ಗೆಲುವಿನ ಸಿಕ್ಸರ್ ಬಾರಿಸಲಿರುವ ಬಿಜೆಪಿ : ಡಿವಿ ಸದಾನಂದಗೌಡ
ಬೆಂಗಳೂರು, ಏಪ್ರಿಲ್ 28 : ರಾಜ್ಯದಲ್ಲಿ ಬಿಜೆಪಿ ಪರ ಒಲವು ಹೆಚ್ಚಾಗಿದ್ದು ಇನ್ನು ಕೆಲವೇ ದಿನಗಳಲ್ಲಿ ಗೆಲುವಿನ ಸಿಕ್ಸರ್ ಬಾರಿಸಲಿದೆ ಎಂದು, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಡಿವಿ ಸದಾನಂದಗೌಡ ಅವರು ಐಪಿಎಲ್ ಕ್ರಿಕೆಟ್ ಶೈಲಿಯಲ್ಲಿಯೇ ಕಾಮೆಂಟರಿ ಹೇಳಿದ್ದಾರೆ.
ನಗರದ ಪಶು ವೈದ್ಯಕೀಯ ಕಾಲೇಜಿನ ಆವರಣದಲ್ಲಿ ಶನಿವಾರ ಬಿರುಸಿನ ಪ್ರಚಾರದ ನಡುವೆ ಕ್ರಿಕೆಟ್ ಆಡಿದ ಅವರು, ಹೆಬ್ಬಾಳದ ಬಿಜೆಪಿ ಅಭ್ಯರ್ಥಿ ಡಾ. ವೈ ಎ ನಾರಾಯಣಸ್ವಾಮಿ ಅವರ ಪರ ಮತ ಯಾಚಿಸಿದರು.

ರಾಜ್ಯದಲ್ಲಿ ಬಿಜೆಪಿ ಗೆಲುವಿನ ಸಿಕ್ಸರ್ ಬಾರಿಸಲಿದೆ. ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆ ಎದ್ದಿದೆ. ದೇಶದ ಪ್ರಧಾನಿ ಮೋದಿಯವರು ರಾಜ್ಯದಲ್ಲಿ ಚುನಾವಣಾ ಪ್ರಚಾರ ಪ್ರಾರಂಭಿಸಲಿದ್ದಾರೆ ಎಂದರು. ಮೋದಿಯವರು ಏಪ್ರಿಲ್ 29ರಿಂದ ಮೇ 7ರವರೆಗೆ ವಿವಿಧ ಜಿಲ್ಲೆಗಳಲ್ಲಿ ಪ್ರಚಾರ ಮಾಡಲಿದ್ದಾರೆ.
ಕಾಂಗ್ರೆಸ್ ಪಕ್ಷ ಸುಳ್ಳು ಭರವಸೆಗಳನ್ನು ನೀಡುವ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಈಗಾಗಲೇ ತಾವು ನೀಡಿದ ಭರವಸೆಗಳನ್ನು ಈಡೇರಿಸದ ಅವರು ಈ ಹೊಸ ಭರವಸೆಗಳನ್ನು ಹೇಗೆ ಈಡೇರಿಸಲು ಸಾಧ್ಯ ಎಂದು ಸದಾನಂದ ಗೌಡರು ಪ್ರಶ್ನಿಸಿದರು.

ಕಾಂಗ್ರೆಸ್ ಸರಕಾರದ ವೈಫಲ್ಯಗಳನ್ನು ಸಮರ್ಪಕವಾಗಿ ಕರ್ನಾಟಕದ ಜನರ ಮುಂದಿಡುವ ಕಾರ್ಯವನ್ನು ಭಾರತೀಯ ಜನತಾ ಪಕ್ಷ ಯಶಸ್ವಿಯಾಗಿ ಮಾಡುತ್ತಿದೆ ಎಂದರು. ಈ ತಿಂಗಳಾಂತ್ಯದಲ್ಲಿ ಬಿಜೆಪಿ ಕೂಡ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಹೆಬ್ಬಾಳ ಬಿಜೆಪಿ ಅಭ್ಯರ್ಥಿ ಡಾ ವೈ ಎ ನಾರಾಯಣಸ್ವಾಮಿ ಮಾತನಾಡಿ, ಅಭಿವೃದ್ದಿಗೆ ಮಾತ್ರ ನನ್ನ ಬೆಂಬಲವಿರಲಿದೆ. ಕಳೆದ 2 ವರ್ಷಗಳಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದೇನೆ. ಇದನ್ನು ಗುರುತಿಸಿರುವ ಬಿ-ಪ್ಯಾಕ್ ಸಂಸ್ಥೆ ನನಗೆ ಎರಡನೇ ಸ್ಥಾನ ನೀಡಿದೆ. 5 ವರ್ಷಗಳ ಕಾಲ ಶಾಸಕನಾಗುವ ಅವಕಾಶ ದೊರೆತಲ್ಲಿ ಇನ್ನೂ ಹೆಚ್ಚಿನ ಅಭಿವೃದ್ದಿ ಕಾರ್ಯಗಳನ್ನ ಕೈಗೊಳ್ಳುವುದಾಗಿ ತಿಳಿಸಿದರು.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications