Get Updates
Get notified of breaking news, exclusive insights, and must-see stories!

Karnataka Elections 2023: 40% ಭ್ರಷ್ಟಾರಿಗಳ ವಿರುಧ್ಧ ನನ್ನ ಮತ ಚಲಾಯಿಸಿದ್ದೇನೆ: ಪ್ರಕಾಶ್‌ ರಾಜ್‌

ಬೆಂಗಳೂರು, ಮೇ 10: ರಾಜ್ಯ ವಿಧಾನಸಭಾ ಚುನಾವಣೆಗೆ ಆರಂಭವಾಗಿದೆ. ಇಂದು( ಬುಧವಾರ) ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯ ವರೆಗೂ ಮತದಾನ ಪ್ರಕ್ರಿಯೆ ನಡೆಯಲಿದ್ದು, ಬೆಳಗ್ಗೆ ಬಹುಭಾಷಾ ನಟ ಪ್ರಕಾಶ್‌ರಾಜ್‌ ಅವರ ಬೆಂಗಳೂರಿನ ಶಾಂತಿ ನಗರ ಸೇಂಟ್‌ ಜೋಸೆಫ್‌ ಸ್ಕೂಲ್‌ನಲ್ಲಿ ಸಾಮಾನ್ಯರಂತೆ ಸರದಿ ಸಾಲಿನಲ್ಲಿ ಬಂದು ಮತ ಚಲಾಯಿಸಿದರು.

prakash raj

ಇನ್ನೂ ಈ ಕುರಿತು ನಟ ಪ್ರಕಾಶ್‌ ರಾಜ್‌ ಟ್ವೀಟ್‌ ಮಾಡಿದ್ದು, ಮನಃಸಾಕ್ಷಿಯಿಂದ ಮತ ಚಲಾಯಿಸಿ ಎಂದು ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ. ನನ್ನ ಪ್ರೀತಿಯ ಕನ್ನಡಿಗರೆ.. ನಾನು ಮತೀಯ ರಾಜಕಾರಣದ ವಿರುದ್ಧ.. 40% ಭ್ರಷ್ಟಾಚಾರಿಗಳ ವಿರುದ್ಧ ನನ್ನ ಮತ ಚಲಾಯಿಸಿದ್ದೇನೆ. ನೀವು ನಿಮ್ಮ ಮನಃಸಾಕ್ಷಿಯಿಂದ.. ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿ ಉಳಿಸಲು ನಿಮ್ಮ ಮತವನ್ನು ಚಲಾಯಿಸಿ ಎಂದು ಬಹುಭಾಷಾ ನಟ ಪ್ರಕಾಶ್‌ ರಾಜ್‌ ಅವರು ಹೇಳಿದ್ದಾರೆ.

ಈಗಾಗಲೇ ಬಿಜೆಪಿ ರಾಜ್ಯ ಸರ್ಕಾರ 40% ಕಮಿಷನ್‌ ಆರೋಪ ಹೊತ್ತಿರುವ ಬಿಜೆಪಿ ಸರ್ಕಾರದ ವಿರುದ್ದ ಈ ಹಿಂದೆಯೂ ಅಸಮಾಧಾನ ವ್ಯಕ್ತಪಡಿಸಿದ್ದ ಬಹುಭಾಷಾ ನಟ ಪ್ರಕಾಶ್‌ ರಾಜ್‌ 40% ಭ್ರಷ್ಟಾಚಾರಿಗಳ ವಿರುದ್ಧ ನನ್ನ ಮತ ಚಲಾಯಿಸಿದ್ದೇನೆ ಎಂದು ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+