ಶಿಕಾರಿಪುರದ ಹೆಣ್ಣುಬಾಕನ ಸಿಡಿ ಹಾಲಪ್ಪಗೆ ಸಿಕ್ಕಿರಬೇಕು ಎಂದ ಬೇಳೂರು
Recommended Video

ಬೆಂಗಳೂರು, ಏಪ್ರಿಲ್ 19: ಶಿಕಾರಿಪುರದಲ್ಲಿ ಒಬ್ಬ ಹೆಣ್ಣುಬಾಕ ಇದ್ದಾನೆ ಅವನ ಸಿಡಿ ಹಾಲಪ್ಪಗೆ ಸಿಕ್ಕಿರಬೇಕು, ಅದನ್ನೇ ತೋರಿಸಿ ಹೆದರಿಸಿ ಬಿಎಸ್ವೈ ನಿಂದ ಟಿಕೆಟ್ ಗಿಟ್ಟಿಸಿದ್ದಾನೆ ಎಂದು ಬಿಜೆಪಿ ಬಂಡಾಯ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಜೆಪಿಯಿಂದ ಬಂದವರಿಗೆಲ್ಲಾ ಟಿಕೆಟ್ ನೀಡಲಾಗಿದೆ, ನಾನು ಬಿಜೆಪಿಗೆ ನಿಷ್ಠನಾಗಿದ್ದು ಕೆಜೆಪಿಗೆ ಹಾರದೇ ಇದ್ದದ್ದಕ್ಕೆ ಈಗ ಶಿಕ್ಷೆ ನೀಡಲಾಗುತ್ತಿದೆ, ನಮ್ಮ ಕಾರ್ಯಕರ್ತರ ಶಾಪ ಯಡಿಯೂರಪ್ಪಗೆ ತಟ್ಟದೆ ಇರದು ಎಂದರು.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ಯಡಿಯೂರಪ್ಪ ಅವರು ಕಾಂಗ್ರೆಸ್ ಹಾಗೂ ಜೆಡಿಎಸ್ ಜೊತೆಗೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ ಅವರು, ಶಿಕಾರಿಪುರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಲಿಂಗಾಯತ ಅಭ್ಯರ್ಥಿಯನ್ನು ಕಣಕ್ಕಿಳಿಸದಂತೆ ನೋಡಿಕೊಂಡಿದ್ದಾರೆ ಎಂದರು.

'ನನಗೆ ಜೆಡಿಎಸ್ನಿಂದ ಬುಲಾವ್ ಬಂದಿದೆ ಆದರೆ ನಾನು ಹೋಗುವುದಿಲ್ಲ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ನನ್ನ ಬಲವನ್ನು ಯಡಿಯೂರಪ್ಪಗೆ ಸಾಬೀತು ಮಾಡುತ್ತೇನೆ, ಹಾಲಪ್ಪನನ್ನು ಸೋಲಿಸುವುದೇ ನನ್ನ ಗುರಿ' ಎಂದರು. ಜೆಡಿಎಸ್ ಪಕ್ಷವು ಬಾಹ್ಯವಾಗಿ ಅಥವಾ ಆಂತರಿಕವಾಗಿ ನನಗೆ ಬೆಂಬಲ ನೀಡಿದರೆ ನಾನು ಬೇಡವೆನ್ನುವುದಿಲ್ಲ ಎಂದರು.
ಬೇಳೂರು ಗೋಪಾಲಕೃಷ್ಣ ಅವರು ಸಾಗರ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಬದಲಾಗಿ ಹಾಲಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ. ಹಾಲಪ್ಪ ಅವರು ಯಡಿಯೂರಪ್ಪ ಅವರು ಕೆಜೆಪಿ ಮಾಡಿದಾಗ ಅವರೊಂದಿಗೆ ಸೇರಿಕೊಂಡಿದ್ದರು, ಬೇಳೂರು ಗೋಪಾಲಕೃಷ್ಣ ಬಿಜೆಪಿಯಲ್ಲಿಯೇ ಉಳಿದಿದ್ದರು.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications