Breaking News: ಕರ್ನಾಟಕದ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಕೊವಿಡ್-19 ಪಾಸಿಟಿವ್
ಬೆಂಗಳೂರು, ಜನವರಿ 01: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ. ರಾಜ್ಯದ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ.
ಕೋವಿಡ್-19 ಲಘು ಲಕ್ಷಣಗಳು ಕಾಣಿಸಿದ ಕಾರಣ ನಾನು ಇಂದು ಪರೀಕ್ಷೆಗೆ ಒಳಪಟ್ಟಿದ್ದು, ಕೋವಿಡ್-19 ವರದಿ ಪಾಸಿಟಿವ್ ಬಂದಿದೆ.
— B.C Nagesh (@BCNagesh_bjp) January 1, 2022
ಕ್ವಾರಂಟೈನ್ನಲ್ಲಿದ್ದು ಅಗತ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ.
"ಕೋವಿಡ್-19 ಲಘು ಲಕ್ಷಣಗಳು ಕಾಣಿಸಿದ ಕಾರಣ ನಾನು ಇಂದು ಪರೀಕ್ಷೆಗೆ ಒಳಪಟ್ಟಿದ್ದು, ಕೊವಿಡ್-19 ವರದಿ ಪಾಸಿಟಿವ್ ಬಂದಿದೆ. ಕ್ವಾರಂಟೈನ್ನಲ್ಲಿದ್ದು ಅಗತ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ," ಎಂದು ಸಚಿವ ಬಿ ಸಿ ನಾಗೇಶ್ ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಮತ್ತೊಮ್ಮೆ 1,000ದ ಗಡಿ ದಾಟಿದೆ. ಹೊಸ ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.86ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 0.48ರಷ್ಟಿದೆ.
ಕಳೆದ ಒಂದೇ ದಿನದಲ್ಲಿ 1033 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 354 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 5 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 38340 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ.
ಶನಿವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 30,08,370ಕ್ಕೆ ಏರಿಕೆಯಾಗಿದೆ. ಒಟ್ಟು 29,60,615 ಸೋಂಕಿತರು ಗುಣಮುಖರಾಗಿದ್ದು. 9,386 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.