ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಬೆಂಕಿ ದುರಂತ: ಸಿಐಡಿ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ
ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಶನಿವಾರ 14 ಜನರ ಸಾವಿಗೆ ಕಾರಣವಾದ ಬೆಂಕಿ ದುರ್ಘಟನೆ ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ)ಗೆ ಒಪ್ಪಿಸಲಾಗಿದೆ. ಭಾನುವಾರ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘಟನೆ ಸಂಬಂಧ ಸಿಐಡಿ ತನಿಖೆ ನಡೆಸಲು ಆದೇಶ ನೀಡಿದ್ದಾರೆ.
ಪರವಾನಿಗೆದಾರರ ನಿರ್ಲಕ್ಷ್ಯವೇ ದುರ್ಘಟನೆಗೆ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇದೊಂದು ದೊಡ್ಡ ದುರಂತ, ಸಿಐಡಿ ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಲಿದ್ದು, ಸತ್ಯವನ್ನು ಬಯಲಿಗೆಳೆಯಲಿದೆ ಎಂದು ಹೇಳಿದರು.

ಕರ್ನಾಟಕ-ತಮಿಳುನಾಡು ಗಡಿಯಿಂದ ಕೆಲವು ನೂರು ಮೀಟರ್ ದೂರದಲ್ಲಿರುವ ಶ್ರೀ ಬಾಲಾಜಿ ಟ್ರೇಡರ್ಸ್ಗೆ ಕಾರ್ಮಿಕರು ಟ್ರಕ್ನಿಂದ ಪಟಾಕಿಗಳನ್ನು ಇಳಿಸುತ್ತಿದ್ದಾಗ ಶನಿವಾರ ಮಧ್ಯಾಹ್ನ 3:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ದೀಪಾವಳಿಗೆ ಮುನ್ನ ತಮಿಳುನಾಡಿನ ಪಟಾಕಿ ಕೇಂದ್ರವಾದ ಶಿವಕಾಶಿಯಿಂದ ಅತ್ತಿಬೆಲೆಗೆ ಪಟಾಕಿಗಳನ್ನು ಸಾಗಿಸಲಾಗಿತ್ತು.
ಸುರಕ್ಷತಾ ಕ್ರಮ ಅನುಸರಿಸಿಲ್ಲ
ಪರವಾನಗಿ ಪಡೆದವರಿಗೆ ಏಕಕಾಲಕ್ಕೆ 1,000 ಕೆಜಿ ಪಟಾಕಿಗಳನ್ನು ಇಟ್ಟುಕೊಂಡು ಮಾರಾಟ ಮಾಡಲು ಅನುಮತಿ ನೀಡಲಾಗಿದೆ ಮತ್ತು ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹಿಸಲು ಅವಕಾಶ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
"ನಾನು ನೋಡಿದ ಪ್ರಕಾರ, ಯಾವುದೇ ಸುರಕ್ಷತಾ ಕ್ರಮಗಳನ್ನು ಅನುಸರಿಸಲಾಗಿಲ್ಲ. ಯಾವುದೇ ಅಗ್ನಿಶಾಮಕಗಳನ್ನು ಇರಿಸಲಾಗಿಲ್ಲ. ಇದು ತುಂಬಾ ಜನದಟ್ಟಣೆಯ ಪ್ರದೇಶವಾಗಿದೆ. ಗೋಡೌನ್ ಅನ್ನು ಸಹ ವಿಸ್ತರಿಸಲಾಗಿದೆ. ಸರಿಯಾದ ಅನುಮತಿಗಳನ್ನು ನೀಡಲಾಗಿದೆಯೇ ಎಂದು ಪರಿಶೀಲಿಸಬೇಕಾಗಿದೆ. ನಿಖರವಾದ ಕಾರಣ ತನಿಖೆಯ ನಂತರ ತಿಳಿಯಲಿದೆ" ಎಂದು ಅವರು ಹೇಳಿದರು.
"ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಮತ್ತು ಪೊಲೀಸರಿಂದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಸ್ವೀಕರಿಸಿದ್ದೇನೆ ಎಂದು ಜಿಲ್ಲಾಧಿಕಾರಿ (ಡಿಸಿ) ನನಗೆ ಹೇಳಿದರು, ಜಿಲ್ಲಾಧಿಕಾರಿಗಳು ವೈಯಕ್ತಿಕ ಭೇಟಿ ನೀಡಬೇಕಾಗಿತ್ತು. ವರದಿಯನ್ನು ನೀಡಿದವರು ಸ್ಫೋಟಕ ಕಾಯ್ದೆಯಡಿ ಪರವಾನಗಿ ನೀಡಿರುವುದರಿಂದ ಅದರ ಅಡಿಯಲ್ಲಿ ಸರಿಯಾದ ಕಾರ್ಯವಿಧಾನವನ್ನು ಅನುಸರಿಸಲಾಗಿದೆಯೇ ಎಂದು ಪರಿಶೀಲಿಸಲಾಗುವುದು" ಎಂದು ಸಿದ್ದರಾಮಯ್ಯ ಹೇಳಿದರು.
ಮೃತರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳು ಎಂದು ಸಿಎಂ ಹೇಳಿದ್ದಾರೆ. "ಅವರು ರಜಾದಿನಗಳಲ್ಲಿ ಹಣ ಸಂಪಾದಿಸಲು ಇಲ್ಲಿಗೆ ಬಂದಿದ್ದರು, ಮ್ಯಾನೇಜರ್ ಹೊರತುಪಡಿಸಿ, ಉಳಿದವರು ಯಾರೂ ಖಾಯಂ ಉದ್ಯೋಗಿಗಳು ಆಗಿರಲಿಲ್ಲ ಎಂದು ಹೇಳಿದ್ದಾರೆ.
ಮೃತರ ಕುಟುಂಬಕ್ಕೆ ಪರಿಹಾರ
ಪರವಾನಗಿದಾರ ರಾಮಸ್ವಾಮಿ ರೆಡ್ಡಿ, ಅಂಗಡಿ ನಡೆಸುತ್ತಿರುವ ಅವರ ಪುತ್ರ ನವೀನ್ ರೆಡ್ಡಿ ಮತ್ತು ಪ್ಲಾಟ್ ಮಾಲೀಕ ಅನಿಲ್ ರೆಡ್ಡಿ ಅವರನ್ನು ಬಂಧಿಸಲಾಗಿದೆ, ಕೊಲೆಗೆ ಸಮನಾದ ಹತ್ಯೆ ಸೇರಿದಂತೆ ಹಲವು ಐಪಿಸಿ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸಿಎಂ ಹೇಳಿದರು.
ಶನಿವಾರ ತಡರಾತ್ರಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಇದಲ್ಲದೇ ಗಾಯಗೊಂಡ ಮೂವರ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಲಿದೆ ಎಂದು ಸಿದ್ದರಾಮಯ್ಯ ಹೇಳಿದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications