ವಿಧಾನ ಪರಿಷತ್ ಚುನಾವಣೆಗೆ ದಿನಾಂಕ, ಸಿಎಂಗೆ ಧರ್ಮಸಂಕಟ?
ಬೆಂಗಳೂರು, ಜನವರಿ.27: ಕಾಂಗ್ರೆಸ್ ನ ರಿಜ್ವಾನ್ ಅರ್ಷದ್ ರಾಜೀನಾಮೆ ಹಿನ್ನೆಲೆಯಲ್ಲಿ ತೆರವಾಗಿದ್ದ ವಿಧಾನ ಪರಿಷತ್ ಸ್ಥಾನಕ್ಕೆ ಉಪ ಚುನಾವಣೆಯ ದಿನಾಂಕ ಪ್ರಕಟಗೊಂಡಿದೆ. ಫೆಬ್ರವರಿ.17ರಂದು ಒಂದು ವಿಧಾನ ಪರಿಷತ್ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ.
ಜನವರಿ.30ರಂದು ವಿಧಾನ ಪರಿಷತ್ ಉಪಚುನಾವಣೆ ಅಧಿಸೂಚನೆ ಹೊರ ಬೀಳಲಿದೆ. ಇನ್ನು, ಫೆಬ್ರವರಿ.06 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಲಿದೆ ಎಂದು ಚುನಾವಣಾ ಆಯೋಗವು ಘೋಷಿಸಿದೆ. ಇದರ ಬೆನ್ನಲ್ಲೇ ಅಭ್ಯರ್ಥಿಗಳ ಆಯ್ಕೆ ಕಸರತ್ತು ಜೋರಾಗಿದೆ.
ಬಿಜೆಪಿಯಲ್ಲಿ ಯಾರನ್ನು ಅಭ್ಯರ್ಥಿ ಮಾಡಬೇಕು ಎಂಬುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ತಲೆನೋವಾಗಿದೆ. ಈಗಾಗಲೇ ಡಿಸಿಎಂ ಸ್ಥಾನದಲ್ಲಿ ಇರುವ ಲಕ್ಷ್ಮಣ್ ಸವದಿಯನ್ನು ಅಭ್ಯರ್ಥಿಯನ್ನಾಗಿ ಮಾಡುವಂತೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ.

ಕೊಟ್ಟ ಮಾತು ತಪ್ಪುತ್ತಾರಾ ಮುಖ್ಯಮಂತ್ರಿ?
ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಸೇರಿದ ಇಬ್ಬರು ಶಾಸಕರು ಸೋತು ಮನೆಯಲ್ಲಿ ಕೂರುವಂತೆ ಆಗಿದೆ. ಇತ್ತೀಚಿಗಷ್ಟೇ ಸೋತ ಅಭ್ಯರ್ಥಿಗಳಿಗೆ ಮಂತ್ರಿ ಸ್ಥಾನವಿಲ್ಲ ಎಂಬ ಹೇಳಿಕೆ ಬಿಜೆಪಿಗೆ ಜಂಪ್ ಆದವರ ಎದೆಯಲ್ಲಿ ಢವಢವವನ್ನು ಹೆಚ್ಚಿಸಿದೆ. ಹುಣಸೂರು ಮಾಜಿ ಶಾಸಕ ಹೆಚ್.ವಿಶ್ವನಾಥ್, ಹೊಸಕೋಟೆ ಮಾಜಿ ಶಾಸಕ ಎಂಟಿಬಿ ನಾಗರಾಜ್ ಹಾಗೂ ರಾಣಿಬೆನ್ನೂರಿನ ಮಾಜಿ ಶಾಸಕ ಆರ್.ಶಂಕರ್ ಕಂಗಾಲಾಗಿದ್ದಾರೆ. ಈ ಮೂವರ ಪೈಕಿ ಒಬ್ಬರಿಗೆ ವಿಧಾನ ಪರಿಷತ್ ಅಭ್ಯರ್ಥಿಯನ್ನಾಗಿ ಮಾಡಲು ಸಿಎಂ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಹೈಕಮಾಂಡ್ ಲೆಕ್ಕಾಚಾರವು ಇದಕ್ಕೆ ತದ್ವಿರುದ್ಧವಾಗಿದ್ದು, ಸಿಎಂಗೆ ಧರ್ಮಸಂಕಟ ಎದುರಾಗಿದೆ.
ರಿಜ್ವಾನ್ ಅರ್ಷದ್ ರಾಜೀನಾಮೆ ಹಿನ್ನೆಲೆ ತೆರವು:
ಇತ್ತೀಚಿಗಷ್ಟೇ ಶಿವಾಜಿನಗರ ವಿಧಾನಸಭೆಗೆ ಉಪ ಚುನಾವಣೆ ನಡೆದಿದ್ದು, ಕಾಂಗ್ರೆಸ್ ತಮ್ಮ ಭದ್ರಕೋಟೆಯನ್ನು ಉಳಿಸಿಕೊಳ್ಳಲು ರಿಜ್ವಾನ್ ಅರ್ಷದ್ ರನ್ನು ಕಣಕ್ಕೆ ಇಳಿಸಿತ್ತು. ಈ ಉಪ ಚುನಾವಣೆಯಲ್ಲಿ ಬಿಜೆಪಿ ಪರ ಸ್ಪರ್ಧಿಸಿದ್ದ ಎಮ್.ಸರವಣ 36, 369 ಮತ ಪಡೆದಿದ್ದರೆ, ರಿಜ್ವಾನ್ ಹರ್ಷದ್ 49, 890 ಮತ ಪಡೆದು ವಿಧಾನಸಭೆಯನ್ನು ಪ್ರವೇಶಿಸಿದರು. ನಂತರದಲ್ಲಿ ಶಾಸಕರಾದ ರಿಜ್ವಾನ್ ಅರ್ಷದ್ ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
-
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ












Click it and Unblock the Notifications