ಬಿಬಿಎಂಪಿ ವಾರ್ಡ್ಗಳ ಸಂಖ್ಯೆ 225ಕ್ಕೆ ಏರಿಕೆ: ಚುನಾವಣೆ ಮುಂದೂಡಿಕೆಗೆ ಸರ್ಕಾರ ಪ್ರಯತ್ನ
ಬೆಂಗಳೂರು, ಸೆಪ್ಟೆಂಬರ್ 4: ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ನಡೆಸುವ ದಿನ ಸಮೀಪಿಸುತ್ತಿರುವಂತೆಯೇ ರಾಜ್ಯ ಸರ್ಕಾರ ಬಿಬಿಎಂಪಿಯ ವಾರ್ಡ್ಗಳನ್ನು ಹೆಚ್ಚಿಸಲು ಮುಂದಾಗಿದೆ. ಗುರುವಾರ ನಡೆದ ರಾಜ್ಯ ಸಂಪುಟ ಸಭೆಯಲ್ಲಿ ಬಿಬಿಎಂಪಿಯ ವಾರ್ಡ್ಗಳ ಸಂಖ್ಯೆಯನ್ನು 198ರಿಂದ 225ಕ್ಕೆ ಹೆಚ್ಚಿಸುವ ಬಗ್ಗೆ ಚರ್ಚೆ ನಡೆಸಲಾಯಿತು. ಜತೆಗೆ ಚುನಾವಣೆಯನ್ನು ಮುಂದೂಡುವ ಬಗ್ಗೆ ಹೈಕೋರ್ಟ್ನ ಅನುಮತಿ ಕೋರುವ ಬಗ್ಗೆ ಸಹ ಸಮಾಲೋಚನೆ ಮಾಡಲಾಗಿದೆ.
ಬಿಬಿಎಂಪಿಯ ವಾರ್ಡ್ಗಳ ಸಂಖ್ಯೆಯನ್ನು ಹೆಚ್ಚಿಸುವ ಬಗ್ಗೆ ನಾವು ಚರ್ಚೆ ನಡೆಸಿದ್ದೇವೆ. ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಪ್ರತ್ಯೇಕ ಸಭೆ ನಡೆಸಲಿದ್ದೇವೆ. ಈಗಿರುವ 198 ವಾರ್ಡ್ಗಳ ಸಂಖ್ಯೆಯನ್ನು 225ಕ್ಕೆ ಹೆಚ್ಚಳ ಮಾಡಲು ಯೋಚಿಸಲಾಗುತ್ತಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಗುರುವಾರ ಸಂಪುಟ ಸಭೆ ಬಳಿಕ ಸುದ್ದಿಗಾರರಿಗೆ ತಿಳಿಸಿದರು.
ಜಂಟಿ ಸಲಹಾ ಸದನ ಸಮಿತಿಯು ಸರ್ಕಾರವು ವಿಧಾನಸಭೆ ಮುಂದಿರಿಸಿರುವ ಬಿಬಿಎಂಪಿ ಮಸೂದೆಯನ್ನು ಪರಿಶೀಲಿಸುತ್ತಿದೆ. ಸಮಿತಿಯ ಸಭೆಯಲ್ಲಿ ವಾರ್ಡ್ಗಳ ಸಂಖ್ಯೆ ಏರಿಕೆಯ ವಿಚಾರ ಪ್ರಸ್ತಾಪಿಸಿ ಅದರ ಬಗ್ಗೆ ಚರ್ಚೆ ನಡೆಸಲಾಗುವುದು. ಸಭೆಯಲ್ಲಿ ನಡೆಯುವ ಚರ್ಚೆಗೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. ಮುಂದೆ ಓದಿ.

ಚುನಾವಣೆ ಮುಂದೂಡುವ ತಂತ್ರ
ಆದರೆ, ಪ್ರಸ್ತುತ ರಾಜ್ಯ ಸರ್ಕಾರವು ಬಿಬಿಎಂಪಿ ವಾರ್ಡ್ಗಳ ಸಂಖ್ಯೆಯನ್ನು ಹೆಚ್ಚಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದೆ. ಒಂದು ವಾರ್ಡ್ಗೆ 40,000-42,000 ಜನಸಂಖ್ಯೆ ಇರಬೇಕು ಎಂದು ತಿಳಿಸಿದರು. ವಾರ್ಡ್ಗಳ ಮರುವಿಂಗಡಣೆಯು ಚುನಾವಣೆ ಮುಂದೂಡುವ ತಂತ್ರ ಎಂಬ ಆರೋಪ ಕೇಳಿಬಂದಿದೆ.

ಚುನಾವಣೆ ಮುಂದೂಡಿಕೆ ಅನಿವಾರ್ಯ
ವಾರ್ಡ್ಗಳ ಪುನರ್ ವಿಂಗಡಣೆಯು ನಡೆಯುವಂತಾದರೆ ಕೆಲವು ಸಮಯದವರೆಗೆ ಚುನಾವಣೆಯನ್ನು ಮುಂದೂಡಬೇಕಾಗುತ್ತದೆ. ಇದಕ್ಕಾಗಿ ನ್ಯಾಯಾಲಯದ ಅನುಮತಿ ಕೇಳಲಾಗುವುದು. ಈಗಿಗಿನ ಬಿಬಿಎಂಪಿ ಸಮಿಯ ಅವಧಿಯು ಈ ತಿಂಗಳಲ್ಲಿ ಮುಕ್ತಾಯಗೊಳ್ಳಲಿದೆ. ಅದಕ್ಕೂ ಮುನ್ನ ನ್ಯಾಯಾಲಯವನ್ನು ಸಂಪರ್ಕಿಸಲಾಗುವುದು ಎಂದು ಮಾಧುಸ್ವಾಮಿ ತಿಳಿಸಿದರು.

ವಲಯಗಳ ಸಂಖ್ಯೆ ಹೆಚ್ಚಳ
ವಾರ್ಡ್ಗಳ ಮರು ವಿಂಗಡಣೆಯಿಂದ ಬಿಬಿಎಂಪಿ ವ್ಯಾಪ್ತಿಯೊಳಗೆ ಮತ್ತಷ್ಟು ಹೊಸ ಪ್ರದೇಶಗಳು ಸಹ ಸೇರಿಕೊಳ್ಳಲಿವೆ. ಜತೆಗೆ ವಲಯಗಳ ಸಂಖ್ಯೆ 8 ರಿಂದ 15ಕ್ಕೆ ಏರಿಕೆಯಾಗಲಿವೆ. ಶುಕ್ರವಾರ ನಡೆಯುವ ಜಂಟಿ ಸಲಹಾ ಸದನ ಸಮಿತಿಯಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು.

ಮಸೂದೆ ಮಂಡನೆ ವೇಳೆ ಆಕ್ಷೇಪ
ಮಾರ್ಚ್ನಲ್ಲಿ ನಡೆದ ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ರಾಜ್ಯ ಸರ್ಕಾರ 'ಬಿಬಿಎಂಪಿ ಮಸೂದೆ 2020'ಯನ್ನು ಮಂಡಿಸಿತ್ತು. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಶಾಸಕ ಎಸ್. ರಘು ಅಧ್ಯಕ್ಷತೆಯಲ್ಲಿ ಆಗಸ್ಟ್ ತಿಂಗಳಲ್ಲಿ ಜಂಟಿ ಸಲಹಾ ಸದನ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿ ಇನ್ನೂ ವರದಿ ನೀಡಿಲ್ಲ. ಅದಕ್ಕೂ ಮೊದಲೇ ವಾರ್ಡ್ಗಳ ಸಂಖ್ಯೆಯನ್ನು 225ಕ್ಕೆ ಹೆಚ್ಚಿಸಲು ಸರ್ಕಾರ ತರಾತುರಿಯಲ್ಲಿ ಮುಂದಾಗಿರುವುದು ಆಕ್ಷೇಪಕ್ಕೆ ಕಾರಣವಾಗಿದೆ.

ಮತ್ತೆ ಮತದಾರರ ಪಟ್ಟಿ ಪರಿಷ್ಕರಣೆ
ಬಿಬಿಎಂಪಿ ವಾರ್ಡ್ಗಳ ಮರುವಿಂಗಡಣೆ ಸಂಬಂಧ ಮಾರ್ಚ್ 2ರಂದು ಕರಡು ಅಧಿಸೂಚನೆ ಪ್ರಕಟಿಸಿದ್ದ ಸರ್ಕಾರ, ಸಾರ್ವಜನಿಕರಿಂದ ಸಲಹೆ ಮತ್ತು ಆಕ್ಷೇಪಣೆಗಳನ್ನು ಆಹ್ವಾನಿಸಿತ್ತು. ಜೂನ್ 23ರಂದು ಅಂತಿಮ ಅಧಿಸೂಚನೆ ಪ್ರಕಟಿಸಿತ್ತು. ಮರುವಿಂಗಡಣೆಗೊಂಡ ಬಿಬಿಎಂಪಿ ವಾರ್ಡ್ಗಳಲ್ಲಿನ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವಂತೆ ಬಿಬಿಎಂಪಿಗೆ ರಾಜ್ಯ ಚುನಾವಣಾ ಆಯೋಗ ಸೂಚನೆ ನೀಡಿತ್ತು. ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಈಗಾಗಲೇ ಆರಂಭವಾಗಿದೆ. ಸೆ. 10ರಂದು ಬಿಬಿಎಂಪಿ ಕೌನ್ಸಿಲ್ ಅವಧಿ ಮುಕ್ತಾಯಗೊಳ್ಳುವುದರಿಂದ ಈ ವೇಳೆಗಾಗಲೇ ಚುನಾವಣೆಗೆ ಸಿದ್ಧತೆ ನಡೆಯಬೇಕಿತ್ತು. ಆದರೆ ಈಗ ವಾರ್ಡ್ಗಳ ಮರುವಿಂಗಡಣೆ ಮಾಡಲು ಮುಂದಾದರೆ ಪುನಃ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಬೇಕಾಗುತ್ತದೆ. ಇದರಿಂದ ಚುನಾವಣೆ ಮತ್ತಷ್ಟು ವಿಳಂಬವಾಗುತ್ತದೆ.
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications