ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking; ಮಸಾಲೆ ದೋಸೆ ಮುರಿದ ತೇಜಸ್ವಿ ಸೂರ್ಯ, ಕಾಂಗ್ರೆಸ್ ಗರಂ!

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 06: ಉದ್ಯಾನ ನಗರಿ ಬೆಂಗಳೂರು ನೈಋತ್ಯ ಮುಂಗಾರು ಮಳೆಯ ಅಬ್ಬರಕ್ಕೆ ತತ್ತರಿಸಿ ಹೋಗಿದೆ. ನಗರದ ಹಲವು ಪ್ರದೇಶಗಳು ಜಲಾವೃತವಾಗಿವೆ. ಮನೆಗಳಿಗೆ ನೀರು ನುಗ್ಗಿದ್ದು, ಜನರು ಪರದಾಟ ನಡೆಸುತ್ತಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಪದ್ಮನಾಭನಗರದ ಹೋಟೆಲ್‌ನಲ್ಲಿ ಮಸಾಲೆ ದೋಸೆ ತಿನ್ನುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಸೋಮವಾರ ಇತ್ತ ಜನರು ಪರದಾಟ ನಡೆಸುತ್ತಿದ್ದಾರೆ. ಅತ್ತ ಸಂಸದರು ದೋಸೆ ತಿನ್ನುವುದರಲ್ಲಿ ಬ್ಯುಸಿ ಇದ್ದರು.

Breaking: ಬೆಂಗಳೂರಲ್ಲಿ 5 ದಶಕದಲ್ಲೇ ಅತ್ಯಧಿಕ ಮಳೆBreaking: ಬೆಂಗಳೂರಲ್ಲಿ 5 ದಶಕದಲ್ಲೇ ಅತ್ಯಧಿಕ ಮಳೆ

ಈ ಬಗ್ಗೆ ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದೆ. 'ಮತಿ 'ದೋಷ' ಇರುವವರನ್ನು ಆಯ್ಕೆ ಮಾಡಿದರೆ, ಜನ ಮುಳುಗುವಾಗ 'ದೋಸೆ' ತಿನ್ನಲು ಹೋಗುತ್ತಾರೆ!' ಎಂದು ವಾಗ್ದಾಳಿ ನಡೆಸಿದೆ.

 ಬೆಂಗಳೂರು ಮಳೆ: ಪ್ರಕೃತಿ ಮುಂದೆ ಯಾವುದೂ ದೊಡ್ಡದಲ್ಲ ಎಂದ ಕೆಟಿಆರ್‌ ಬೆಂಗಳೂರು ಮಳೆ: ಪ್ರಕೃತಿ ಮುಂದೆ ಯಾವುದೂ ದೊಡ್ಡದಲ್ಲ ಎಂದ ಕೆಟಿಆರ್‌

Karnataka Congress Tweet Against MP Tejasvi Surya

'ಬೆಂಗಳೂರು ಮುಳುಗಿದೆ, ಜನತೆ ಪರದಾಡುತ್ತಿದ್ದಾರೆ, ಆದರೆ ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ಅವರು ದೋಸೆ ತಿನ್ನುವ ಟೆಂಪ್ಟ್ ಆಗಿದ್ಯಂತೆ!' ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

ಸಿಲಿಕಾನ್‌ ಸಿಟಿಯಲ್ಲಿ 8 ವರ್ಷದ ನಂತರ ದಾಖಲೆಯ ಸನಿಹ ಮಳೆ! ಸಿಲಿಕಾನ್‌ ಸಿಟಿಯಲ್ಲಿ 8 ವರ್ಷದ ನಂತರ ದಾಖಲೆಯ ಸನಿಹ ಮಳೆ!

ವಿಡಿಯೋದಲ್ಲಿ ಏನಿದೆ?; ಸಂಸದ ತೇಜಸ್ವಿ ಸೂರ್ಯ, "ಈಗ ನಾನು ಪದ್ಮನಾಭನಗರದ ಹೋಟೆಲ್‌ಗೆ ಬಂದಿದ್ದೇನೆ. ಇನ್‌ಸ್ಟಾಗ್ರಾಮ್‌ನಲ್ಲಿ ದೋಸೆಯ ಫೋಟೋ ನೋಡಿ ಟೆಂಪ್ಟ್‌ ಆಗಿ ಇಲ್ಲಿಗೆ ಬಂದಿದ್ದೇನೆ" ಎಂದು ಹೇಳಿದ್ದಾರೆ.

"ಬೆಣ್ಣೆ ಮಸಾಲೆ ತುಂಬಾ ಚೆನ್ನಾಗಿದೆ. ನೀವು ಬನ್ನಿ, ಅದನ್ನು ತಿಂದಾಗಲೇ ಆಸ್ವಾದನೆ ಗೊತ್ತಾಗುವುದು. ಉಪ್ಪಿಟ್ಟು ಸಹ ಬಹಳ ಚೆನ್ನಾಗಿದೆ" ಎಂದು ವಿಡಿಯೋದಲ್ಲಿ ಹೇಳಿದ್ದು, ವಿಡಿಯೋ ವೈರಲ್ ಆಗಿದೆ.

ಎಎಪಿ ಆಕ್ರೋಶ; ಮತ್ತೊಂದು ಕಡೆ ಆಮ್ ಆದ್ಮಿ ಪಕ್ಷ ಕರ್ನಾಟಕ ಸಹ ಸಂಸದರ ದೋಸೆ ಪೋಸ್ಟ್‌ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ. ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದು, 'ಪೂರ್ಣಚಂದ್ರ ತೇಜಸ್ವಿ ಅವರು ಹಿಂದೆಯೇ ಹೇಳಿದ್ದಾರೆ ಪುಂಡ ಪೋಕರಿಗಳಿಗೆ ವೋಟ್ ಹಾಕಬೇಡಿ' ಎಂದು ಹೇಳಿದೆ.

'ಬೇಜವಾಬ್ದಾರಿ ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ಇಡೀ ನಗರದ ಪ್ರವಾಹದಿಂದ ತತ್ತರಿಸಿರುವಾಗ ಹೋಟೆಲ್‌ ಪರವಾಗಿ ಪ್ರಚಾರ ಮಾಡುವುದರಲ್ಲಿ ಬ್ಯುಸಿ ಇದ್ದರು. ಜನರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ" ಎಂದು ಆಕ್ರೋಶ ವ್ಯಕ್ತಪಡಿಸಿದೆ.

English summary
Karnataka Congress tweet against Bengaluru South MP MP Tejasvi Surya who busy in eating Masala dosa in the time of Bengaluru flood
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X