ತಮಿಳುನಾಡಿಗೆ ನೀರು ಬಿಡಲ್ಲ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು ತೀವ್ರ ನೀರಿನ ಸಮಸ್ಯೆಯಿಂದ ತತ್ತರಿಸಿದ್ದರೂ ತಮಿಳುನಾಡಿಗೆ ಕಾವೇರಿ ನೀರು ಬಿಡಲಾಗುತ್ತಿದೆ ಎಂಬ ವಿಪಕ್ಷ ಬಿಜೆಪಿ ಆರೋಪವನ್ನು ಸುಳ್ಳೆಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ತಳ್ಳಿ ಹಾಕಿದ್ದಾರೆ.
ಇದು ಸುಳ್ಳು ಎಂದ ಸಿದ್ದರಾಮಯ್ಯ, ತಮಿಳುನಾಡಿಗೆ ಒಂದು ಹನಿ ನೀರು ಕೊಡುವುದಿಲ್ಲ. ನೀರು ಬಿಡುವಂತೆ ತಮಿಳುನಾಡು ಕೇಳಿಲ್ಲ ಅಥವಾ ಕರ್ನಾಟಕಕ್ಕೆ ಯಾರೂ ನೀರು ಬಿಡುವಂತೆ ಸೂಚಿಸಿಲ್ಲ ಎಂದು ಹೇಳಿದರು.

ಅದೆಲ್ಲ ಸುಳ್ಳು, ಈ ಪರಿಸ್ಥಿತಿಯಲ್ಲಿ ನೀರು ಬಿಡುವವರು ಯಾರು? ನಮ್ಮ ಬಳಕೆಗೆ ನೀರು ಉಳಿಸಿಕೊಳ್ಳದೆ ತಮಿಳುನಾಡಿಗೆ ಒಂದು ಹನಿ ನೀರು ಕೂಡ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಸುದ್ದಿಗಾರರಿಗೆ ತಿಳಿಸಿದರು.
ನೀರು ಬಿಡುವಂತೆ ಕೇಳಿಲ್ಲ
ಪಕ್ಕದ ರಾಜ್ಯಕ್ಕೆ ನೀರು ಬಿಡುವಂತೆ ತಮಿಳುನಾಡು ಕೇಳಿಲ್ಲ, ಕರ್ನಾಟಕಕ್ಕೆ ಯಾರೂ ನಿರ್ದೇಶನ ನೀಡಿಲ್ಲ ಎಂದರು. "ಅವರು ಕೇಳದಿರುವಾಗ ನಾವೇಕೆ ತಮಿಳುನಾಡಿಗೆ ನೀರು ಕೊಡುತ್ತೇವೆ? ಅವರಿಗೆ ನೀಡಲು ನಮ್ಮಲ್ಲಿ ನೀರು ಎಲ್ಲಿದೆ? ಕೇಂದ್ರ ಆದೇಶ ಕೊಟ್ಟರೂ ತಮಿಳುನಾಡಿಗೆ ನೀರು ನೀಡುವ ಪ್ರಶ್ನೆಯೇ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ ಸೋಮವಾರ ಆರೋಪಿಸಿದ್ದರು. ರಾಜ್ಯ ಸರಕಾರ ಕೂಡಲೇ ನೆರೆ ರಾಜ್ಯಕ್ಕೆ ನೀರು ಬಿಡುವುದನ್ನು ನಿಲ್ಲಿಸಿ ಬೆಂಗಳೂರಿನ ಜನರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು.
ಕಾವೇರಿ ನೀರನ್ನು ರಾಜ್ಯ ಸರ್ಕಾರ ಗೊತ್ತಿಲ್ಲದಂತೆ ತಮಿಳುನಾಡಿಗೆ ಹರಿಸುತ್ತಿದೆ ಎನ್ನುವ ಆರೋಪಗಳಿಗೆ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ ಬಿಜೆಪಿ ಆರೋಪಗಳು ಸುಳ್ಳು ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಕುಡಿಯುವ ತೀವ್ರ ಸಮಸ್ಯೆ ಇದ್ದು ಕುಡಿಯುವ ನೀರಿನ ಉದ್ದೇಶಕ್ಕಾಗಿ ನೀರು ಬಿಡಲಾಗಿದೆ. ಆದರೆ ಅದು ತಮಿಳುನಾಡಿಗೆ ಅಲ್ಲ, ಬದಲಾಗಿ ಬೆಂಗಳೂರಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಎಂದು ಸ್ಪಷ್ಟಪಡಿಸಲಾಗಿದೆ.











Click it and Unblock the Notifications