Sugar Factories: ಕರ್ನಾಟಕದ ಸಕ್ಕರೆ ಕಾರ್ಖಾನೆಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್
ಬೆಂಗಳೂರು, ಮೇ 05: ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯ ಕೆಲವು ಸಕ್ಕರೆ ಕಾರ್ಖಾನೆಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ. ಈ ಮೂಲಕ ಕೈಗಾರಿಕೆ ಹಾಗೂ ರೈತರಿಗೆ ಅನುಕೂಲಕರ ನಿರ್ಧಾರ ಕೈಗೊಂಡಿದೆ. ಸರ್ಕಾರ ಪ್ರಮುಖ ಯೋಜನೆ ರೂಪಿಸುವಂತೆ ಹಣಕಾಸಿ ಇಲಾಖೆಗೆ ಸೂಚನೆ ನೀಡಿದೆ ಎಂದು ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಅವರು ಸೋಮವಾರ ಮಾಹಿತಿ ನೀಡಿದ್ದಾರೆ.
ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಒದಗಿಸಬೇಕಾದ ನೆರವು ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಅವರು ಭಾಗವಹಿಸಿದ್ದರು. ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿರುವ ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ, ವಿಜಯಪುರ ಜಿಲ್ಲೆ ಬಬಲೇಶ್ವರ ತಾಲ್ಲೂಕಿನ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಹಾಗೂ ಇಂಡಿ ತಾಲ್ಲೂಕಿನ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಅಗತ್ಯವಿರುವ ಆರ್ಥಿಕ ನೆರವು ಹೇಗೆ ಒದಗಿಸಬೇಕು ಎನ್ನುವ ಬಗ್ಗೆ ಸರಿಯಾದ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿಯವರು ಹಣಕಾಸು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದರು.

ಹೆಚ್ಚಾಯ್ತು ಅರ್ಥಿಕ ವೆಚ್ಚ, ನೆರವು ಅಗತ್ಯ
ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆಗೆ 192 ಕೋಟಿ ರೂಪಾಯಿ ಮತ್ತು ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಗೆ 150 ಕೋಟಿ ರೂಪಾಯಿ ಹಾಗೂ ಭೀಮಾ ಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಗೆ 130 ಕೋಟಿ ರೂಪಾಯಿ ಬೇಕಾಗಿದೆ. ಇಷ್ಟು ನೆರವು ದೊರಕಿಸಿ ಕೊಟ್ಟರೆ, ವಿದ್ಯುತ್ ಉತ್ಪಾದನೆಯಿಂದ ಬರುವ ಹಣವನ್ನು ಸಾಲದ ಕಡೆಗೇ ಪಾವತಿಸಲು ಕಾರ್ಖಾನೆಗಳು ಆಸಕ್ತಿ ಹೊಂದಿವೆ ಎಂದು ತಿಳಿಸಿದರು.

ಎಥೆನಾಲ್ ಉತ್ಪಾದನಾ ಘಟಕ ಸ್ಥಾಪನೆ
ಕೃಷ್ಣಾ ಕಾರ್ಖಾನೆಯು 27 ಮೆಗಾವ್ಯಾಟ್ ಮತ್ತು ನಂದಿ ಕಾರ್ಖಾನೆಯು 37 ಮೆಗಾವ್ಯಾಟ್ ಸಾಮರ್ಥ್ಯದ ಸಹವಿದ್ಯುತ್ (ಕೋಜೆನ್) ಘಟಕ ಸ್ಥಾಪಿಸುವ ಆಸಕ್ತಿ ಹೊಂದಿವೆ. ಜೊತೆಗೆ ಕೃಷ್ಣಾ ಹಾಗೂ ಭೀಮಾ ಕಾರ್ಖಾನೆಯು ಎಥೆನಾಲ್ ಉತ್ಪಾದನಾ ಘಟಕವನ್ನೂ ಸ್ಥಾಪಿಸಲು ಮುಂದಾಗಿದೆ. ಸಹಕಾರಿ ತತ್ವದ ಮೇಲೆ ನಡೆಯುತ್ತಿರುವ ಈ ಕಾರ್ಖಾನೆಗಳ ಪುನಶ್ಚೇತನ ಸಮರ್ಪಕವಾಗಿ ನಡೆಯಬೇಕಾಗಿದೆ ಎಂದು ಅವರು ಹೇಳಿದ್ದಾರೆ.
ಈ ಸಂಬಂಧ ಸಕ್ಕರೆ ಆಯುಕ್ತರು ಮತ್ತು ಎನ್.ಸಿ.ಡಿ.ಸಿ. ಅಧಿಕಾರಿಗಳ ಜತೆ ಸಮಗ್ರವಾಗಿ ಚರ್ಚಿಸಿ, ಸಮರ್ಪಕ ಪರಿಹಾರ ಕಂಡುಕೊಳ್ಳಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಈ ಎರಡೂ ಕಾರ್ಖಾನೆಗಳಿಗೆ ಸರಕಾರದ ಕಡೆಯಿಂದ ಸಕಾಲಿಕ ನೆರವು ಸಿಗುವಂತೆ ಮಾಡಲು ಎಲ್ಲ ಪ್ರಯತ್ನಗಳನ್ನೂ ಮಾಡಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಚಿವರಾದ ಎಚ್ ಕೆ ಪಾಟೀಲ್, ಶಿವಾನಂದ ಪಾಟೀಲ್, ಎಚ್ ಸಿ ಮಹದೇವಪ್ಪ, ಇಂಡಿ ಶಾಸಕ ಯಶವಂತರಾಯ ಗೌಡ ಪಾಟೀಲ, ಬೀಳಗಿ ಶಾಸಕ ಜೆ ಟಿ ಪಾಟೀಲ, ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಇಂಧನ ಇಲಾಖೆ ಇತರರು ಪಾಲ್ಗೊಂಡಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications