100 ಕೋಟಿ ವೆಚ್ಚದಲ್ಲಿ ಕೆರೆ ಕಾಯಕಲ್ಪಕ್ಕೆ ಸಂಪುಟ ಸಭೆ ನಿರ್ಧಾರ
ಕೆರೆಗಳ ಹೂಳೆತ್ತುವ ಯೋಜನೆಗೆ 100 ಕೋಟಿ ರೂ. ಹಣವನ್ನು ಮೀಸಲಿಟ್ಟಿದ್ದು, ಒಂದೆರಡು ದಿನಗಳಲ್ಲಿ ಹಣಕಾಸಿನ ಇಲಾಖೆಯ ಅನುಮತಿ ಪಡೆದು ಅಂತಿಮ ಆದೇಶ ಹೊರಡಿಸಲಾಗುವುದು ಎಂದು ಟಿಬಿ ಜಯಚಂದ್ರ ಹೇಳಿದ್ದಾರೆ.
ಬೆಂಗಳೂರು, ಮೇ 17: ಸತತ ಬರಗಾಲದ ಹಿನ್ನೆಲೆಯಲ್ಲಿ ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದ ಐದು ಕೆರೆಗಳ ಹೂಳೆತ್ತುವ ಕಾರ್ಯಕ್ಕೆ ಅತಿ ಶೀಘ್ರದಲ್ಲಿ ಆದೇಶ ಹೊರಡಿಸಲಾಗುವುದು ಎಂದು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ತಿಳಿಸಿದ್ದಾರೆ.
ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡುತ್ತಾ ಅವರು ಈ ಹೇಳಿಕೆ ನೀಡಿದ್ದಾರೆ. ಕೆರೆಗಳ ಹೂಳೆತ್ತುವ ಯೋಜನೆಗೆ 100 ಕೋಟಿ ರೂ. ಹಣವನ್ನು ಮೀಸಲಿಟ್ಟಿದ್ದು, ಒಂದೆರಡು ದಿನಗಳಲ್ಲಿ ಹಣಕಾಸಿನ ಇಲಾಖೆಯ ಅನುಮತಿ ಪಡೆದು ಅಂತಿಮ ಆದೇಶ ಹೊರಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಮಳೆಗಾಲಕ್ಕೂ ಮೊದಲೇ ಹೂಳೆತ್ತಲಾಗುವುದು. ಮಳೆಗಾಲ ಆರಂಭದ ಮುನ್ನವೇ ಕೆರೆಗಳ ಹೂಳೆತ್ತುವುದರಿಂದ ಹೆಚ್ಚು ನೀರನ್ನು ಸಂಗ್ರಹ ಮಾಡಲು ಅನುಕೂಲವಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
100 ಕೋಟಿ ವೆಚ್ಚದಲ್ಲಿ ಕರಾವಳಿಯಲ್ಲಿ ವೆಂಟೆಡ್ ಡ್ಯಾಂ
ಕರಾವಳಿ ಜಿಲ್ಲೆಗಳಾದ ಉಡುಪಿ, ಮಂಗಳೂರು ಹಾಗೂ ಉತ್ತರ ಕನ್ನಡದಲ್ಲಿ ಸಮುದ್ರಕ್ಕೆ ವ್ಯರ್ಥವಾಗಿ ಹೋಗುವ ನೀರನ್ನು ದಾಸ್ತಾನು ಮಾಡಲು 100 ಕೋಟಿ ರೂ ವೆಚ್ಚದಲ್ಲಿ ವೆಂಟೆಡ್ ಡ್ಯಾಂಗಳನ್ನು ನಿರ್ಮಿಸಲಾಗುವುದು. ಮೇಲ್ಮೈ ನೀರನ್ನು ಹೆಚ್ಚು ಸಂಗ್ರಹ ಮಾಡಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಜಯಚಂದ್ರ ಮಾಹಿರಿ ನೀಡಿದ್ದಾರೆ.
ಬಡ್ತಿ ಮೀಸಲಾತಿ
ಬಡ್ತಿ ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ರಾಜ್ಯ ಸರ್ಕಾರದ ಮೇಲ್ಮನವಿ ಜೊತೆಗೆ ಹಲವಾರು ಖಾಸಗಿ ಅರ್ಜಿಗಳು ನ್ಯಾಯಲಯದ ಮುಂದೆ ಸಲ್ಲಿಕೆಯಾಗಿದೆ. ನ್ಯಾಯಾಲಯ ಯಾವುದೇ ಸಂದರ್ಭದಲ್ಲಿ ತೀರ್ಪು ಪ್ರಕಟಿಸುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.
ಈಗಾಗಲೇ ಸುಪ್ರಿಂಕೋರ್ಟ್ನ ನಿರ್ದೇಶನದಲ್ಲಿ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ರಚಿತವಾಗಿರುವ ಸಮಿತಿ ವರದಿ ನೀಡಿದೆ. ಇದನ್ನು ಆಡಳಿತ, ಸಿಬ್ಬಂದಿ ಸುಧಾರಣಾ ಇಲಾಖೆ ಶೀಘ್ರದಲ್ಲಿ ಅನುಷ್ಠಾನಗೊಳಿಸುವ ಸಿದ್ದತೆ ಮಾಡಿ ಕೊಂಡಿದೆ ಎಂದು ಸಚಿವರು ತಿಳಿಸಿದರು.
-
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು?












Click it and Unblock the Notifications