ಬಿಎಂಟಿಸಿ ಪ್ರಯಾಣಿಕರಿಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ
ಬೆಂಗಳೂರು, ಮಾರ್ಚ್ 16; ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪ್ರಯಾಣಿಕರಿಗೆ ಕರ್ನಾಟಕ ಸರ್ಕಾರ ಸಿಹಿ ಸುದ್ದಿ ನೀಡಿದೆ. ಸ್ವತಃ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಈ ಕುರಿತು ಸೂಚನೆ ನೀಡಿದ್ದಾರೆ.
ಡೀಸೆಲ್ ಬೆಲೆ ಹೆಚ್ಚಾದ ಬಳಿಕ ಬಿಎಂಟಿಸಿ ಪ್ರಯಾಣದರ ಏರಿಕೆ ಮಾಡಲು ಮುಂದಾಗಿತ್ತು. ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರೇ ಬಿಎಂಟಿಸಿ ಪ್ರಯಾಣ ದರ ಏರಿಕೆ ಅನಿವಾರ್ಯವಾಗಿದೆ ಎಂದು ಹೇಳಿದ್ದರು.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಶೇ 18 ರಿಂದ 20ರಷ್ಟು ಪ್ರಯಾಣದರವನ್ನು ಏರಿಕೆ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಿತ್ತು. ಆದರೆ, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪ್ರಸ್ತಾವನೆಗೆ ತಡೆ ನೀಡಿದ್ದಾರೆ.
"ಸದ್ಯಕ್ಕೆ ಬಿಎಂಟಿಸಿ ಪ್ರಯಾಣ ದರ ಏರಿಕೆ ಬೇಡ. ಪ್ರಸ್ತಾವನೆಯನ್ನು ತಡೆ ಹಿಡಿಯಿರಿ" ಎಂದು ಸಾರಿಗೆ ಸಚಿವ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ಸೂಚನೆ ಕೊಟ್ಟಿದ್ದಾರೆ. ಇದರಿಂದಾಗಿ ದರ ಏರಿಕೆಗೆ ತಾತ್ಕಾಲಿಕ ತಡೆ ಬಿದ್ದಿದೆ.

ದರ ಏರಿಕೆ ಸುಳಿವು ಕೊಟ್ಟಿದ್ದ ಸಚಿವರು
"ಕಳೆದ ವರ್ಷ ಮೂರು ಸಾರಿಗೆ ನಿಗಮಗಳ ಪ್ರಯಾಣ ದರ ಏರಿಕೆ ಮಾಡಲಾಗಿತ್ತು. ಆದರೆ, ಬಿಎಂಟಿಸಿ ಪ್ರಯಾಣದರ ಏರಿಕೆಯಾಗಿರಲಿಲ್ಲ. ಸಾರ್ವಜನಿಕರಿಗೆ ಹೊರೆಯಾಗದಂತೆ ಟಿಕೆಟ್ ದರ ಏರಿಕೆ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ" ಎಂದು ಫೆಬ್ರವರಿಯಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದರು.

ಪ್ರಯಾಣ ದರ 2014-15ರಲ್ಲಿ ಏರಿಕೆ
ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು, "ಕಳೆದ ವರ್ಷ ಮೂರು ಸಾರಿಗೆ ನಿಗಮಗಳ ಪ್ರಯಾಣದರವನ್ನು ಶೇ 12ರಷ್ಟು ಏರಿಕೆ ಮಾಡಲಾಗಿತ್ತು. 2014-15ರ ಬಳಿಕ ಬಿಎಂಟಿಸಿ ಪ್ರಯಾಣ ದರ ಹೆಚ್ಚಳ ಮಾಡಿಲ್ಲ. ಮುಖ್ಯಮಂತ್ರಿಗಳು ಪ್ರಯಾಣದ ದರ ಹೆಚ್ಚಳದ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ" ಎಂದು ಹೇಳಿದ್ದರು.

ಸುಮಾರು 700 ಕೋಟಿ ನಷ್ಟ
ಕೋವಿಡ್ ಪರಿಸ್ಥಿತಿ, ಇಂಧನಗಳ ಬೆಲೆ ಏರಿಕೆ ಹಿನ್ನಲೆಯಲ್ಲಿ ಬಿಎಂಟಿಸಿಗೆ 2020-21ನೇ ಸಾಲಿನಲ್ಲಿ ಸುಮಾರು 700 ಕೋಟಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. 2019-20ರಲ್ಲಿ ಸಂಸ್ಥೆ 540 ಕೋಟಿ ನಷ್ಟದಲ್ಲಿತ್ತು. ಆದ್ದರಿಂದ ದರ ಏರಿಕೆಗೆ ಅನುಮತಿ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.

ಸಹಜ ಸ್ಥಿತಿಗೆ ಇನ್ನೂ ಬಂದಿಲ್ಲ
ಲಾಕ್ ಡೌನ್ ಮುಕ್ತಾಯಗೊಂಡು ಜನ ಜೀವನ ಸಹಜ ಸ್ಥಿತಿಗೆ ಬರುತ್ತಿದೆ. ಆದರೆ, ಬಿಎಂಟಿಸಿ ಪ್ರಯಾಣಿಕರ ಸಂಖ್ಯೆ ಸಹಜ ಸ್ಥಿತಿಗೆ ಬಂದಿಲ್ಲ ಎಂದು ಸಂಸ್ಥೆ ಹೇಳುತ್ತಿದೆ. ಲಾಕ್ ಡೌನ್ಗೂ ಮೊದಲು ಬಸ್ಗಳಲ್ಲಿ ಪ್ರತಿದಿನ ಸುಮಾರು 35 ಲಕ್ಷ ಜನರು ಸಂಚಾರ ನಡೆಸುತ್ತಿದ್ದರು. ಪ್ರಸ್ತುತ 20 ಲಕ್ಷ ಜನರು ಸಂಚಾರ ನಡೆಸುತ್ತಿದ್ದಾರೆ.
-
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್











Click it and Unblock the Notifications