ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾನ್ಯಾಕೆ ರಾಜೀನಾಮೆ ನೀಡಲಿ: ಸಿಎಂ ಕುಮಾರಸ್ವಾಮಿ

|
Google Oneindia Kannada News

ಬೆಂಗಳೂರು, ಜುಲೈ 11: ಕರ್ನಾಟಕದಲ್ಲಿನ ರಾಜಕೀಯ ಬೆಳವಣಿಗೆ, ಸರ್ಕಾರ ಬಿದ್ದು ಹೋಗುತ್ತದೆ ಎಂಬ ಪರಿಸ್ಥಿತಿ ಬಂದರೂ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಆತ್ಮವಿಶ್ವಾಸದ ಬಗ್ಗೆ ಅನೇಕರು ಅಚ್ಚರಿ ವ್ಯಕ್ತಪಡಿಸಿದ್ದರು. ಶಾಸಕರ ಸರಣಿ ರಾಜೀನಾಮೆ ನಂತರ ಅಗತ್ಯ ಕ್ರಮಗಳನ್ನು ಕೈಗೊಂಡರೂ ಕುಮಾರಸ್ವಾಮಿ ಅವರು ಮಾಧ್ಯಮಗಳ ಮುಂದೆ ಹೆಚ್ಚಾಗಿ ಕಾಣಿಸಿಕೊಂಡಿರಲಿಲ್ಲ.

ಆದರೆ, ಗುರುವಾರ ಬೆಳಗ್ಗೆ ಕುಮಾರಕೃಪ ಅತಿಥಿ ಗೃಹದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರ ಜೊತೆ ಸಭೆ ಮುಗಿಸಿಕೊಂಡು ಹೊರ ಬಂದ ಕುಮಾರಸ್ವಾಮಿ ಅವರು ಮಾತನಾಡಿ, ನಾನ್ಯಾಕೆ ರಾಜೀನಾಮೆ ನೀಡಲಿ ಎಂದು ಗುಡುಗಿದರು.

Karnataka Crisis : Why should I resign says CM HD Kumaraswamy

'ಈ ಹಿಂದೆ 18 ಶಾಸಕರು ಯಡಿಯೂರಪ್ಪ ಅವರ ವಿರುದ್ಧ ನಿಂತಿದ್ದರು, ಆಗ ಅವರೇನು ರಾಜೀನಾಮೆ ಕೊಟ್ಟಿದ್ದರಾ? 2008-09ರಲ್ಲಿ ಏನಾಗಿತ್ತು ಎಂಬುದನ್ನು ನೆನಪು ಮಾಡಿಕೊಳ್ಳಲಿ, ನಾನು ರಾಜೀನಾಮೆ ಕೊಡುವಂಥ ಪರಿಸ್ಥಿತಿ ಉದ್ಭವವಾಗಿಲ್ಲ' ಎಂದು ಹೇಳಿದರು.

ಸ್ಪೀಕರ್ ರಮೇಶ್ ಮುಂದಿರುವ 7 ಆಯ್ಕೆಗಳುಸ್ಪೀಕರ್ ರಮೇಶ್ ಮುಂದಿರುವ 7 ಆಯ್ಕೆಗಳು

ಮೈತ್ರಿ ಸರ್ಕಾರವನ್ನು ರಕ್ಷಣೆ ಮಾಡಲು 'ಕಾಮರಾಜ ಮಾರ್ಗ' ಅನುಸರಿಸಿ ಎಲ್ಲಾ ಸಚಿವರು ರಾಜೀನಾಮೆ ಪಡೆದು, ಅತೃಪ್ತರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಮತ್ತೊಮ್ಮೆ ಸಂಪುಟ ವಿಸ್ತರಣೆಗೆ ಕುಮಾರಸ್ವಾಮಿ ಮುಂದಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

ಕರ್ನಾಟಕದ ರೆಬೆಲ್ ಶಾಸಕರಿಗೆ ಖಡಕ್ ಆದೇಶ ಕೊಟ್ಟ ಸುಪ್ರೀಂಕೋರ್ಟ್ಕರ್ನಾಟಕದ ರೆಬೆಲ್ ಶಾಸಕರಿಗೆ ಖಡಕ್ ಆದೇಶ ಕೊಟ್ಟ ಸುಪ್ರೀಂಕೋರ್ಟ್

ಸಿಎಂ, ಡಿಸಿಎಂ ಕೂಡಾ ಬದಲಾಗಬಹುದು. ಕುಮಾರಸ್ವಾಮಿ ಅವರು ಯಾವ ರಗಳೆಯೂ ಬೇಡ ಎಂದು ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ರಾಜೀನಾಮೆ ಘೋಷಿಸಬಹುದು. ಒಂದು ವೇಳೆ ಕುಮಾರಸ್ವಾಮಿ ಅವರು ರಾಜೀನಾಮೆ ಸಲ್ಲಿಸಿದರೆ, ಬಿಜೆಪಿ ತನ್ನ ಹಕ್ಕು ಮಂಡನೆ ಮಾಡಲು ಮುಂದಾಗಬಹುದು ಎಂಬ ಸುದ್ದಿಯೂ ಇತ್ತು. ಆದರೆ, ಕುಮಾರಸ್ವಾಮಿ ರಾಜೀನಾಮೆ ನೀಡುವ ಪ್ರಶ್ನೆಯೇ ಈಗ ಉದ್ಭವವಾಗಿಲ್ಲ.

English summary
Karnataka Crisis: 'Why should I resign'? political situation is not become worst and BS Yeddyurappa should remember he always faced opposition from 18 MLAs and not resigned during 2008-09 tenure said CM HD Kumaraswamy. Kumaraswamy had meeting with senior Congress leader at Kumara Krupa Guest house, Bengaluru today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X