ಏ. 30ರವರೆಗೂ ಆರಾಧನಾ ಸೇವೆ ನಡೆಸದಂತೆ ಚರ್ಚ್ಗಳಿಗೆ ಸೂಚನೆ
ಬೆಂಗಳೂರು, ಏಪ್ರಿಲ್ 9: ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದ್ದು, ಕೊರೊನಾ ನಿಯಂತ್ರಣಕ್ಕೆ ಕೆಲವು ನಿರ್ಬಂಧಗಳನ್ನು ಹೇರಲಾಗುತ್ತಿದೆ. ಏಪ್ರಿಲ್ 11ರಿಂದ ಏಪ್ರಿಲ್ 30ರವರಗೂ ಯಾವುದೇ ಆರಾಧನಾ ಸೇವೆಗಳನ್ನು ಆಯೋಜಿಸದಂತೆ ಹಾಗೂ ಭಾನುವಾರದ ಹೊತ್ತು ಪ್ರಾರ್ಥನೆಗೆ ಚರ್ಚ್ಗಳನ್ನು ತೆರಯುವಂತೆ ಕರ್ನಾಟಕ ಕೇಂದ್ರ ಡಯಾಸಿಸ್ ಸೂಚಿಸಿದೆ.
ಈ ಕುರಿತು ಪತ್ರ ಬರೆದಿರುವ ಕೇಂದ್ರ ಡಯಾಸಿಸ್, "ದೇಶದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾಗಿದೆ. ಈ ಸೋಂಕು ಅತಿ ವೇಗವಾಗಿ ತಗುಲುತ್ತಿದ್ದು, ಈಗಾಗಲೇ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೋಂಕಿಗೆ ತುತ್ತಾಗಿದ್ದಾರೆ. ಕೊರೊನಾ ಹರಡುವಿಕೆ ತಡೆಯಲು ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಬೇಕಿದೆ" ಎಂದು ಉಲ್ಲೇಖಿಸಿದೆ.
ಏಪ್ರಿಲ್ 11ರಿಂದ 30ರವರೆಗೂ ಆರಾಧನಾ ಸೇವೆಯನ್ನು ಆಯೋಜಿಸಬಾರದು. ಭಕ್ತರಿಗೆಂದು ಆನ್ಲೈನ್ ಆರಾಧನಾ ಸೇವೆ ಆರಂಭಿಸಿ. ಭಾನುವಾರ ಸಾಮೂಹಿಕ ಪ್ರಾರ್ಥನೆಗಲ್ಲದೇ ವೈಯಕ್ತಿಕ ಪ್ರಾರ್ಥನೆಗೆ ಅವಕಾಶ ನೀಡಬೇಕು. ಚರ್ಚ್ಗಳ ಸ್ಯಾನಿಟೈಸೇಷನ್, ಮಾಸ್ಕ್ ಧರಿಸುವಿಕೆಯಂಥ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದೆ.

ಬ್ಯಾಪ್ಟಿಸಂ, ಮದುವೆ, ಅಂತ್ಯಸಂಸ್ಕಾರದಂಥ ಕಾರ್ಯಗಳಿಗೆ 50ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.
ಮಹಾರಾಷ್ಟ್ರ, ಛತ್ತೀಸ್ಗಡ, ಕರ್ನಾಟಕ, ಉತ್ತರ ಪ್ರದೇಶ, ದೆಹಲಿ, ಮಧ್ಯಪ್ರದೇಶ, ತಮಿಳುನಾಡು, ಗುಜರಾತ್, ಕೇರಳ, ಪಂಜಾಬ್ನಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿವೆ. ಈ ಬೆನ್ನಲ್ಲೇ ಕರ್ನಾಟಕದಲ್ಲಿಯೂ ಕೆಲವು ನಿರ್ಬಂಧಗಳನ್ನು ಹೇರಲಾಗಿದೆ.
Recommended Video
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ










Click it and Unblock the Notifications