ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೇರಳ ಸಿಎಂಗೆ ಕೃತಜ್ಞತೆ ಸಲ್ಲಿಸಿದ ಯಡಿಯೂರಪ್ಪ

|
Google Oneindia Kannada News

Recommended Video

ಕೇರಳ ಸಿಎಂಗೆ ಕೃತಜ್ಞತೆ ಸಲ್ಲಿಸಿದ ಯಡಿಯೂರಪ್ಪ | Oneindia Kannada

ಬೆಂಗಳೂರು, ಫೆಬ್ರವರಿ 18: ಕೇರಳದ ಗಡಿಯಲ್ಲಿರುವ ಕರ್ನಾಟಕದ ಜಿಲ್ಲೆಗಳಲ್ಲಿ ಕೇರಳದಿಂದ ವೈದ್ಯಕೀಯ ಹಾಗೂ ಜೈವಿಕ ತ್ಯಾಜ್ಯಗಳನ್ನು ಎಸೆಯುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಕೇರಳ ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, "ಕೇರಳದ ಗಡಿಯಲ್ಲಿರುವ ರಾಜ್ಯದ ಮೈಸೂರು, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ವೈದ್ಯಕೀಯ ಹಾಗೂ ಜೈವಿಕ ತ್ಯಾಜ್ಯಗಳನ್ನು ಎಸೆಯುವವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುವ ಮೂಲಕ, ಈ ಸಮಸ್ಯೆಗೆ ಕ್ಷಿಪ್ರವಾಗಿ ಸ್ಪಂದಿಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಕೃತಜ್ಞತೆ ಸಲ್ಲಿಸಬಯಸುತ್ತೇನೆ ಎಂದಿದ್ದಾರೆ.

ಸಿಎಂ ಯಡಿಯೂರಪ್ಪ ಆದೇಶ ತಡೆಹಿಡಿದ ಸಚಿವೆ ಶಶಿಕಲಾ ಜೊಲ್ಲೆಸಿಎಂ ಯಡಿಯೂರಪ್ಪ ಆದೇಶ ತಡೆಹಿಡಿದ ಸಚಿವೆ ಶಶಿಕಲಾ ಜೊಲ್ಲೆ

ಕೆಲವು ಮಾಧ್ಯಮಗಳಲ್ಲಿ ಕೇರಳದಿಂದ ಗಡಿಯಲ್ಲಿರುವ ರಾಜ್ಯದ ಜಿಲ್ಲೆಗಳಲ್ಲಿ ತ್ಯಾಜ್ಯ ಎಸೆಯಲಾಗುತ್ತಿದೆ ಎನ್ನುವ ಕುರಿತಾಗಿ ಬಂದಿರುವ ವರದಿಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

Karnataka CM B S Yediyurappa Gives Thanks To Kerala CM

ಈ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪರಿಸರ ಇಲಾಖೆ ಹಾಗೂ ಮಾಲಿನ್ಯ ನಿಯಂತ್ರಣ ಅಧಿಕಾರಿಗಳು ವಸ್ತುಸ್ಥಿತಿಯನ್ನು ಅರಿತು, ನೆರೆಯ ರಾಜ್ಯದಿಂದ ನಮ್ಮ ರಾಜ್ಯದಲ್ಲಿ ತ್ಯಾಜ್ಯ ಸುರಿಯುವ ವ್ಯಕ್ತಿಗಳು ಅಥವಾ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದೇನೆ. ಈ ಜೈವಿಕ-ವೈದ್ಯಕೀಯ ತ್ಯಾಜ್ಯಗಳನ್ನು ಬೆಲ್ಲ ತಯಾರಿಕೆಯಲ್ಲಿ ಇಂಧನವಾಗಿ ಬಳಕೆ ಮಾಡುವುದನ್ನು ತಡೆಗಟ್ಟುವಂತೆಯೂ ಅಧಿಕಾರಿಗಳಿಗೆ ಸೂಚಿಸಿದ್ದೇನೆ." ಎಂದು ತಿಳಿಸಿದ್ದಾರೆ.

ಶೀಘ್ರವೇ ಈ ಅಕ್ರಮವನ್ನು ತಡೆಯಲಾಗುವುದು ಎಂದು ಮುಖ್ಯಮಂತ್ರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
Karnataka CM B S Yediyurappa Gives Thanks To Kerala CM. For The Reason Of Kerala Government Takes Action On Garbage throwers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X