ಗೆಲುವಿನ ಸಿಕ್ಸರ್ ಬಾರಿಸಲಿರುವ ಬಿಜೆಪಿ : ಡಿವಿ ಸದಾನಂದಗೌಡ
ಬೆಂಗಳೂರು, ಏಪ್ರಿಲ್ 28 : ರಾಜ್ಯದಲ್ಲಿ ಬಿಜೆಪಿ ಪರ ಒಲವು ಹೆಚ್ಚಾಗಿದ್ದು ಇನ್ನು ಕೆಲವೇ ದಿನಗಳಲ್ಲಿ ಗೆಲುವಿನ ಸಿಕ್ಸರ್ ಬಾರಿಸಲಿದೆ ಎಂದು, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಡಿವಿ ಸದಾನಂದಗೌಡ ಅವರು ಐಪಿಎಲ್ ಕ್ರಿಕೆಟ್ ಶೈಲಿಯಲ್ಲಿಯೇ ಕಾಮೆಂಟರಿ ಹೇಳಿದ್ದಾರೆ.
ನಗರದ ಪಶು ವೈದ್ಯಕೀಯ ಕಾಲೇಜಿನ ಆವರಣದಲ್ಲಿ ಶನಿವಾರ ಬಿರುಸಿನ ಪ್ರಚಾರದ ನಡುವೆ ಕ್ರಿಕೆಟ್ ಆಡಿದ ಅವರು, ಹೆಬ್ಬಾಳದ ಬಿಜೆಪಿ ಅಭ್ಯರ್ಥಿ ಡಾ. ವೈ ಎ ನಾರಾಯಣಸ್ವಾಮಿ ಅವರ ಪರ ಮತ ಯಾಚಿಸಿದರು.

ರಾಜ್ಯದಲ್ಲಿ ಬಿಜೆಪಿ ಗೆಲುವಿನ ಸಿಕ್ಸರ್ ಬಾರಿಸಲಿದೆ. ರಾಜ್ಯದಲ್ಲಿ ಬಿಜೆಪಿ ಪರವಾದ ಅಲೆ ಎದ್ದಿದೆ. ದೇಶದ ಪ್ರಧಾನಿ ಮೋದಿಯವರು ರಾಜ್ಯದಲ್ಲಿ ಚುನಾವಣಾ ಪ್ರಚಾರ ಪ್ರಾರಂಭಿಸಲಿದ್ದಾರೆ ಎಂದರು. ಮೋದಿಯವರು ಏಪ್ರಿಲ್ 29ರಿಂದ ಮೇ 7ರವರೆಗೆ ವಿವಿಧ ಜಿಲ್ಲೆಗಳಲ್ಲಿ ಪ್ರಚಾರ ಮಾಡಲಿದ್ದಾರೆ.
ಕಾಂಗ್ರೆಸ್ ಪಕ್ಷ ಸುಳ್ಳು ಭರವಸೆಗಳನ್ನು ನೀಡುವ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಈಗಾಗಲೇ ತಾವು ನೀಡಿದ ಭರವಸೆಗಳನ್ನು ಈಡೇರಿಸದ ಅವರು ಈ ಹೊಸ ಭರವಸೆಗಳನ್ನು ಹೇಗೆ ಈಡೇರಿಸಲು ಸಾಧ್ಯ ಎಂದು ಸದಾನಂದ ಗೌಡರು ಪ್ರಶ್ನಿಸಿದರು.

ಕಾಂಗ್ರೆಸ್ ಸರಕಾರದ ವೈಫಲ್ಯಗಳನ್ನು ಸಮರ್ಪಕವಾಗಿ ಕರ್ನಾಟಕದ ಜನರ ಮುಂದಿಡುವ ಕಾರ್ಯವನ್ನು ಭಾರತೀಯ ಜನತಾ ಪಕ್ಷ ಯಶಸ್ವಿಯಾಗಿ ಮಾಡುತ್ತಿದೆ ಎಂದರು. ಈ ತಿಂಗಳಾಂತ್ಯದಲ್ಲಿ ಬಿಜೆಪಿ ಕೂಡ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಹೆಬ್ಬಾಳ ಬಿಜೆಪಿ ಅಭ್ಯರ್ಥಿ ಡಾ ವೈ ಎ ನಾರಾಯಣಸ್ವಾಮಿ ಮಾತನಾಡಿ, ಅಭಿವೃದ್ದಿಗೆ ಮಾತ್ರ ನನ್ನ ಬೆಂಬಲವಿರಲಿದೆ. ಕಳೆದ 2 ವರ್ಷಗಳಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದೇನೆ. ಇದನ್ನು ಗುರುತಿಸಿರುವ ಬಿ-ಪ್ಯಾಕ್ ಸಂಸ್ಥೆ ನನಗೆ ಎರಡನೇ ಸ್ಥಾನ ನೀಡಿದೆ. 5 ವರ್ಷಗಳ ಕಾಲ ಶಾಸಕನಾಗುವ ಅವಕಾಶ ದೊರೆತಲ್ಲಿ ಇನ್ನೂ ಹೆಚ್ಚಿನ ಅಭಿವೃದ್ದಿ ಕಾರ್ಯಗಳನ್ನ ಕೈಗೊಳ್ಳುವುದಾಗಿ ತಿಳಿಸಿದರು.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications