Oommen Chandy: ಕೇರಳ ಮಾಜಿ ಸಿಎಂ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ
ಬೆಂಗಳೂರು, ಜುಲೈ 18: ಹಿರಿಯ ರಾಜಕೀಯ ಮುತ್ಸದ್ದಿ ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರ ನಿಧನಕ್ಕೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ನನಗೆ ಅತ್ಯಂತ ಆತ್ಮೀಯರಾಗಿದ್ದ ಉಮ್ಮನ್ ಚಾಂಡಿಯವರ ನಿಧನದ ಸುದ್ದಿ ತಿಳಿದು ಆಘಾತವಾಗಿದೆ. ಕೇರಳ ರಾಜ್ಯವನ್ನು ಮಾನವ ಅಭಿವೃದ್ಧಿಯ ಸೂಚ್ಯಂಕಗಳಲ್ಲಿ ಉನ್ನತ ಸ್ಥಾನದಲ್ಲಿ ಇರಿಸಲು ಕಾರಣರಾದ ಮುಖ್ಯಮಂತ್ರಿಗಳಲ್ಲಿ ಉಮ್ಮನ್ ಚಾಂಡಿ ಕೂಡ ಒಬ್ಬರಾಗಿದ್ದರು. ಎರಡು ಬಾರಿ ಕೇರಳ ರಾಜ್ಯದ ಮುಖ್ಯಮಂತ್ರಿಗಳಾಗಿ ಅಪಾರ ಸಾಧನೆ ಮಾಡಿದವರಾಗಿದ್ದರು ಎಂದು ಚಾಂಡಿ ಅವರ ಆಡಳಿತ ಕುರಿತು ತಿಳಿಸಿದರು.

2004 ರಿಂದ 2006 ಮತ್ತು 2011 ರಿಂದ 2016 ರವರೆಗೆ ಕೇರಳದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯಪಾಲರಾಗಿ, ಕೇರಳ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ನಿರಂತರವಾಗಿ ಸಂವಿಧಾನದ ಆಶಯಗಳ, ಮೌಲ್ಯಗಳ ರಕ್ಷಣೆಗೆ ಶ್ರಮಿಸಿ ಹೋರಾಟ ರಾಜಕಾರಣದ ಪರಂಪರೆಯನ್ನು ಪರಿಣಾಮಕಾರಿಯಾಗಿ ಮುನ್ನಡೆಸಿದವರು ಇವರು ಎಂದರು.
ಸಾರ್ವಜನಿಕ ಸೇವೆಗಾಗಿ ವಿಶ್ವಸಂಸ್ಥೆಯಿಂದ ಪ್ರಶಸ್ತಿ
1970 ರಿಂದ ಕೇರಳ ರಾಜ್ಯ ವಿಧಾನಸಭೆಗೆ ನಿರಂತರವಾಗಿ ಆಯ್ಕೆಯಾಗಿ ಅತ್ಯಂತ ದೀರ್ಘಾವಧಿ ಶಾಸಕರಾಗಿ ಪುತ್ತುಪ್ಪಲ್ಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಾ ಬಂದಿದ್ದರು. ವಿಶ್ವಸಂಸ್ಥೆಯಿಂದ ಸಾರ್ವಜನಿಕ ಸೇವೆಗಾಗಿ ಪ್ರಶಸ್ತಿಯನ್ನು ಗಳಿಸಿದ ಏಕೈಕ ಭಾರತೀಯ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನೂ ಉಮ್ಮನ್ ಚಾಂಡಿಯವರು ಗಳಿಸಿದ್ದರು ಎಂದು ಸಿದ್ದರಾಮಯ್ಯ ತಿಳಿಸಿದರು.
ಉಮ್ಮನ್ ಚಾಂಡಿ ಮುಖ್ಯಮಂತ್ರಿ ಆಗಿದ್ದ ಮತ್ತು ನಾನು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಲವು ಬಾರಿ ಭೇಟಿಯಾಗಿದ್ದೆವು. ಅಭಿವೃದ್ಧಿ ವಿಚಾರದಲ್ಲಿ ಅವರದೇ ಆದ ಸ್ಪಷ್ಟ ತಿಳಿವಳಿಕೆ ಮತ್ತು ಮಾದರಿಗಳನ್ನು ಹೊಂದಿದ್ದರು. ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಜಾರಿ ಮಾಡಿದ್ದ ಅನ್ನಭಾಗ್ಯ ಸೇರಿದಂತೆ ಹಲವು ಯೋಜನೆಗಳನ್ನು ಅವರು ಅಪಾರವಾಗಿ ಶ್ಲಾಘಿಸಿದ್ದರು.

ಬಡವರ ಮತ್ತು ಮಧ್ಯಮ ವರ್ಗದವರ ಬದುಕನ್ನು ಉನ್ನತೀಕರಿಸುವ ಸ್ಪಷ್ಟ ಗುರಿ ಮತ್ತು ಮಾರ್ಗ ನಾವು ಜಾರಿ ಮಾಡಿರುವ ಕಾರ್ಯಕ್ರಮಗಳಲ್ಲಿ, ನಾನು ಮಂಡಿಸಿದ ಆಯವ್ಯಯಗಳಲ್ಲಿ ಇದೆ ಎಂದು ಪತ್ರ ಬರೆದು ಮೆಚ್ಚುಗೆ ಸೂಚಿಸಿದ್ದರು.
ಅವರ ನಿಧನ ಅಭಿವೃದ್ಧಿ ಮತ್ತು ಜನಪರ ರಾಜಕಾರಣಕ್ಕೆ, ಕೇರಳ ರಾಜ್ಯಕ್ಕೆ, ಭಾರತೀಯ ರಾಜಕಾರಣಕ್ಕೆ ಹಾಗೂ ನನಗೆ ವೈಯುಕ್ತಿಕವಾಗಿ ತುಂಬಲಾರದ ನಷ್ಟವಾಗಿದೆ ಎಂದು ದುಃಖ ವ್ಯಕ್ತಪಡಿಸಿದರು.
ಚಿಕಿತ್ಸೆ ಫಲಕಾರಿಯಾಗದೇ ಮಾಜಿ ಸಿಎಂ ನಿಧನ
ಮೌಲ್ಯಯುತ ರಾಜಕಾರಣದ ಹೆಜ್ಜೆಗುರುತನ್ನು ಉಳಿಸಿ ಹೋಗಿರುವ ಓಮನ್ ಚಾಂಡಿಯವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕುಟುಂಬಕ್ಕೆ ಮತ್ತು ಅಪಾರ ಬಂಧು ಮಿತ್ರರಿಗೆ ದೇವರು ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.
ವರ್ಷಗಳಿಂದ ಕ್ಯಾನ್ಸರ್ನಿಂದ ಬಳಲುತ್ತಿದ್ದ ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ (73) ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗಿನ ಜಾವ ನಿಧನರಾದರು. ಈ ಹಿಂದೆಯುವ ಕೆಲವು ಬಾರಿ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು ಎಂದು ತಿಳಿದು ಬಂದಿದೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications