ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಬೆಂಕಿ ದುರಂತ: ಸಿಐಡಿ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ
ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಶನಿವಾರ 14 ಜನರ ಸಾವಿಗೆ ಕಾರಣವಾದ ಬೆಂಕಿ ದುರ್ಘಟನೆ ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ)ಗೆ ಒಪ್ಪಿಸಲಾಗಿದೆ. ಭಾನುವಾರ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘಟನೆ ಸಂಬಂಧ ಸಿಐಡಿ ತನಿಖೆ ನಡೆಸಲು ಆದೇಶ ನೀಡಿದ್ದಾರೆ.
ಪರವಾನಿಗೆದಾರರ ನಿರ್ಲಕ್ಷ್ಯವೇ ದುರ್ಘಟನೆಗೆ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇದೊಂದು ದೊಡ್ಡ ದುರಂತ, ಸಿಐಡಿ ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಲಿದ್ದು, ಸತ್ಯವನ್ನು ಬಯಲಿಗೆಳೆಯಲಿದೆ ಎಂದು ಹೇಳಿದರು.

ಕರ್ನಾಟಕ-ತಮಿಳುನಾಡು ಗಡಿಯಿಂದ ಕೆಲವು ನೂರು ಮೀಟರ್ ದೂರದಲ್ಲಿರುವ ಶ್ರೀ ಬಾಲಾಜಿ ಟ್ರೇಡರ್ಸ್ಗೆ ಕಾರ್ಮಿಕರು ಟ್ರಕ್ನಿಂದ ಪಟಾಕಿಗಳನ್ನು ಇಳಿಸುತ್ತಿದ್ದಾಗ ಶನಿವಾರ ಮಧ್ಯಾಹ್ನ 3:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ದೀಪಾವಳಿಗೆ ಮುನ್ನ ತಮಿಳುನಾಡಿನ ಪಟಾಕಿ ಕೇಂದ್ರವಾದ ಶಿವಕಾಶಿಯಿಂದ ಅತ್ತಿಬೆಲೆಗೆ ಪಟಾಕಿಗಳನ್ನು ಸಾಗಿಸಲಾಗಿತ್ತು.
ಸುರಕ್ಷತಾ ಕ್ರಮ ಅನುಸರಿಸಿಲ್ಲ
ಪರವಾನಗಿ ಪಡೆದವರಿಗೆ ಏಕಕಾಲಕ್ಕೆ 1,000 ಕೆಜಿ ಪಟಾಕಿಗಳನ್ನು ಇಟ್ಟುಕೊಂಡು ಮಾರಾಟ ಮಾಡಲು ಅನುಮತಿ ನೀಡಲಾಗಿದೆ ಮತ್ತು ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹಿಸಲು ಅವಕಾಶ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
"ನಾನು ನೋಡಿದ ಪ್ರಕಾರ, ಯಾವುದೇ ಸುರಕ್ಷತಾ ಕ್ರಮಗಳನ್ನು ಅನುಸರಿಸಲಾಗಿಲ್ಲ. ಯಾವುದೇ ಅಗ್ನಿಶಾಮಕಗಳನ್ನು ಇರಿಸಲಾಗಿಲ್ಲ. ಇದು ತುಂಬಾ ಜನದಟ್ಟಣೆಯ ಪ್ರದೇಶವಾಗಿದೆ. ಗೋಡೌನ್ ಅನ್ನು ಸಹ ವಿಸ್ತರಿಸಲಾಗಿದೆ. ಸರಿಯಾದ ಅನುಮತಿಗಳನ್ನು ನೀಡಲಾಗಿದೆಯೇ ಎಂದು ಪರಿಶೀಲಿಸಬೇಕಾಗಿದೆ. ನಿಖರವಾದ ಕಾರಣ ತನಿಖೆಯ ನಂತರ ತಿಳಿಯಲಿದೆ" ಎಂದು ಅವರು ಹೇಳಿದರು.
"ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಮತ್ತು ಪೊಲೀಸರಿಂದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಸ್ವೀಕರಿಸಿದ್ದೇನೆ ಎಂದು ಜಿಲ್ಲಾಧಿಕಾರಿ (ಡಿಸಿ) ನನಗೆ ಹೇಳಿದರು, ಜಿಲ್ಲಾಧಿಕಾರಿಗಳು ವೈಯಕ್ತಿಕ ಭೇಟಿ ನೀಡಬೇಕಾಗಿತ್ತು. ವರದಿಯನ್ನು ನೀಡಿದವರು ಸ್ಫೋಟಕ ಕಾಯ್ದೆಯಡಿ ಪರವಾನಗಿ ನೀಡಿರುವುದರಿಂದ ಅದರ ಅಡಿಯಲ್ಲಿ ಸರಿಯಾದ ಕಾರ್ಯವಿಧಾನವನ್ನು ಅನುಸರಿಸಲಾಗಿದೆಯೇ ಎಂದು ಪರಿಶೀಲಿಸಲಾಗುವುದು" ಎಂದು ಸಿದ್ದರಾಮಯ್ಯ ಹೇಳಿದರು.
ಮೃತರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳು ಎಂದು ಸಿಎಂ ಹೇಳಿದ್ದಾರೆ. "ಅವರು ರಜಾದಿನಗಳಲ್ಲಿ ಹಣ ಸಂಪಾದಿಸಲು ಇಲ್ಲಿಗೆ ಬಂದಿದ್ದರು, ಮ್ಯಾನೇಜರ್ ಹೊರತುಪಡಿಸಿ, ಉಳಿದವರು ಯಾರೂ ಖಾಯಂ ಉದ್ಯೋಗಿಗಳು ಆಗಿರಲಿಲ್ಲ ಎಂದು ಹೇಳಿದ್ದಾರೆ.
ಮೃತರ ಕುಟುಂಬಕ್ಕೆ ಪರಿಹಾರ
ಪರವಾನಗಿದಾರ ರಾಮಸ್ವಾಮಿ ರೆಡ್ಡಿ, ಅಂಗಡಿ ನಡೆಸುತ್ತಿರುವ ಅವರ ಪುತ್ರ ನವೀನ್ ರೆಡ್ಡಿ ಮತ್ತು ಪ್ಲಾಟ್ ಮಾಲೀಕ ಅನಿಲ್ ರೆಡ್ಡಿ ಅವರನ್ನು ಬಂಧಿಸಲಾಗಿದೆ, ಕೊಲೆಗೆ ಸಮನಾದ ಹತ್ಯೆ ಸೇರಿದಂತೆ ಹಲವು ಐಪಿಸಿ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಿಎಂ ಹೇಳಿದರು.
ಶನಿವಾರ ತಡರಾತ್ರಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಇದಲ್ಲದೇ ಗಾಯಗೊಂಡ ಮೂವರ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ಸಿದ್ದರಾಮಯ್ಯ ಹೇಳಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications