'ಸಿಎಂ ಕುರ್ಚಿ ಡೀಲ್: ಸಿಎಂ ಆಗಲು ಕಾಂಗ್ರೆಸ್ ಹೈಕಮಾಂಡ್ಗೆ ಕೋಟಿ ಕೋಟಿ ನೀಡಬೇಕು!'
Karnataka CM Tussle: ಕರ್ನಾಟಕದಲ್ಲಿ ಕುರ್ಚಿಗಾಗಿ ಕಿತ್ತಾಟ, ದೆಹಲಿಗೆ ತೆರಳಿ ತೆರೆಮರೆಯ ಕಸರತ್ತು ಜೋರಾಗಿತ್ತು. ಬೆಳಗಾವಿ ಅಧಿವೇಶನ ಹೊತ್ತಿಗೆ ತಾತ್ಕಾಲಿಕವಾಗಿ ಆ ವಿಚಾರ ತಣ್ಣಗಾಗಿದೆ. ಇದೇ ಹೊತ್ತಿನಲ್ಲಿ ಕಾಂಗ್ರೆಸ್ ರಾಜಾಧ್ಯಕ್ಷರೊಬ್ಬರು ಪತ್ನಿಯೊಬ್ಬರು ನೀಡಿರುವ ಹೇಳಿಕೆ ಭಾರಿ ಸದ್ದು ಮಾಡುತ್ತಿದೆ. 'ಸಿಎಂ ಕುರ್ಚಿ ಬೇಕಾದರೆ ಕಾಂಗ್ರೆಸ್ ಹೈಕಮಾಂಡ್ಗೆ ಕೋಟಿ ಕೋಟಿ ಹಣ ನೀಡಬೇಕು' ಎಂದಿದ್ದಾರೆ. ಅದನ್ನೆ ಉಲ್ಲೇಖಿಸಿ ರಾಜ್ಯ ಬಿಜೆಪಿ ಸಹ ' ಕೋಟಿಗೆ ಕುರ್ಚಿ ಡೀಲ್' ಎಂದು ಟೀಕಿಸಿದೆ.
ಕರ್ನಾಟಕ ಸಿಎಂ ಸ್ಥಾನ ಯಾರಿಗೆ? ಎಂಬ ಗೊಂದಲ ಉಂಟಾಗಿತ್ತು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಮಧ್ಯೆ ಬಿಗ್ ಫೈಟ್ ನೆಡೆದಿತ್ತು. ಉಭಯ ನಾಯಕ ಬಣದವರು ಸರತಿಯಾಗಿ ದೆಹಲಿ ಹೈಕಮಾಂಡ್ ಕಂಡು ಬಂದಿದ್ದಾರೆ. ಇದರ ಬೆನ್ನಲ್ಲೆ ಸಿಎಂ ಕುರ್ಚಿಗಾಗಿ ಕೋಟಿ ರೂಪಾಯಿ ಡೀಲ್ ವಿಚಾರ ಬೆಳಕಿಗೆ ಬಂದಿದೆ ಎಂದು ಬಿಜೆಪಿ ಟ್ವೀಟ್ ಮೂಲಕ ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡಿದೆ.

ಸಿಎಂ ಕುರ್ಚಿ ಬೇಕಾದರೆ ಬೇಕಾದರೆ ಕಾಂಗ್ರೆಸ್ ಹೈಕಮಾಂಡ್ಗೆ ಕೋಟಿ ಕೋಟಿ ನೀಡಬೇಕು ಎಂದು ಪಂಬಾಜ್ ಕಾಂಗ್ರೆಸ್ಸಿನ ಮಾಜಿ ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು ಅವರ ಪತ್ನಿ ಹೇಳಿದ್ದಾರೆ. ಇದು ಅತ್ಯಂತ ಗಂಭೀರವಾದುದು. ಕಾಂಗ್ರೆಸ್ಸಿನ ಭ್ರಷ್ಟ ಪರಂಪರೆಗೆ ಮತ್ತೊಂದು ಸಾಕ್ಷಿಯಾಗಿದೆ ಎಂದು ಬಿಜೆಪಿ ದೂರಿದೆ. ಈ ವಿಚಾರ ಕರ್ನಾಟಕ ವಿಧಾನಮಂಡಲ ಚಳಿಗಾಲ ಅಧಿವೇಶನದಲ್ಲೂ ಸದ್ದು ಮಾಡುವ ಸಾಧ್ಯತೆ ಇದೆ.
ಬಿಜೆಪಿ ಮುಂದುವರಿದು, ಕರ್ನಾಟಕ ಕಾಂಗ್ರೆಸ್ ಸರ್ಕಾರ ರಚನೆಯ ವೇಳೆಯಲ್ಲೂ ಇದೇ ಮಾದರಿ ಅನುಸರಿಸಲಾಗಿತ್ತೇ ಎನ್ನುವ ಅನುಮಾನ ಕಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಕುರ್ಚಿ ಜಗಳದ ನಡುವೆ ಸಿಎಂ ಕುರ್ಚಿ ಸಿದ್ದರಾಮಯ್ಯ ಪಾಲಾಗಿತ್ತು. ಎಷ್ಟು ಕೋಟಿ ನೀಡಿ ಮುಖ್ಯಮಂತ್ರಿ ಕುರ್ಚಿ ಖರೀದಿಸಿದ್ದು ಎಂಬುದನ್ನು ಸಿಎಂ ಸಿದ್ದರಾಮಯ್ಯ ಅವರೇ ಸ್ಪಷ್ಟಪಡಿಸಬೇಕು ಎಂದು ಟಾಂಗ್ ನೀಡಿತು.
ಸಿಎಂ ಕುರ್ಚಿ ಬೇಕಾದರೆ @INCIndia ಹೈಕಮಾಂಡ್ಗೆ ಕೋಟಿ ಕೋಟಿ ನೀಡಬೇಕು ಎಂದು ಪಂಬಾಜ್ ಕಾಂಗ್ರೆಸ್ಸಿನ ಮಾಜಿ ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು ಅವರ ಪತ್ನಿ ನೀಡಿರುವ ಹೇಳಿಕೆ ಅತ್ಯಂತ ಗಂಭೀರವಾದುದು. ಕಾಂಗ್ರೆಸ್ಸಿನ ಭ್ರಷ್ಟ ಪರಂಪರೆಗೆ ಮತ್ತೊಂದು ಸಾಕ್ಷಿಯಾಗಿದೆ.
— BJP Karnataka (@BJP4Karnataka) December 8, 2025
ಕರ್ನಾಟಕ ಕಾಂಗ್ರೆಸ್ ಸರ್ಕಾರ ರಚನೆಯ ವೇಳೆಯಲ್ಲೂ ಇದೇ ಮಾದರಿ… pic.twitter.com/mfcp48OATx
ಸಚಿವ ಸಂಪುಟ ಪುನರ್ ರಚನೆಯ ವೇಳೆಯಲ್ಲೂ ಸಚಿವಗಿರಿಗಾಗಿ ಕೋಟಿಗಟ್ಟಲೆ ಬೆಲೆ ನಿಗದಿ ಮಾಡಿರುವ ಸುದ್ದಿ ಹೊರಬಿದ್ದಿತ್ತು. ಈಗ ಕಾಂಗ್ರೆಸ್ ನಾಯಕನ ಪತ್ನಿಯ ಹೇಳಿಕೆಯ ಬಳಿಕ ಕರ್ನಾಟಕ ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಸೂಟ್ಕೇಸ್ ರಾಜಕಾರಣ ಅಂತೆಕಂತೆಗಳಲ್ಲ ಎನ್ನುವುದು ಸ್ಪಷ್ಟವಾಗಿದೆ ಎಂದು ಬಿಜೆಪಿ ದೂರಿದೆ. ಇದಕ್ಕೆ ಬಿಜೆಪಿ ನಾಯಕರು ಏನೆಂದು ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ತಿಳಿಯಲು ಜನ ಕಾತರದಿಂದ ಕಾಯುತ್ತಿದ್ದಾರೆ.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್












Click it and Unblock the Notifications