ಗಾಂಧಿನಗರದಲ್ಲಿ ಹಣಹಂಚುತ್ತಿದ್ದ ಜೆಡಿಎಸ್ ಮುಖಂಡ ಪೊಲೀಸ್ ವಶಕ್ಕೆ
ಬೆಂಗಳೂರು, ಮೇ 12: ಮತದಾರರಿಗೆ ಹಣ ಹಂಚುತ್ತಿದ್ದ ಜೆಡಿಎಸ್ ಮುಖಂಡ್ ಮಲ್ಲೇಶ್ ಅವರನ್ನು ನಿನ್ನೆ(ಮೇ 11) ತಡರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪರವಾಗಿ ಹಣ ಹಂಚುತ್ತಿದ್ದ ಮಾಜಿ ಕಾರ್ಪೋರೇಟರ್ ಮಲ್ಲೇಶ್ ಅವರನ್ನು ಶ್ರೀರಾಂಪುರ ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕ ರಾಜ್ಯದಾದ್ಯಂತ 222 ವಿಧಾನಸಭಾ ಕ್ಷೇತ್ರಗಳಿಗೆ ಇಂದು(ಮೇ 12) ಮತದಾನ ನಡೆಯುತ್ತಿದ್ದು, ಮೇ 15 ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.












Click it and Unblock the Notifications