ಸಚಿವ ಸಂಪುಟ ವಿಸ್ತರಣೆ: ಕುತೂಹಲ ಮೂಡಿಸಿದ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿ ಭೇಟಿ
ಬೆಂಗಳೂರು, ಫೆಬ್ರವರಿ 7: ಅಧಿಕೃತ ಕಾರ್ಯಕ್ರಮದ ಮೇರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ದಿನಗಳ ಭೇಟಿಗಾಗಿ ಸೋಮವಾರ ದೆಹಲಿಗೆ ತೆರಳಲಿದ್ದು, ಸಚಿವ ಸಂಪುಟ ಸರ್ಕಸ್ ಮತ್ತಷ್ಟು ಕುತೂಹಲ ಮೂಡಿಸಿದೆ. ಅವಕಾಶ ಸಿಕ್ಕರೆ ಈ ಕುರಿತು ವರಿಷ್ಠರೊಂದಿಗೆ ಚರ್ಚಿಸಲಿದ್ದಾರೆ.
ಸೋಮವಾರದಂದು ಬಿಜೆಪಿ ವರಿಷ್ಠರನ್ನು ಭೇಟಿ ಮಾಡುವ ಸಾಧ್ಯತೆ ಇದ್ದು, ಈ ವೇಳೆ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಪ್ರಸ್ತಾಪಿಸಲಿದ್ದಾರೆ ಎನ್ನಲಾಗುತ್ತಿದೆ. ವರಿಷ್ಠರ ಭೇಟಿಗೆ ಸಮಯ ಕೇಳಿದ್ದೇನೆ. ಭೇಟಿಗೆ ಅವಕಾಶ ಸಿಕ್ಕರೆ ಚರ್ಚೆ ನಡೆಸುತ್ತೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಇತ್ತ ರಾಜ್ಯದಲ್ಲಿ ಸಚಿವಾಕಾಂಕ್ಷಿ ಶಾಸಕರ ಲಾಬಿ ಮುಂದುವರಿದಿದ್ದು, ಸಚಿವ ಸ್ಥಾನ ಮೇಲೆ ನನಗೆ ಆಸೆ ಇಲ್ಲ. ಆದರೆ 13 ಜಿಲ್ಲೆಗಳಿಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಪರೋಕ್ಷವಾಗಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅಸಮಾಧಾನ ಹೊರಹಾಕಿದರು.

ಇನ್ನು ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನದ ಬಗ್ಗೆ ಕೇಂದ್ರ ನಾಯಕರು ನಿರ್ಣಯ ಮಾಡುತ್ತಾರೆ. ಇತ್ತ ಸಿಡಿ ಕೇಸ್ನಲ್ಲಿ ಕ್ಲೀನ್ಚಿಟ್ ಪಡೆದ ರಮೇಶ್ ಜಾರಕಿಹೊಳಿ ಬಿಜೆಪಿ ಪ್ರಬಲ ನಾಯಕರ ಮೂಲಕ ವರಿಷ್ಠರ ಮೇಲೆ ಒತ್ತಡ ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ.
ಪಕ್ಷದ ವರಿಷ್ಠಜೊತೆಗಿನ ಚರ್ಚೆಯ ಬಳಿಕ ಸಂಪುಟ ವಿಸ್ತರಣೆಯೇ ಅಥವಾ ಪುನಾರಚನೆಯೇ ಎಂಬುದರ ಬಗ್ಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ. ಸದ್ಯ ಐದು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ವರಿಷ್ಠರು ಗಂಭೀರವಾಗಿ ತೊಡಗಿಸಿಕೊಂಡಿರುವುದರಿಂದ ಸಂಪುಟದ ಬಗ್ಗೆ ಯಾವುದೇ ಅಂತಿಮ ನಿರ್ಧಾರ ತಕ್ಷಣಕ್ಕೆ ಆಗುವುದು ಅನುಮಾನ ಎನ್ನಲಾಗುತ್ತಿದೆ.
ರಾಜ್ಯದಲ್ಲಿನ ವಿದ್ಯಮಾನಗಳ ಬಗ್ಗೆ ಎಲ್ಲ ಮಾಹಿತಿಯನ್ನೂ ವರಿಷ್ಠರ ಮುಂದಿಡಲು ಮುಖ್ಯಮಂತ್ರಿಗಳು ಬಯಸಿದ್ದಾರೆ. ಒಟ್ಟಾರೆ, ಸಂಪುಟದ ಬಗ್ಗೆ ವರಿಷ್ಠರೇ ಸೂಕ್ತ ನಿರ್ಣಯ ಕೈಗೊಳ್ಳಲಿ ಎಂಬ ನಿಲವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಂದಿದ್ದಾರೆ ಎನ್ನಲಾಗಿದೆ.

Recommended Video
ಸಚಿವ ಸ್ಥಾನದ ಆಕಾಂಕ್ಷಿಗಳಿಂದ ಸಿಎಂ ಬೊಮ್ಮಾಯಿಗೆ ದುಂಬಾಲು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ದೆಹಲಿಗೆ ತೆರಳುವುದು ನಿಗದಿಯಾದ ಬೆನ್ನಲ್ಲೇ ಸಚಿವ ಸ್ಥಾನದ ಆಕಾಂಕ್ಷಿಗಳಿಂದ ಒತ್ತಡ ಹೆಚ್ಚಿದೆ. ಶುಕ್ರವಾರ ಶಾಸಕರಾದ ಎಂ.ಪಿ. ರೇಣುಕಾಚಾರ್ಯ, ಮಾಡಾಳ್ ವಿರೂಪಾಕ್ಷಪ್ಪ, ಎಂಎಲ್ಸಿ ಆರ್.ಶಂಕರ್, ಆನಂದ್ ಮಾಮನಿ ಮತ್ತಿತರ ಕೆಲವು ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ನಡೆದಲ್ಲಿ ತಮಗೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಮುಖ್ಯಮಂತ್ರಿಗಳು ಸಂಸತ್ ಅಧಿವೇಶನ ಹಿನ್ನೆಲೆಯಲ್ಲಿ ಸಂಸದರೊಂದಿಗೆ ಹಾಗೂ ಅಂತಾರಾಜ್ಯ ಜಲ ವಿವಾದಗಳ ಕುರಿತಂತೆ ಕಾನೂನು ತಜ್ಞರೊಂದಿಗೆ ಸಭೆ ನಡೆಸುವ ಉದ್ದೇಶದೊಂದಿಗೆ ದೆಹಲಿಗೆ ತೆರಳುತ್ತಿದ್ದಾರೆ. ಈ ವೇಳೆ ಸಂಪುಟ ಕಸರತ್ತಿನ ಬಗ್ಗೆ ಚರ್ಚೆ ನಡೆಸಲು ಪಕ್ಷದ ವರಿಷ್ಠರು ಲಭಿಸುವ ಸಾಧ್ಯತೆ ತೀರಾ ಕಡಮೆ ಎನ್ನಲಾಗುತ್ತಿದೆ. ಆದರೂ ಮುಖ್ಯಮಂತ್ರಿಗಳ ಮೇಲೆ ಶಾಸಕರು ತಮ್ಮ ಒತ್ತಡ ಮುಂದುವರೆಸಿದ್ದಾರೆ.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ












Click it and Unblock the Notifications