ಹೆಬ್ಬಾಳದಲ್ಲಿ ಮತದಾರರ ಆಶೀರ್ವಾದ ನನ್ನ ಮೇಲಿದೆ: ನಾರಾಯಣಸ್ವಾಮಿ
ಬೆಂಗಳೂರು ಏಪ್ರಿಲ್ 19: ಹೆಬ್ಬಾಳದಲ್ಲಿ ಒಂದು ಋಣ ಮತ್ತೊಂದು ಹಣದ ಆಧಾರದ ಮೇಲೆ ಚುನಾವಣೆ ನಡೆಯುತ್ತಿದ್ದು, ಕಳೆದ 2 ವರ್ಷಗಳಲ್ಲಿ ನಾನು ಮಾಡಿದ ಸೇವೆಗೆ ಮತದಾರರು ನನ್ನನ್ನು ಹರಿಸಲಿದ್ದಾರೆ ಎಂದು ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೈ ಎ ನಾರಾಯಣಸ್ವಾಮಿ ವಿಶ್ವಾಸವ್ಯಕ್ತಪಡಿಸಿದರು.
ನಗರದ ಜಯಮಹಲ್ ಬಿಬಿಎಂಪಿ ಕಚೇರಿಯಲ್ಲಿ ತನ್ನ ತಾಯಿ ಪತ್ನಿ ಯೊಂದಿಗೆ ನಾಮಪತ್ರ ಸಲ್ಲಿಸಿದ ಅವರು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು. ಹೆಬ್ಬಾಳ ಚುನಾವಣೆಯಲ್ಲಿ ಹಣದಿಂದ ಮತದಾರರ ಮನವೊಲಿಸಲು ಸಾಧ್ಯವಿಲ್ಲ.
ತಮ್ಮ ಹಣ ಬಲದಿಂದಲೇ ಎಲ್ಲವನ್ನು ಸಾಧಿಸುವ ಉತ್ಸಾಹದಲ್ಲಿರುವ ಅಭ್ಯರ್ಥಿಗಳು ಸೋಲಿಸಿ ರುಚಿಯನ್ನು ಕಾಣಲಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ನಾನು ಪ್ರತಿನಿತ್ಯ ಜನರ ಸೇವೆಯನ್ನು ಮಾಡಿದ್ದೇನೆ. ಆ ಜನರು ನಮ್ಮ ಸೇವೆಗೆ ಚುನಾವಣೆಯಲ್ಲಿ ಉತ್ತರ ನೀಡಲಿದ್ದಾರೆ ಎಂದರು.

ವೈ ಎ ನಾರಾಯಣಸ್ವಾಮಿ ತಾಯಿ ಪಾಪಮ್ಮ ಮಾತನಾಡಿ, ನನ್ನ ಮಗ ಜನರ ಸೇವೆ ಸಲ್ಲಿಸಿದ್ದು ಬಹುಮತದಿಂದ ಗೆಲ್ಲಲಿದ್ದಾರೆ. ಅಲ್ಲದೆ, ಮಂತ್ರಿಯಾಗಿ ಇನ್ನೂ ಹೆಚ್ಚಿನ ಸೇವೆಯಲ್ಲಿ ಸಲ್ಲಿಸಲಿದ್ದಾರೆ ಎಂದರು. ಇದಕ್ಕೂ ಮುನ್ನ ರಾಧಾಕೃಷ್ಣ ಮಂದಿರದಿಂದ ನಡೆದ ಬೃಹತ್ ಮೆರವಣಿಗೆಯಲ್ಲಿ ಕೇಂದ್ರ ಸಚಿವ ಸದಾನಂದಗೌಡ ಸೇರಿದಂತೆ ಸಾವಿರಾರು ಜನರು ಭಾಗವಹಿಸಿದ್ದರು.
ಕಳೆದ 2013ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ಜಗದೀಶ್ ಕುಮಾರ್ ಆಯ್ಕೆಯಾಗಿದ್ದರು, ಆದರೆ 2016ರಲ್ಲಿ ಹೃದಯಾಘಾತದಿಂದ ಜಗದೀಶ್ ಕುಮಾರ್ ನಿಧನ ಹೊಂದಿದರು. ಆ ವೇಳೆ ವಿಧಾನ ಪರಿಷತ್ ಸದಸ್ಯರಾಗಿದ್ದ ನಾರಾಯಣಸ್ವಾಮಿ ಉಪ ಚುನಾವಣೆಯಲ್ಲಿ ಹೆಬ್ಬಾಳದಿಂದ ಸ್ಪರ್ಧಿಸಿ 15ಸಾವಿರಕ್ಕೂ ಅಧಿಕ ಮತಗಳಿಂದ ಗೆಲವು ಸಾಧಿಸಿದ್ದರು. ಇದೀಗ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಕಾಂಗ್ರೆಸ್ ನಿಂದ ಭೈರತಿ ಸುರೇಶ್ ನಾರಾಯಣಸ್ವಾಮಿ ವಿರುದ್ಧ ಸ್ಪರ್ಧಿಸಲಿದ್ದಾರೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications