Govt Employee Suicide: ಅಧಿಕಾರಿ ಆತ್ಮಹತ್ಯೆಗೆ ಕೊಲೆಗಡುಕ ಸರ್ಕಾರವೇ ಕಾರಣ, ಆಪ್ತರನ್ನು ರಕ್ಷಿಸಬೇಡಿ: ಬಿಜೆಪಿ
ಬೆಂಗಳೂರು, ಮೇ 27: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ವಾಲ್ಮಿಕಿ ಅಭಿವೃದ್ಧಿ ನಿಗಮದಲ್ಲಿ ಬೃಹತ್ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. 187 ಕೋಟಿ ರೂ. ಭ್ರಷ್ಟಾಚಾರ, ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿಯ ಸಾವಿಗೆ ಈ ಕೊಲೆಗಡುಕ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ಕಾರಣ ಎಂದು ವಿಪಕ್ಷಗಳು ಮತ್ತು ವಿಪಕ್ಷ ನಾಯಕರು ದೂರಿದ್ದಾರೆ.
ಬೃಹತ್ ಭ್ರಷ್ಟಾಚಾರ ಆರೋಪ ವಿರುದ್ಧ ಕಿಡಿ ಕಾರಿರುವ ಬಿಜೆಪಿ ವಿಪಕ್ಷ ನಾಯಕ ಆರ್. ಅಶೋಕ್ ಅವರು ಟ್ವೀಟ್ ಮಾಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂಪಾಯಿ ಮೌಲ್ಯದ ಬೃಹತ್ ಭ್ರಷ್ಟಾಚಾರವನ್ನ ಅಧಿಕಾರಿಯ ತಲೆಗೆ ಕಟ್ಟಲು ಪ್ರಯತ್ನ ನಡೆದಿದೆ. ಈ ಸಂಬಂಧ ಅಧಿಕಾರಿಗಲು ಕಿರುಕುಳ ನೀಡಿದ್ದರಿಂದ ಆತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗುವಂತೆ ಮಾಡಿರುವುದೇ ಈ ಕೊಲೆಗಡುಕ ಕಾಂಗ್ರೆಸ್ ಸರ್ಕಾರ ಎಂದು ಅವರು ಜರಿದಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಯ್ಯ ಅವರೇ ಇದು ಆತ್ಮಹತ್ಯೆ ಅಲ್ಲ. ಇದು ಕೊಲೆ. ಈ ಕೊಲೆಗೆ ಹೊಣೆ ಯಾರು? ನಿಮ್ಮ ಸರ್ಕಾರದ ಕಮಿಷನ್ ದಾಹಕ್ಕೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು ಎಂದು ಕಟುವಾಗಿ ಪ್ರಶ್ನೆ ಮಾಡಿದ್ದಾರೆ.
11,000 ಕೋಟಿ ರೂ. ಲಪಟಾಯಿಸಿದ ಸರ್ಕಾರ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಬೇಕಾದ 11,000 ಕೋಟಿ ರೂಪಾಯಿ ಎಸ್ ಸಿಎಸ್ ಪಿ/ಟಿಎಸ್ ಪಿ ಹಣವನ್ನು ಗ್ಯಾರೆಂಟಿ ಹೆಸರಿನಲ್ಲಿ ಲಪಟಾಯಿಸಿ ಈಗಾಗಲೇ ದಲಿತರ ಹೊಟ್ಟೆಗೆ ಹೊಡೆಯುವ ಪಾಪದ ಕೆಲಸ ಮಾಡಿದ್ದೀರಿ. ಈಗ ಅಭಿವೃದ್ಧಿ ನಿಗಮದಲ್ಲಿ 85 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆಸಿ ಒಬ್ಬ ಅಧಿಕಾರಿಯ ಸಾವಿಗೆ ಕಾರಣರಾಗಿದ್ದೀರಿ.

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಈ ಕೂಡಲೇ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿಎಣ್ ನಾಗೇಂದ್ರ ಅವರನ್ನು ಸಂಪುಟದಿಂದ ವಜಾ ಮಾಡಬೇಕು. ಕೂಡಲೇ ಈ ಸಾವಿನ ಪ್ರಕರಣದ ತನಿಖೆಗೆ ಆದೇಶ ಮಾಡಿ. ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ಆತ್ಮಹತ್ಯೆಗೆ ಶರಣಾದ ಅಧಿಕಾರಿಯ ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಿ ಎಂದು ಅವರು ಆಗ್ರಹಿಸಿದರು.
ಪ್ರಕರಣ ಕುರಿತು ಕೇವಲ ಆರ್. ಅಶೋಕ್ ಮಾತ್ರವಲ್ಲ ರಾಜ್ಯ ಬಿಜೆಪಿ ಪಕ್ಷದ ನಾಯಕರು, ಜೆಡಿಎಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆತ್ಮಹತ್ಯೆಗೆ ರಾಜ್ಯ ಸರ್ಕಾರವೇ ಕಾರಣ ಎಂದು ಆಪಾದಿಸಿದ್ದಾರೆ.
ಆಪ್ತರನ್ನು ರಕ್ಷಿಸಿದಂತೆ ಸಿಎಂಗೆ ಬಿಜೆಪಿ ಆಗ್ರಹ
ಕರ್ನಾಟಕವನ್ನು ಲೂಟಿ ಮಾಡುವುದಕ್ಕೆಂದೇ ಅಧಿಕಾರಕ್ಕೆ ಬಂದಿರುವ ಕರ್ನಾಟಕ ಸರ್ಕಾರ ಲೂಟಿ ಹೊಡೆಯುವ ಜೊತೆಗೆ ಅಧಿಕಾರಿಗಳ ಜೀವ ಬಲಿ ಪಡೆಯುತ್ತಿದೆ. ₹187 ಕೋಟಿ ಹಗರಣ ಸಂಬಂಧ ಅಧಿಕಾರಿಯು ಸಚಿವರ ಎಚ್ಸಿ ಮಹಾದೇವಪ್ಪ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿಗಳ ಹೆಸರು ಬರೆದಿಟ್ಟು ಅಕೌಂಟೆಂಟ್ ಸೂಪರಿಡೆಂಟ್ ಚಂದ್ರಶೇಖರ್ ನೇಣಿಗೆ ಶರಣಾಗಿದ್ದಾರೆ.
ಹಗರಣದ ಪ್ರಮುಖ ರೂವಾರಿ ಆಗಿರುವ ಸಚಿವ ಹೆಚ್. ಸಿ. ಮಹದೇವಪ್ಪ ಅವರು ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು. ಹಾಗೂ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಆಪ್ತರೆಂದು ರಕ್ಷಣೆ ಮಾಡುವ ಬದಲು ಕಾನೂನು ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ಬಿಜೆಪಿ ಆಗ್ರಹಿಸಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications