ಜಯನಗರದಿಂದ ಪಕ್ಷೇತರ ಅಭ್ಯರ್ಥಿಯಾಗಿ ರವಿಕೃಷ್ಣಾ ರೆಡ್ಡಿ ನಾಮಪತ್ರ
ಬೆಂಗಳೂರು, ಏಪ್ರಿಲ್ 22 : ರವಿಕೃಷ್ಣಾ ರೆಡ್ಡಿ ಅವರು ಜಯನಗರ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಶನಿವಾರ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ನಿಂದ ಸೌಮ್ಯಾ ರೆಡ್ಡಿ, ಬಿಜೆಪಿಯಿಂದ ವಿಜಯ್ ಕುಮಾರ್, ಜೆಡಿಎಸ್ನಿಂದ ತನ್ವೀರ್ ಅಹಮದ್ ಅಭ್ಯರ್ಥಿಗಳು.
ಶನಿವಾರ ಮಧ್ಯಾಹ್ನ 1.30ಕ್ಕೆ ಜಯನಗರ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ರವಿಕೃಷ್ಣಾ ರೆಡ್ಡಿ ನಾಮಪತ್ರವನ್ನು ಸಲ್ಲಿಸಿದರು. ನಾಮಪತ್ರಕ್ಕೆ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿಯವರು ಸೂಚಕರಾಗಿ ಸಹಿ ಹಾಕಿದರು.
ನಾಮಪತ್ರಕ್ಕೆ ಠೇವಣಿಯಾಗಿ ಶಾಂತವೇರಿ ಗೋಪಾಲಗೌಡರ ಆದರ್ಶದಲ್ಲಿ ಚುನಾವಣಾ ಖರ್ಚು ವೆಚ್ಚಕ್ಕಾಗಿ ನಡೆಸುತ್ತಿರುವ 'ಓಟು ಕೊಡಿ-ನೋಟು ಕೊಡಿ' ಅಭಿಯಾನದ ಮೂಲಕ ಸಂಗ್ರಹಿಸಿದ ಹಣವನ್ನು ಬಳಸಲಾಯಿತು.

ಈ ದೇಣಿಗೆಗೂ ಕೂಡ ಎಚ್.ಎಸ್. ದೊರೆಸ್ವಾಮಿಯವರು ತಮ್ಮ ಕಾಣಿಕೆ ನೀಡಿರುವುದನ್ನು ಈ ಸಂದರ್ಭದಲ್ಲಿ ರವಿಕೃಷ್ಣಾ ರೆಡ್ಡಿ ಅವರು ನೆನಪು ಮಾಡಿಕೊಂಡರು. 500ಕ್ಕೂ ಹೆಚ್ಚು ಕಾರ್ಯಕರ್ತರು ಈ ನಾಮಪತ್ರ ಸಲ್ಲಿಸುವಾಗ ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಸುವ ಮೊದಲು ಜಯನಗರದ ರಾಗಿಗುಡ್ಡದ ಬಳಿಯಿಂದ ಪಾದಯಾತ್ರೆಯಲ್ಲಿ ಜಯನಗರ ಹಾಗು ನಾಡಿನ ವಿವಿಧ ಭಾಗಗಳಿಂದ ಬಂದಿದ್ದ ಸುಮಾರು 500ಕ್ಕೂ ಹೆಚ್ಚು ಕಾರ್ಯಕರ್ತರು ಚುನಾವಣಾಧಿಕಾರಿಯ ಕಚೇರಿಗೆ ಆಗಮಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರವಿಕೃಷ್ಣಾ ರೆಡ್ಡಿಯವರು, 'ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಅಭ್ಯರ್ಥಿಗಳು ಚುನಾವಣೆಗಳಲ್ಲೇ ಅಕ್ರಮ, ಅನಾಚಾರವೆಸಗಿ, ಆಯ್ಕೆಯಾಗಿ ಮುಂದಿನ ದಿನಗಳಲ್ಲಿ ಮತ್ತಷ್ಟು ಭ್ರಷ್ಟಾಚಾರ ಮಾಡಲು ಅಣಿಯಾಗುತ್ತಿದ್ದಾರೆ' ಎಂದರು.
'ಜಯನಗರದಲ್ಲಿ ನಾವು ಒಂದು ಮಾದರಿ ಚುನಾವಣೆಯನ್ನು ಮಾಡುತ್ತಿದ್ದೇವೆ. ಇದು ಕೇವಲ ಒಬ್ಬ ರವಿ ಕೃಷ್ಣಾರೆಡ್ಡಿಯ ಹೋರಾಟವಲ್ಲ, ರಾಜ್ಯದ ಅನೇಕ ಹೋರಾಟಗಾರರ ಮತ್ತು ಸಜ್ಜನರ ಹೋರಾಟವಾಗಿದ್ದು, ಇದು ಅನ್ಯಾಯ, ಅಧರ್ಮದ, ಅಕ್ರಮ, ಅನಾಚಾರಗಳ ವಿರುದ್ಧದ ಹೋರಾಟವಾಗಿದೆ' ಎಂದು ಹೇಳಿದರು.
-
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ












Click it and Unblock the Notifications