ಅವರು ಬಂಗಾರಪ್ಪನವರ ಮಗಳು ಹೀಗಾಗಿ ಕಾಂಗ್ರೆಸ್ ಸೇರಿದ್ದಾರೆ: ಆರ್.ಅಶೋಕ್ ಪ್ರತಿಕ್ರಿಯೆ
ಬೆಂಗಳೂರು, ಏಪ್ರಿಲ್ 28: ದಿವಂಗತ ಮೇರುನಟ ಡಾ.ರಾಜಕುಮಾರ್ ಹಾಗೂ ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಯಾವತ್ತು ರಾಜಕೀಯದ ಬಗ್ಗೆ ಮಾತನಾಡಿದವರಲ್ಲ. ಇವರು ಬಂಗಾರಪ್ಪನವರ ಮಗಳು ಹೀಗಾಗಿ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಆರ್.ಅಶೋಕ್ ಹೇಳಿದರು.
ಜೆಡಿಎಸ್ ತೊರೆದು ಶುಕ್ರವಾರ ಕಾಂಗ್ರೆಸ್ ಸೇರ್ಪಡೆಯಾದ ಗೀತಾ ಶಿವರಾಜಕುಮಾರ್ ಅವರ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಕನಕಪುರ ಬಿಜೆಪಿ ಅಭ್ಯರ್ಥಿ ಆರ್. ಅಶೋಕ್ ಪ್ರತಿಕ್ರಿಯಿಸಿದರು. ಗೀತಾ ಶಿವರಾಜಕುಮಾರ್ ಅವರ ಪಕ್ಷ ಸೇರ್ಪಡೆ ಇದೇ ಮೊದಲೇನಲ್ಲ. ಅವರ ಸಹೋದರ (ಮಧು ಬಂಗಾರಪ್ಪ) ರಾಜಕೀಯಕ್ಕೆ ಬಂದಾಗಲೇ ಅವರಿಗೂ ಆಸೆ ಇತ್ತು. ಆಗಲೂ ಅವರು ರಾಜಕೀಯ ಪಕ್ಷವೊಂದನ್ನು ಸೇರಿದ್ದರು ಎಂದರು.

ಡಾ.ರಾಜಕುಮಾರ್ ಅವರಾಗಲಿ, ಡಾ.ಪುನೀತ್ ರಾಜಕುಮಾರ್ ಅವರಾಗಲಿ ರಾಜಕೀಯಕ್ಕೆ ಬಂದವರಲ್ಲ. ರಾಜಕೀಯ ಕುರಿತು ಯಾವತ್ತೂ ಮಾತನಾಡಿಲ್ಲ. ಗೀತಾ ಶಿವರಾಜಕುಮಾರ್ ರಾಜಕುಮಾರ್ ಅವರ ಸೊಸೆಯಾದರೂ ಸಹ ಅವರು ಮಾಜಿ ಸಿಎಂ ಎಸ್. ಬಂಗಾರಪ್ಪನವರ ಪುತ್ರಿ. ಅವರಿಗೆ ಮೊದಲಿಂದಲೂ ರಾಜಕೀಯದ ಆಸೆ ಇತ್ತು. ಅವರು ಹೊಸದಾಗೇನು ಪಕ್ಷ ಸೇರಿಲ್ಲ. ಇದಕ್ಕೂ ರಾಜಕುಮಾರ್ ಅವರ ಕುಟುಂಬಕ್ಕೂ ಏನು ಸಂಬಂಧ ಇಲ್ಲ ಎಂದು ಹೇಳಿದರು.
ಮಧು ಬಂಗಾರಪ್ಪ ನಂತರ ಗೀತಾ ಸೇರ್ಪಡೆ
ಇತ್ತೀಚೆಗಷ್ಟೇ ಗೀತಾ ಶಿವರಾಜ್ ಕುಮಾರ್ ಸಹೋದರ ಮಧು ಬಂಗಾರಪ್ಪನವರು ಸಹ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಅವರು ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಅದೇ ಕ್ಷೇತ್ರದಲ್ಲಿ ಕುಮಾರ್ ಬಂಗಾರಪ್ಪ ಅವರು ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.

ಈ ಮೊದಲು ಜೆಡಿಎಸ್ನಲ್ಲಿದ್ದ ಹಿರಿಯ ನಟ ಶಿವರಾಜಕುಮಾರ್ ಅವರ ಪತ್ನಿ ಗೀತಾ ಅವರು ಪಕ್ಷ ತೊರೆದು ಶುಕ್ರವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದರು. ಸಾಕಷ್ಟು ಜನರಿಗೆ ಗಾಳಾ ಹಾಕಿ ಹಾಕಿ ಸುಸ್ತಾಗಿದ್ದೆ. ಈ ಬಾರಿ ಗೀತಾ ಶಿವರಾಜಕುಮಾರ್ ಅವರಿಗೆ ಗಾಳ ಹಾಕಿ ಹಿಡಿದು ಪಕ್ಷಕ್ಕೆ ಕರೆತಂದಿದ್ದೇನೆ. ಅವರ ಸೇರ್ಪಡೆಯಿಂದ ಕಾಂಗ್ರೆಸ್ಗೆ ಬಲ ಬರಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು











Click it and Unblock the Notifications