ಚಾಮರಾಜಪೇಟೆ ಮನೆಮಗನನ್ನು ಗೆಲ್ಲಿಸೋಕೆ ಪ್ರಚಾರವೇ ಬೇಡ: ಜಮೀರ್ ಅಹ್ಮದ್ ಖಾನ್
ಚಾಮರಾಜನಗರ: ಜಮೀರ್ ಅಹ್ಮದ್ ಖಾನ್ ಅಂದ್ರೆ ಚಾಮರಾಜಪೇಟೆ ಮನೆ ಮಗ ಅಂತ ಇಂದು ಜನ ಮತ್ತೊಮ್ಮೆ ಸಾಭೀತು ಪಡಿಸಿದ್ದಾರೆ. ನಾನು ರಾಜ್ಯದ ಹಲವಡೆ ಪಕ್ಷದ ಪರವಾಗಿ ಪ್ರಚಾರ ಮಾಡಿದ್ದೆ, ಆದ್ರೆ ನನ್ನ ಕ್ಷೇತ್ರದಲ್ಲಿ ಪ್ರಚಾರ ಮಾಡಲಿಲ್ಲ. ಆದ್ರೂ ನನ್ನನ್ನು ಗೆಲ್ಲಿಸಿದ್ದಾರೆ ಎಂದು ಚಾಮರಾಜಪೇಟೆ ಕಾಂಗ್ರೆಸ್ ವಿಜೇತ ಅಭ್ಯರ್ಥಿ ಜಮೀರ್ ಅಹ್ಮದ್ ಖಾನ್ ಹೇಳಿದರು.
ನನ್ನ ಕ್ಷೇತ್ರಕ್ಕಾಗಿ ನಾನು ಪ್ರಚಾರ ಮಾಡಿದ್ದು ಕೇವಲ ಮೂರು ಗಂಟೆ ಅಷ್ಟೇ. ನಮ್ಮೆಲ್ಲಾ ಪಕ್ಷದ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರ ಅಭಿಮಾನವೇ ನನ್ನ ಗೆಲುವಿಗೆ ಕಾರಣವಾಗಿದೆ. ನಾನು ರಾಜ್ಯದಲ್ಲಿ 49 ಕ್ಷೇತ್ರಗಳಿಗೆ ಭೇಟಿ ನೀಡಿ ಸಿದ್ದರಾಮಯ್ಯ ಅವರೊಂದಿಗೆ ಪ್ರಜಾಧ್ವನಿ ಯಾತ್ರೆ ಮಾಡಿದ್ದೆ. ಇದರ ಜೊತೆಗೆ 102 ಕ್ಷೇತ್ರಗಳ ಪ್ರಚಾರದಲ್ಲಿ ಭಾಗಿಯಾಗಿದ್ದೆ. ಈ ವೇಳೆ ಜನರು ಬದಲಾವಣೆಗೆ ಕಾಯುತ್ತಿರುವುದ ತಿಳಿದಿದೆ ಎಂದರು.

ನಮ್ಮ ಪ್ರಚಾರದ ಸಮಯದಲ್ಲಿ ಜನರು ನಮ್ಮ ಮೇಲಿಟ್ಟಿರುವ ನಿರೀಕ್ಷೆಗಳನ್ನು ನಾವು ಕಂಡುಕೊಂಡಿದ್ದೇವೆ. ಜೊತೆಗೆ ಈ ಹಿಂದೆ ಕಾಂಗ್ರೆಸ್ ಅಧಿಕಾರವಿದ್ದಾಗ ಇದ್ದ ಸವಲತ್ತುಗಳನ್ನು ನಮಗೇ ಜನರು ನೆನಪಿಸಿದರು. ಈ ಹಿಂದೆಯು ಇಂತಹ ಭಾಗ್ಯಗಳನ್ನು ಕೊಟ್ಟಿರಲಿಲ್ಲ, ಇನ್ನುಮುಂದೆಯೂ ಯಾರೂ ಕೊಡುವುದಿಲ್ಲ ಎಂದು ಹೇಳುವ ಮೂಲಕ ಜನರು ಸರ್ಕಾರ ಬದಲಾವಣೆಗೆ ಕಾಯುತ್ತಿರುವುದಾಗಿ ಹೇಳಿದರು.
ಎಲ್ಲಾ ಧರ್ಮ, ಜಾತಿಗಳಿಗೆ ಉತ್ತಮ ಸವಲತ್ತುಗಳು ಸಿಗಬೇಕೆಂದರೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮಾತ್ರ ಸಾಧ್ಯ. ರಾಜ್ಯಕ್ಕೆ ಒಳ್ಳೆಯದಾಗಬೇಕಾದರೆ, ಎಲ್ಲಾ ಸಮಾಜದವರಿಗೆ ಒಳ್ಳೆಯದಾಗಬೇಕಾದರೆ ಕಾಂಗ್ರೆಸ್ ಸರ್ಕಾರ ಬರಲೇಬೆಕು ಎಂದು ಈ ಹಿಂದೆಯೇ ಮತದಾದರರು ನಮಗೆ ಹೇಳಿದ್ದರು. ಅದೇ ವಿಶ್ವಾಸವನ್ನು ನಾವು ಉಳಿಸಿಕೊಂಡಿದ್ದು, ನನ್ನ ನಿರೀಕ್ಷೆಯಂತೆ ಇಂದು ನಮ್ಮ ಪಕ್ಷ ಬಹುಮತ ಪಡೆದಿದೆ ಎಂದರು.
Image Source: Twitter
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications