ರಾಜ್ಯ ಸಚಿವ ಸಂಪುಟ ಸಭೆ: ಜಿಂದಾಲ್ಗೆ ಜಮೀನು ಕುರಿತು ಮಹತ್ವದ ಚರ್ಚೆ
ಬೆಂಗಳೂರು, ಮೇ 27: ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಗುರುವಾರ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ವೇಳೆ ಪ್ರಮುಖ ಆಡಳಿತಾತ್ಮಕ ವಿಷಯಗಳು ಚರ್ಚೆಗೆ ಬರಲಿವೆ.
ಸಚಿವ ಸಂಪುಟ ಸಭೆಯಲ್ಲಿ ಮುಖ್ಯವಾಗಿ ಜಿಂದಾಲ್ಗೆ ಜಮೀನು ನೀಡುವ ತೀರ್ಮಾನವನ್ನು ಮರು ಪರಿಶೀಲನೆ ಮಾಡುವ ಸಾಧ್ಯತೆ ಇದೆ. ಈ ವಿಚಾರ ಹೈಕಮಾಂಡ್ವರೆಗೂ ತಲುಪಿದ್ದು, ಸಂಪುಟ ಸಭೆಯಲ್ಲಿ ಚರ್ಚೆಯಾಗುವ ಪ್ರಮುಖ ವಿಷಯವಾಗಿದೆ.
ಒಟ್ಟು 28 ವಿಷಯಗಳ ಕುರಿತು ಮಹತ್ವದ ತೀರ್ಮಾನ ಕೈಗೊಳ್ಳಲಿರುವ ಸಂಪುಟ ಸಭೆಯಲ್ಲಿ ಜಿಂದಾಲ್ಗೆ ಭೂಮಿ ಮಾರಾಟ ನಿರ್ಧಾರ ವಾಪಸ್ಗೆ ಸಚಿವರ ಆಗ್ರಹ ಮಾಡುವ ಸಾಧ್ಯತೆ ಇದೆ. ಆಡಳಿತ ಪಕ್ಷದ ಬಹುತೇಕ ಶಾಸಕರು ಸರ್ಕಾರದ ಈ ನಿರ್ಧಾರಕ್ಕೆ ವಿರೋಧಿಸಿದ್ದರು.

ರಾಜ್ಯ ಸರ್ಕಾರ ಜಿಂದಾಲ್ ಕಬ್ಬಿಣ ಮತ್ತು ಉಕ್ಕು ಸಂಸ್ಥೆೆಗೆ ರಾಜ್ಯ ಸರ್ಕಾರ ಕಡಿಮೆ ದರದಲ್ಲಿ 3667 ಎಕರೆ ಜಮೀನು ಮಾರಾಟ ಮಾಡಿರುವ ಆರೋಪ ಕೇಳಿಬಂದಿದೆ. ವಿರೋಧ ಪಕ್ಷದಲ್ಲಿದ್ದಾಗ ಬಿಜೆಪಿ ಹಲವು ನಾಯಕರು ಇದನ್ನು ವಿರೋಧಿಸಿದ್ದರು. ಈಗ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಮಾರಾಟ ಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ.
ಕೆಲವು ಸಚಿವರೂ ಸಹ ಸರ್ಕಾರದ ನಿರ್ಧಾರವನ್ನು ಬೆಂಬಲಿಸದೆ, ವಾಪಸ್ ಪಡೆಯುವಂತೆ ಸಿಎಂಗೆ ಮನವಿ ಮಾಡಲಿದ್ದಾರೆ. ಜಿಂದಾಲ್ಗೆ ಭೂಮಿ ಮಾರಾಟದಲ್ಲಿ ಅಕ್ರಮ ನಡದಿದೆ ಎಂದು ಬಿಜೆಪಿ ಹೈಕಮಾಂಡ್ಗೆ ಸ್ವಪಕ್ಷದ ಶಾಸಕರೇ ದೂರು ಸಲ್ಲಿಸಿದ್ದಾರೆ ಎಂಬ ಮಾಹಿತಿಯೂ ಇದೆ.
ಹಿರಿಯ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಸೇರಿದಂತೆ ಅನೇಕ ಶಾಸಕರು ಸರ್ಕಾರದ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂದು ಹೈಕಮಾಂಡ್ಗೆ ಲಿಖಿತ ದೂರು ಸಲ್ಲಿಸಿದ್ದರು.
ಇದೂ ಕೂಡ ಬಿ.ಎಸ್ ಯಡಿಯೂರಪ್ಪರ ಸಿಎಂ ಕುರ್ಚಿಗೆ ಕಂಟಕ ತರಲಿದೆ ಎಂಬ ಮಾತುಗಳೂ ಕೇಳಿಬಂದಿವೆ. ಜಿಂದಾಲ್ಗೆ ಭೂಮಿ ಮಾರಾಟ ವಿಷಯವೇ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗು ಏಳಲು ಪ್ರಮುಖ ಕಾರಣವಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications