ಬಿಜೆಪಿ ಹೇಳಿದಂತೆ ಜೆಡಿಎಸ್ ವಚನಭ್ರಷ್ಟ ಅಷ್ಟಲ್ಲದೇ ಸಿದ್ಧಾಂತ ಭ್ರಷ್ಟವು ಹೌದು: ಕಾಂಗ್ರೆಸ್
ಬೆಂಗಳೂರು, ಸೆಪ್ಟಂಬರ್ 25: ಈ ಹಿಂದೊಮ್ಮೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಜೆಡಿಎಸ್ ನವರು ವಚನ ಭ್ರಷ್ಟರು ಎಂದಿದ್ದು ನಿಜವಲ್ಲವೇ? ಎಂದು ಪ್ರಶ್ನಿಸಿರುವ ಕರ್ನಾಟಕ ಕಾಂಗ್ರೆಸ್, ಜೆಡಿಎಸ್ ನವರು ಕೇವಲ ವಚನಭ್ರಷ್ಟರು ಮಾತ್ರವಲ್ಲ, ಸಿದ್ಧಾಂತ ಭ್ರಷ್ಟರು ಕೂಡ ಎಂದು ವಾಗ್ದಾಳಿ ನಡೆಸಿದೆ.
ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬಯಸುತ್ತೇನೆ ಎಂದಿದ್ದರು ದೇವೇಗೌಡರು ಎಂಬ ವಿಚಾರವನ್ನು ಪುನಃ ಪ್ರಸ್ತಾಪಿಸಿರುವ ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ಜೆಡಿಎಸ್ ನಡೆಯನ್ನು ಟೀಕೆ ಮಾಡಿದೆ.

ಎಚ್.ಡಿ ದೇವೇಗೌಡ ಮುಸ್ಲಿಂ ಆಗಿ ಹುಟ್ಟಬಯಸುತ್ತೇನೆ ಎಂದಿದ್ದರು. ಕೆಲವೇ ತಿಂಗಳ ಹಿಂದೆ ಅವರ ಮೊಮ್ಮಗ ಪ್ರಜ್ವಲ್ ರೇವಣ್ಣ ಸಹಿತ ಅದೇ ಮಾತು ಹೇಳಿದ್ದು, ದೇವೇಗೌಡರಿಗೆ ಮುಸ್ಲಿಂ ಆಗಿ ಹುಟ್ಟುವ ಆಸೆ ಇದೆ ಎಂದು ಬಹಿರಂಗಪಡಿಸಿದ್ದರು.
ಇದೀಗ ಅಲ್ಪಸಂಖ್ಯಾತರ ಅಭಿಪ್ರಾಯವನ್ನು ದಿಕ್ಕರಿಸಿ ಕೂಡಿಕೆ ಮಾಡಿಕೊಂಡಿದ್ದಾರೆ. ಇದು ಅಲ್ಪಸಂಖ್ಯಾತರ ಬೆನ್ನಿಗೆ ಚೂರಿ ಹಾಕುವ ನಡೆ ಅಲ್ಲವೇ? ಎಂದು ಬಿಜೆಪಿ-ಜೆಡಿಎಸ್ ಮೈತ್ರಿಗೆ ಕಾಂಗ್ರೆಸ್ ಲೇವಡಿ ಮಾಡಿದೆ.
ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬಯಸುತ್ತೇನೆ ಎಂದಿದ್ದರು ದೇವೇಗೌಡರು,
— Karnataka Congress (@INCKarnataka) September 25, 2023
ಕೆಲವೇ ತಿಂಗಳ ಹಿಂದೆ ಮೊಮ್ಮಗನೂ ದೇವೇಗೌಡರ ಅದೇ ಆಸೆಯನ್ನು ಬಹಿರಂಗಪಡಿಸಿದ್ದರು.
ಆದರೆ ಈಗ ಅಲ್ಪಸಂಖ್ಯಾತರ ಅಭಿಪ್ರಾಯವನ್ನು ದಿಕ್ಕರಿಸಿ ಕೂಡಿಕೆ ಮಾಡಿಕೊಂಡಿದ್ದಾರೆ,
ಇದು ಅಲ್ಪಸಂಖ್ಯಾತರ ಬೆನ್ನಿಗೆ ಚೂರಿ ಹಾಕುವ ನಡೆ ಅಲ್ಲವೇ?
ಹಿಂದೆ ಯಡಿಯೂರಪ್ಪನವರು… pic.twitter.com/D0pJhZYWgw
ಮೈತ್ರಿಗೆ ನಾಯಕರ ಸಮರ್ಥನೆ
ಲೋಕಸಭಾ ಚುನಾವಣೆ ಹಾಗೂ ಪಕ್ಷದ ಹಿತದೃಷ್ಟಿಯಿಂದ ಜೆಡಿಎಸ್ ರಾಷ್ಟ್ರೀಯ ಪಕ್ಷವಾದ ಬಿಜೆಪಿ ಜೊತೆಗೆ ಮೈತ್ರಿಗೆ ಮುಂದಾಗಿದೆ. ಈ ಬಗ್ಗೆ ಎಚ್ಡಿ ದೇವೇಗೌಡರು ಮತ್ತು ಅವರ ಪುತ್ರ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಸಮರ್ಥನೆಯನ್ನು ನೀಡಿದ್ದಾರೆ. ಮೈತ್ರಿ ಕುರಿತು ಕೇಂದ್ರ ಮತ್ತು ರಾಜ್ಯ ಬಿಜೆಪಿ ನಾಯಕರ ಜೊತೆಗೆ ಕೆಲವು ಭಾರಿ ಚರ್ಚೆಗಳು ನಡೆದಿವೆ.
ಅಲ್ಲದೇ ಬಿಜೆಪಿಯು ಹಿಂದೂಪರವಾಗಿದ್ದು, ಮುಸ್ಲಿಮರನ್ನು ವಿರೋಧಿಸುತ್ತಲೇ ಬಂದಿದೆ. ಕೆಲವೊಮ್ಮೆ ಅಧಿಕಾರಕ್ಕಾಗಿ ಬಿಜೆಪಿ ಸಹ ಅಲ್ಪಸಂಖ್ಯಾತರನ್ನು ಒಲೈಕೆ ಮಾಡಿದ ಉದಾಹರಣೆಗಳು ಇದೆ.
ಇದೆಲ್ಲದರ ಮಧ್ಯೆ ದೇವೇಗೌಡರು ಮುಸ್ಲಿಂ ಆಗಿ ಹುಟ್ಟಲು ಆಸೆ ಇದೆ ಎಂದವರು ಮುಸಲ್ಮಾನ ವಿರೋಧಿ ಬಣದ ಜೊತೆಗೆ ಕೈ ಜೋಡಿಸಿರುವುದು ಕಾಂಗ್ರೆಸ್ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ಜೆಡಿಎಸ್, ದೇವೇಗೌಡರು ಮತ್ತು ಬಿಜೆಪಿ ವಿರುದ್ಧ ಕಾಂಗ್ರೆಸ್ ಟೀಕಾ ಪ್ರಹಾರ ನಡೆಸಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications