಾಟಕ ರಾಜ್ಯ ಒಕ್ಕಲಿಗ ಸಂಘ ವಿಶ್ವವಿದ್ಯಾಲಯ ಮಸೂದೆ, 2022;
3. ಕಿಷ್ಕಿಂಧಾ ವಿಶ್ವವಿದ್ಯಾಲಯ ಮಸೂದೆ, 2022
4. ಜಿ ಎಂ ವಿಶ್ವವಿದ್ಯಾಲಯ ಮಸೂದೆ, 2022
5. ಟಿ ಜಾನ್ ಯೂನಿವರ್ಸಿಟಿ ಬಿಲ್, 2022
6. ಸಪ್ತಗಿರಿ NPS ವಿಶ್ವವಿದ್ಯಾಲಯ ಮಸೂದೆ, 2022
7. ಆಚಾರ್ಯ ವಿಶ್ವವಿದ್ಯಾಲಯ ಮಸೂದೆ, 2022
ಇದುವರೆಗೆ 15ನೇ ವಿಧಾನಸಭೆಯ ಅವಧಿಯಲ್ಲಿ 156 ದಿನಗಳ ಕಾಲ ಶಾಸಕಾಂಗ ಕಲಾಪ ನಡೆದಿದೆ. ಇನ್ನು, ವಿಧಾನಸೌಧದಲ್ಲಿ ಬಜೆಟ್ ಅಧಿವೇಶನದ ಹಿನ್ನೆಲೆ ಫೆಬ್ರವರಿ 10 ರಿಂದ 24ರ ವರೆಗೆ ವಿಧಾನಸೌಧದ ಸುತ್ತಲಿನ 2 ಕಿ.ಮೀ ವ್ಯಾಪ್ತಿಯಲ್ಲಿ ಪ್ರತಿ ದಿನ ಬೆಳಗ್ಗೆ 6 ರಿಂದ ಮಧ್ಯಾಹ್ನ 12ರ ವರೆಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು











Click it and Unblock the Notifications