ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಆಡಳಿತ ಅಂತ್ಯ : ಅನಂತ್ ಕುಮಾರ್
ಬೆಂಗಳೂರು, ಏಪ್ರಿಲ್ 28 : ಇನ್ನು ಕೆಲವೇ ದಿನಗಳಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಆಡಳಿತ ಅಂತ್ಯಗೊಳ್ಳಲಿದೆ ಎಂದು ಕೇಂದ್ರ ರಸಗೊಬ್ಬರ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಕಾಂಗ್ರೆಸ್ಸಿಗೆ ಎಚ್ಚರಿಕೆಯ ಗಂಟೆ ಬಾರಿಸಿದ್ದಾರೆ.
ನಗರದಲ್ಲಿ ಶನಿವಾರ ಬೊಮ್ಮನಹಳ್ಳಿ, ಜಯನಗರ ಹಾಗೂ ಪದ್ಮನಾಭನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ನಡೆಸಿದ ಅವರು, ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
In Pics:ಬೊಮ್ಮನಹಳ್ಳಿ ಅಭ್ಯರ್ಥಿ ಸತೀಶ್ ರೆಡ್ಡಿ ಪರ ಅನಂತ್ ಕುಮಾರ್ ಮತಯಾಚನೆ
ಸುಳ್ಳು ಹಾಗೂ ಭ್ರಷ್ಟಾಚಾರದ ಆಧಾರದ ಮೇಲೆ ನಿಂತಿರುವ ಕಾಂಗ್ರೆಸ್ ಸರಕಾರ ಚುನಾವಣೆಯಲ್ಲಿ ಸೋಲನ್ನು ಅನುಭವಿಸಲಿದೆ. ಕಾಂಗ್ರೆಸ್ ಸರಕಾರ 40 ವರ್ಷಕ್ಕಿಂತಲೂ ಹೆಚ್ಚು ಕಾಲ ಆಡಳಿತ ನಡೆಸಿದೆ. ದಶಕಗಳ ಕಾಲ ಆಡಳಿತದ ಚುಕ್ಕಾಣಿ ಹಿಡಿದಿದ್ದರೂ ಕೂಡಾ ದೇಶ ಹಾಗೂ ರಾಜ್ಯದ ಅಭಿವೃದ್ದಿಯಾಗಿಲ್ಲದೆ ಇರುವುದು ವಿಪರ್ಯಾಸ ಎಂದರು.

ಸ್ವತಃ ಸಿದ್ದರಾಮಯ್ಯ ಅವರೇ ತಾವು ಕೇವಲ 169 ಭರವಸೆಗಳನ್ನು ಈಡೇರಿಸಲು ಸಾಧ್ಯವಾಗಿದೆ ಎಂದು ಹೇಳುತ್ತಾರೆ. ಅಂತಹ ಸಮಯದಲ್ಲಿ ಈ ಬಾರಿಯೂ ಸುಳ್ಳು ಭರವಸೆಗಳನ್ನು ನೀಡಲು ಮುಂದಾಗುವ ಮೂಲಕ ಜನರ ಕಣ್ಣಿಗೆ ಮಣ್ಣೆರೆಚುವ ಕಾರ್ಯ ಮಾಡುತ್ತಿದ್ದಾರೆ ಎಂದು ಅವರು ದೂರಿದರು.
ದೇಶದ ಚುಕ್ಕಾಣಿ ಹಿಡಿದಿರುವ ಸಮರ್ಥ ನಾಯಕ ನರೇಂದ್ರ ಮೋದಿಯವರ ಬಗ್ಗೆ ರಾಜ್ಯದಲ್ಲಿ ಒಲವು ಹೆಚ್ಚಾಗುತ್ತಿದೆ. ಇದು ಮುಂಬರುವ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ವರವಾಗಲಿದ್ದು, ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರಕ್ಕೆ ಜನರು ಆಶೀರ್ವದಿಸಲಿದ್ದಾರೆ ಎಂದರು.

ರಾಜ್ಯದ ಜನರು ಅಭಿವೃದ್ದಿ ಪರ ಒಲವು ಹೊಂದಿದ್ದಾರೆ. ರಾಜ್ಯ ಸರಕಾರದ ವೈಫಲ್ಯಗಳನ್ನು ದಿನನಿತ್ಯ ಜನರ ಮುಂದಿಡುವ ಮೂಲಕ ರಾಜ್ಯದ ಮತದಾರರ ಮನವೊಲಿಸಲಿದ್ದೇವೆ ಎಂದು ಅನಂತ್ ಕುಮಾರ್ ನುಡಿದರು.
ರಾಜ್ಯದಲ್ಲಿ ಸಮರ್ಥ ಆಡಳಿತದ ಅನಿವಾರ್ಯತೆಯನ್ನು ಜನರು ಮನಗೊಂಡಿದ್ದಾರೆ. ರಾಜ್ಯದ ಹಲವಾರು ಕ್ಷೇತ್ರಗಳಲ್ಲಿ ಸಂಚರಿಸುತ್ತಿದ್ದು ಅಲ್ಲಿನ ಜನರ ಆಶೋತ್ತರಗಳಿಗೆ ಕಿವಿಯಾಗಿದ್ದೇನೆ. ಕಾಂಗ್ರೆಸ್ ಸರಕಾರದ ಐದು ವರ್ಷಗಳ ಆಡಳಿತ ಜನರನ್ನು ಹೈರಾಣಾಗಿಸಿದ್ದು, ಜನರು ಬದಲಾವಣೆ ಬಯಸಿದ್ದಾರೆ ಎಂದರು.

ಬೊಮ್ಮನಹಳ್ಳಿಯಲ್ಲಿ ಸತೀಶ್ ರೆಡ್ಡಿ, ಜಯನಗರದಲ್ಲಿ ಬಿಎನ್ ವಿಜಯ್ ಕುಮಾರ್ ಮತ್ತು ಪದ್ಮನಾಭನಗರದಲ್ಲಿ ಆರ್ ಅಶೋಕ್ ಅವರು ಕಣಕ್ಕಿಳಿದಿದ್ದಾರೆ. ಮೂವರೂ ಹಾಲಿ ಶಾಸಕರಾಗಿದ್ದು, ಮತ್ತೆ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.
ಸಾವಿರಾರು ಕಾರ್ಯಕರ್ತರು ಹಾಗೂ ಬಿಜೆಪಿ ಅಭ್ಯರ್ಥಿಗಳ ಬೆಂಬಲಿಗರ ಜೊತೆಯಲ್ಲಿ ಬಿರುಸಿನ ಪ್ರಚಾರ ಕೈಗೊಂಡರು. ಬೆಳಿಗ್ಗೆ 10 ಗಂಟೆಗೆ ಪ್ರಾರಂಭಿಸಿದ ಪ್ರಚಾರ ಕಾರ್ಯ ಮೂರು ಕ್ಷೇತ್ರಗಳಲ್ಲೂ ಮುಂದುವರೆದು ಸಂಜೆ ಸಮಾಪ್ತಿಯಾಯಿತು. ಭಾನುವಾರ ಬೆಂಗಳೂರು ಹಾಗೂ ದೊಡ್ಡಬಳ್ಳಾಪುರದಲ್ಲಿ ಅನಂತ್ ಕುಮಾರ್ ಅವರು ಪ್ರಚಾರ ಕೈಗೊಳ್ಳಲಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications