ಕರ್ನಾಟಕ ಬಜೆಟ್: ಬೆಂಗಳೂರಿಗೆ ಏನೇನು ಸಿಕ್ಕಿದೆ?
Recommended Video

ಬೆಂಗಳೂರು, ಜು.5: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗುರುವಾರ ಮಂಡಿಸಿದ್ದಾರೆ. ಹಾಗಾದರೆ ಬೆಂಗಳೂರಿಗೆ ಈ ಬಜೆಟ್ನಿಂದ ಏನೇನು ದೊರೆತಿದೆ ಎನ್ನುವುದನ್ನು ಗಮನಿಸೋಣ.
ಬೆಂಗಳೂರಿನ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಬೋನ್ ಮ್ಯಾರೋ, ಟ್ರಾನ್ಸ್ಪ್ಲಾಂಟ್ ಘಟಕ ಆರಂಭಿಸಲಾಗುತ್ತಿದೆ. ನಗರದ 6 ಕಡೆ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಮಾಡಲಾಗುತ್ತಿದ್ದು ಕೆಆರ್ಡಿಸಿಎಲ್ ಇದರ ಹೊಣೆ ಹೊತ್ತಿದೆ ಅದಕ್ಕೆ 15,285 ಕೋಟಿ ರೂ, ವೆಚ್ಚಮಾಡಲಾಗುತ್ತಿದೆ.
ಇನ್ನು ಬಿಎಂಟಿಸಿಗೆ 150 ಕೋಟಿ ರೂ ಮೀಸಲಿಡಲಾಗಿದ್ದು, 80 ಎಲೆಕ್ಟ್ರಿಕ್ ಬಸ್ಗಳನ್ನು ಖರೀದಿ ಮಾಡಲಾಗುತ್ತಿದೆ. ಬೆಳ್ಳಂದೂರು ಕೆರೆ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ರಾಸಾಯನಿಕ ಯುಕ್ತ ನೀರಿನಿಂದ ಸಂಪೂರ್ಣವಾಗಿ ಕಲುಷಿತಗೊಂಡಿದೆ ಅದರ ಪುನಶ್ಚೇತನಕ್ಕೆ 50 ಕೋಟಿಯನ್ನು ರಾಜ್ಯ ಬಜೆಟ್ ಮೀಸಲಿಟ್ಟಿದೆ. ಬೆಂಗಳೂರಿನ ಹಲವು ಕಡೆ ಶುದ್ಧೀಕರಣ ಘಟಕ ನಿರ್ಮಾಣ ಮಾಡಲಾಗುತ್ತದೆ, ಬೆಂಗಳೂರಿನ ಬಾರ್ ಕೌನ್ಸಿಲ್ಗೆ ಐದು ಕೋಟಿ ಮೀಸಲಿಡಲಾಗಿದೆ.
ಬೆಂಗಳೂರು ನಮ್ಮ ಮೆಟ್ರೋಗೆ 95 ಕಿ.ಮೀ ವಿಸ್ತರಣೆಗೆ ಬಜೆಟ್ನಲ್ಲಿ ಅನುಮತಿ ನೀಡಲಾಗಿದೆ. ಬೆಂಗಳೂರು ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ. ಬೆಂಗಳೂರು ಹೊರ ವಲಯದಲ್ಲಿ ಫೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ , ಪೀಣ್ಯದಲ್ಲಿ 10 ಕೋಟಿ ವೆಚ್ಚದಲ್ಲಿ ಶುದ್ಧೀಕರಣ ಘಟಕ ನಿರ್ಮಾಣ ಮಾಡಲಾಗುತ್ತದೆ.
ಡಾ. ರಾಜ್ಕುಮಾರ್ ಸ್ಮರಣಾರ್ಥ ಕಂಠೀರವ ಸ್ಟುಡಿಯೋದಲ್ಲಿ ಯೋಗ ಕೇಂದ್ರ ಸ್ಥಾಪನೆ, ಕೆಂಪೇಗೌಡ ಬಡಾವಣೆಯಲ್ಲಿ 5 ಸಾವಿರ ಅರ್ಜಿ ವಿತರಣೆ,

ನಮ್ಮ ಮೆಟ್ರೋ ವಿಸ್ತರಣೆಗೆ ಸಾವಿರ ಕೋಟಿ
ರಾಜ್ಯ ಬಜೆಟ್ನಲ್ಲಿ ನಮ್ಮ ಮೆಟ್ರೋ ಮೂರನೇ ಹಂತಕ್ಕೆ ಸಾವಿರ ಕೋಟಿ ಮೀಸಲಿಟ್ಟಿದ್ದಾರೆ.ಟೋಲ್ಗೇಟ್-ಕಡಬಗೆರೆ 12.ಕಿ.ಮೀ ವಿಸ್ತೀರ್ಣವನ್ನು ಹೊಂದಿದೆ, 3 ಕಿ.ಮೀ ಮಾರ್ಗದ ಗೊಟ್ಟಿಗೆರೆ- ಬಸವಪುರ, 18.95 ಕೋಗಿಲು ಕ್ರಾಸ್ನಿಂದ ರಾಜಾನುಕುಂಟೆ 10.6 ಕಿ.ಮೀ ಮಾರ್ಗ, ಇಬ್ಲೂರಿನಿಂದ ಒಟ್ಟು 6.67 ಕಿ.ಮೀ ವ್ಯಾಪ್ತಿಯಲ್ಲಿ ಮೆಟ್ರೋ ಮಾರ್ಗ ನಿರ್ಮಾಣವಾಗಲಿದೆ.

ಬಿಎಂಟಿಸಿಗೆ ರಾಜ್ಯ ಬಜೆಟ್ ಕೊಟ್ಟಿದ್ದೇನು
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡನೆ ಮಾಡಿದ್ದು, ಅದರಲ್ಲಿ ಬಿಎಂಟಿಸಿಗೆ 100 ಕೋಟಿ ಮೀಸಲಿಟ್ಟಿದ್ದು, 80 ಎಲೆಕ್ಟ್ರಿಕ್ ಬಸ್ಗಳ ಖರೀದಿ ಮಾಡಲಾಗುತ್ತದೆ.

ರಾಜ್ಯ ಬಜೆಟ್ನಲ್ಲಿ ಬೆಳ್ಳಂದೂರು ಕೆರೆ ಪುನಶ್ಚೇತನಕ್ಕೆ 50 ಕೋಟಿ
ಸಮ್ಮಿಶ್ರ ಸರ್ಕಾರ ಮೊದಲ ಬಜೆಟ್ನಲ್ಲಿ ಬೆಳ್ಳಂದೂರು ಕೆರೆ ಅಭಿವೃದ್ಧಿಗೆ 50 ಕೋಟಿ ಮೀಸಲಿರಿಸಲಾಗಿದೆ. ಬೆಳ್ಳಂದೂರು ಕೆರೆ ಕಾರ್ಖಾನೆಗಳಿಂದ ಬರುವ ರಾಸಾಯನಿಕ ಯುಕ್ತ ನೀರುಗಳು ಸೇರಿ ಸಂಪೂರ್ಣ ಮಲಿನವಾಗಿದೆ, ಹಾಗಾಗಿ ಅದರ ಸಂಪೂರ್ಣ ಅಭಿವೃದ್ಧಿಗೆ ಸರ್ಕಾರ 50 ಕೋಟಿ ಮೀಸಲಿಟ್ಟಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಬಜೆಟ್ನಿಂದ ಏನು ದೊರೆತಿದೆ
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 500 ಸಾವಿರ ನಿವೇಶನ ಹಂಚಲಾಗಿದ್ದು, ಇನ್ನೂ 5 ಸಾವಿರ ನಿವೇಶನ ಹಂಚಿಕೆ ಕಾರ್ಯಕ್ರಮ ಬಾಕಿ ಇದೆ. ಭೂಮಾಲೀಕರಿಗೆ ಮೊದಲನೇ ಹಂತದಲ್ಲಿ 2157 ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಎರಡನೇ ಹಂತದಲ್ಲಿ 3 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ.

ಬಜೆಟ್ ಬೆಂಗಳೂರು ಜಲಮಂಡಳಿಗೆ ನೀಡಿದ್ದೇನು
ಕೊಳಚೆ ನೀರಿನಲ್ಲಿ ಕಾಣಿಸುತ್ತಿರುವ ರಾಸಾಯನಿಕ ಅಂಶಗಳು ಕೊಳಚೆ ನೀರಿಗೆ ಸೇರಿದಾಗ ನೀರು ನದಿಗೆ ಸೇರಿ ಕಲುಷಿತವಾಗುತ್ತದೆ ಹಾಗಾಗಿ ನಗರದ ಹಲವೆಡೆ ರಾಸಾಯನಿಕ ರಾಜ್ಯ ವಸ್ತುಗಳ ಶುದ್ಧೀಕರಣ ಘಟಕಗಳನ್ನು ನಿರ್ಮಿಸಲಾಗುತ್ತದೆ.ಪೀಣ್ಯ ಕೈಗಾರಿಕಾ ವಲಯದಲ್ಲಿ 10 ಕೋಟಿ ವೆಚ್ಚದಲ್ಲಿ ಘಟಕ ತೆರೆಯಲಾಗುತ್ತದೆ.

ರಾಜ್ ಸ್ಮರಣಾರ್ಥ ಕಂಠೀರವ ಸ್ಟುಡಿಯೋದಲ್ಲಿ ಯೋಗಕೇಂದ್ರ ಸ್ಥಾಪನೆ
ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡನೆಯಾಗಿದೆ, ಡಾ. ರಾಜ್ಕುಮಾರ್ ಸ್ಮರಣಾರ್ಥ ಕಂಠೀರವ ಸ್ಟುಡಿಯೋದಲ್ಲಿ ಯೋಗ ಕೇಂದ್ರ ಸ್ಥಾಪನೆ, ಮಾಡಲಾಗುತ್ತದೆ ಎಂದು ಬಜೆಟ್ನಲಲ್ಲಿ ತಿಳಿಸಲಾಗಿದೆ.

ಬೆಂಗಳೂರಿನ ಆರು ಕಡೆ ಪೆರಿಫೆರಲ್ ರಸ್ತೆ
ನಗರದ 6 ಕಡೆ ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಮಾಡಲಾಗುತ್ತಿದ್ದು ಕೆಆರ್ಡಿಸಿಎಲ್ ಇದರ ಹೊಣೆ ಹೊತ್ತಿದೆ ಅದಕ್ಕೆ 15,285 ಕೋಟಿ ರೂ, ವೆಚ್ಚಮಾಡಲಾಗುತ್ತಿದೆ.
-
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ












Click it and Unblock the Notifications