ಅಚ್ಚೇದಿನಗಳಲ್ಲ-ದೌರ್ಭಾಗ್ಯದ ದಿನಗಳು: ಕಾಂಗ್ರೆಸ್ ಜಾಹೀರಾತು
ಬೆಂಗಳೂರು, ಏಪ್ರಿಲ್ 20: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದ ಕರ್ನಾಟಕ ಕಾಂಗ್ರೆಸ್ 'ಕರ್ನಾಟಕಕ್ಕೆ ಮೋದಿ ಸರ್ಕಾರ ಕೊಟ್ಟ ಕೊಡುಗೆ ಚೊಂಬು' ಎಂದು ಜಾಹೀರಾತು ನೀಡಿತ್ತು. ಶನಿವಾರ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಜಾಹೀರಾತು ನೀಡಿ ಮತದಾರರಲ್ಲಿ ಕಾಂಗ್ರೆಸ್ ಮನವಿ ಮಾಡಿದೆ.
ಅಚ್ಚೇದಿನಗಳಲ್ಲ ದೌರ್ಭಾಗ್ಯದ ದಿನಗಳು ಶಿರ್ಷಿಕೆಯಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಕೇಂದ್ರ ಸರ್ಕಾರದ ಆಡಳಿತದಲ್ಲಿ ಬೆಲೆ ಏರಿಕೆಯಾಗಿದ್ದ ಅಂಕಿ ಸಂಖ್ಯೆ ತಿಳಿಸಿದೆ. ಇಂಧನ, ಗ್ಯಾಸ್ ಸಿಲೆಂಡರ್, ಬೇಳೆ, ಟೀ ಪುಡಿ ಸೇರಿದಂತೆ ನಿತ್ಯ ಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿವೆ ಎಂದು ಜಾಹೀರಾತಿನಲ್ಲಿ ತಿಳಿಸಿದೆ.

ಜನರು ಈ ಬೆಲೆ ವಿರುದ್ಧ ಈ ಚುನಾವಣೆಯಲ್ಲಿ ತೀರ್ಮಾನಿಸಬೇಕು. ಬಿಜೆಪಿ ಸೋಲಿಸಿ, ಬೆಲೆಯೇರಿಕೆ ನಿಲ್ಲಿಸಬೇಕು. ಕಾಂಗ್ರೆಸ್ಗೆ ನಿಮ್ಮ ಮತ ನೀಡುವಂತೆ ಪಕ್ಷವು ಮನವಿ ಮಾಡಿದೆ. ಈ ಮೂಲಕ ಕೇಂದ್ರ ಸರ್ಕಾರದ ಜನರಿಗೆ ಆರ್ಥಿಕ ಹೊರೆ ನೀಡಿದೆ ಎಂದು ಕಾಂಗ್ರೆಸ್ ದೂರಿದೆ.
ಬೆಲೆ ಏರಿಕೆ ಲೆಕ್ಕ ತಿಳಿಸಿದ ಕಾಂಗ್ರೆಸ್
ಕಾಂಗ್ರೆಸ್ ಹೇಳುವಂತೆ, ಒಂದು ಲೀಟರ್ ಪೆಟ್ರೋಲ್ ದರ 100 ರೂ., ಡೀಸೆಲ್ 85 ರೂ., ಗ್ಯಾಸ್ ಸಿಲೆಂಡರ್ ಬೆಲೆ ರೂ.1100ಕ್ಕೆ ಏರಿಕೆ ಆಗಿದೆ. ಅಡುಗೆ ಎಣ್ಣೆ ಲೀಟರ್ 180 ರೂಪಾಯಿ ಇದೆ. ತೊಗರಿ ಬೇಳೆ ಕೆ.ಜಿಗೆ 200 ಇದೆ. ಟೀ ಪುಡಿ ಕೆ.ಜಿಗೆ 300 ರೂಪಾಯಿ ಇದೆ.
ಹೀಗೆ ಬಡವರು ಸೇರಿದಂತೆ ಎಲ್ಲ ವರ್ಗದ ಜನರು ಬಳಸುವ ಇಂಧನ, ಆಹಾರ ಪದಾರ್ಥಗಳ ಬೆಲೆ ಏರಿಕೆ ಆಗಿದೆ. ಇದು ಮಧ್ಯಮ ವರ್ಗದವರನ್ನು ಆರ್ಥಿಕ ಸಂಕಷ್ಟಕ್ಕೆ ನೂಕಿದೆ. ಬಡವರು ದುಡಿದ ದುಡ್ಡು ಬುದಕು ನಡೆಸಲು ಸಾಕಾಗುತ್ತಿಲ್ಲ. ಬೆಲೆ ಏರಿಕೆಯ ಬಿಸಿ ತಟ್ಟಿದೆ.
ಬೆಲೆ ಏರಿಕೆಯ ಅಚ್ಚೆ ದಿನಗಳು ಇನ್ನು ನಮಗೆ ಬೇಡ..
— Karnataka Congress (@INCKarnataka) April 20, 2024
ಹಾಲು, ಮೊಸರು, ಪೆನ್ನು, ಪೆನ್ಸಿಲ್ಲು ಎಲ್ಲದಕ್ಕೂ GST ತೆರಿಗೆಯ ಮೂಲಕ ಬಡವರ ಜೇಬನ್ನು ಪಿಕ್ ಪಾಕೆಟ್ ಮಾಡುವ ಬಿಜೆಪಿ ಸರ್ಕಾರವನ್ನು ತೊಲಗಿಸಿ,
ಜನಸಾಮಾನ್ಯರ ಬದುಕನ್ನು ಬೆಳಗುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ..#ಕೈಜೋಡಿಸಿ_ಜೀವನಬದಲಿಸಿ pic.twitter.com/cakue5VC6P
ಚುನಾವಣೆಯಲ್ಲಿ ಇದನ್ನೆ ಬೆಲೆ ಏರಿಕೆ ಅಸ್ತ್ರವನ್ನೇ ಮಾಡಿಕೊಂಡ ಕಾಂಗ್ರೆಸ್ ಬಿಜೆಪಿ ವಿರುದ್ಧ ಬಳಸುತ್ತಿದೆ. ಮತದಾರರನ್ನು ತನ್ನತ್ತ ಸಳೆಯುತ್ತಿದೆ.
ಬಡವರ ಖಾತೆಗೆ ಹಣ ಹಾಕುವುದಾಗಿ ಹೇಳಿ ಹಾಕಲಿಲ್ಲ, ರೈತರ ಆದಾಯ ಡಬಲ್ ಮಾಡಲಿಲ್ಲ. ಸಮರ್ಪಕ ತೆರಿಗೆ ಹಂಚಲಿಲ್ಲ ಹೀಗೆ ಹಲವು ವಿಷಯಗಳಲ್ಲಿ ಬಿಜೆಪಿ ಕರ್ನಾಟಕದವರಿಗೆ ಚೋಂಬು ಕೊಡುಗೆ ನೀಡಿದೆ. ಹೇಳಿದಂತೆ ನಡೆದುಕೊಳ್ಳದೇ ಬಿಜೆಪಿ ಶೂನ್ಯ ಸಾಧನೆ ಮಾಡಿದೆ ಎಂದು ಶುಕ್ರವಾರ ಕಾಂಗ್ರೆಸ್ ಜರಿದಿತ್ತು.
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications