ಮಹಾಲಕ್ಷ್ಮಿ ಲೇಔಟ್ನಲ್ಲಿ ಹಣ ಹಂಚಿದ ಬಿಜೆಪಿ: ವಿಡಿಯೋ ಹಂಚಿಕೊಂಡು ಕಿಡಿಕಾರಿದ ಕಾಂಗ್ರೆಸ್
ಬೆಂಗಳೂರು, ಮೇ.10: ಬುಧವಾರ ರಾಜ್ಯಾಧ್ಯಂತ ವಿಧಾನಸಭಾ ಚುನಾವಣೆಗಾಗಿ ಮತದಾರರು ಮತ ಚಲಾಯಿಸುತ್ತಿದ್ದು, ಹಲವೆಡೆ ಅಕ್ರಮಗಳು ಕಂಡು ಬಂದಿವೆ. ಮತಗಟ್ಟೆಗಳಲ್ಲಿ ಹಲವು ದೊಷಗಳು ವರದಿಯಾಗಿವೆ. ಇದರ ಜೊತೆಗೆ ಮತದಾರರು ಇವಿಎಂಗಳನ್ನೇ ಹೊಡೆದುಹಾಕಿರುವ ಘಟನೆಯು ನಡೆದಿದೆ. ಇನ್ನು ಮತಗಟ್ಟೆಯ ಸುತ್ತಮುತ್ತ ಹಣ ಹಂಚಿಕೆ ಮಾಡಿದ್ದಾರೆ ಎಂಬ ಆರೋಪಗಳು ಬಂದಿವೆ.
ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಮಾರಪ್ಪನಪಾಳ್ಯ ವಾರ್ಡ್ ನ ಬಿಜೆಪಿ ಅಧ್ಯಕ್ಷ ನಾಗೇಂದ್ರ ವಿರುದ್ಧ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಮಂಜುನಾಥ ಎಚ್.ಎಸ್ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ಬಿಡುಗಡೆ ಮಾಡಿ ಚುನಾವಣಾ ಆಯೋಗ, ಕರ್ನಾಟಕ ಬಿಜೆಪಿ ಮತ್ತು ಬಿಜೆಪಿ ಅಭ್ಯರ್ಥಿ ಗೋಪಾಲಯ್ಯ ವಿರುದ್ಧ ಕಿಡಿಕಾರಿದ್ದಾರೆ.

"ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಮಾರಪ್ಪನಪಾಳ್ಯ ವಾರ್ಡ್ ನ ಬಿಜೆಪಿ ಅಧ್ಯಕ್ಷ ನಾಗೇಂದ್ರ ಎಂಬುವರು ಬಹಿರಂಗವಾಗಿ ದುಡ್ಡು ಹಂಚುತ್ತಿದ್ದಾರೆ! 40% ಕಮಿಷನ್ ಕಳ್ಳತನದ ಅಬಕಾರಿ ದುಡ್ಡಲ್ಲಿ ಮತ ಕೊಳ್ಳುತ್ತಿದ್ದೀರ ಗೋಪಾಲಯ್ಯ ಅವರೇ..?@ECISVEEP ಹೀಗೆ ಬಹಿರಂಗ ಹಣ ಹಂಚುತ್ತಿರುವವರ ವಿರುದ್ಧ ಕ್ರಮ ಯಾವಾಗ ಕೈಗೊಳ್ಳುವಿರಿ..?" ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಮಂಜುನಾಥ ಎಚ್.ಎಸ್ ವಿಡಿಯೋ ಹಂಚಿಕೊಂಡಿದ್ದಾರೆ.
ಮುಂದಯವರಿದು, "ಮತದಾನ ಸರ್ವಶ್ರೇಷ್ಠ ದಾನ ಅದನ್ನೂ ಹಣ ಕೊಟ್ಟು ಕೊಳ್ಳುವ ಇಂಥ ನೀಚರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು..! ಕರ್ನಾಟಕ ಬಿಜೆಪಿ ಮತದಾರರಿಗೆ ಹಣದ ಆಮಿಷ ಒಡ್ಡಿ ಮತ ಪಡೆಯಲು ನಾಚಿಕೆ ಆಗಬೇಕು ನಿಮಗೆ!!" ಎಂದು ಆಡಳಿತರೂಢ ಬಿಜೆಪಿ ಸರ್ಕಾರದ ವಿರುದ್ದ ಮಂಜುನಾಥ್ ಆಕ್ರೋಶ ಹೊರಹಾಕಿದ್ದಾರೆ.
36 ಸೆಕೆಂಡ್ಗಳ ವಿಡಿಯೋದಲ್ಲಿ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಮಾರಪ್ಪನಪಾಳ್ಯ ವಾರ್ಡ್ ನ ಬಿಜೆಪಿ ಅಧ್ಯಕ್ಷ ನಾಗೇಂದ್ರಅವರು ಮೊಬೈಲ್ನಲ್ಲಿ ಮಾತನಾಡುತ್ತಾ ಮತದಾರರಿಗೆ ಹಣ ಹಂಚುತ್ತಿದ್ದಾರೆ. ಮತ ಚಲಾಯಿಸದ ಮತದಾರರು ತಮ್ಮ ಚುನಾವಣಾ ಚೀಟಿಯನ್ನು ತೋರಿಸಿ ಹಣ ಪಡೆಯುತ್ತಿರುವುದು ಕಾಣಬಹುದು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications