ಗೆದ್ದು ಸೋತ ಸೌಮ್ಯ ರೆಡ್ಡಿ; ಕಣ್ಣೀರು ಹಾಕಿ ಎಣಿಕಾ ಕೇಂದ್ರದಿಂದ ಹೊರ ಬಂದ ಸೌಮ್ಯ ರೆಡ್ಡಿ
ಬೆಂಗಳೂರು, ಮೇ 14: ಜಯನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಗೊಂದಲಕ್ಕೆ ಚುನಾವಣಾಧಿಕಾರಿಗಳು ಶನಿವಾರ ಮಧ್ಯರಾತ್ರಿ ತೆರೆ ಎಳೆದಿದ್ದು, ಬಿಜೆಪಿ ಅಭ್ಯರ್ಥಿ ಸಿ.ಕೆ.ರಾಮಮೂರ್ತಿ ಅವರು ಗೆಲುವು ಸಾಧಿಸಿದ್ದಾರೆ. ಗೆದ್ದು ಸೋತ ಸೌಮ್ಯ ರೆಡ್ಡಿ ಬೇಸರಗೊಂಡ ಮತ ಎಣಿಕಾ ಕೇಂದ್ರದಿಂದ ಕಣ್ಣೀರು ಹಾಕುತ್ತಾ ಹೊರ ಬಂದಿದ್ದಾರೆ.
ಜಯನಗರದ ವಿಧಾನಸಭಾ ಕ್ಷೇತ್ರದಲ್ಲಿ ಮತ ಎಣಿಕೆ ಗೊಂದಲದ ಹಿನ್ನೆಲೆಯಲ್ಲಿಎಸ್ಎಸ್ಎಂಆರ್ವಿ ಕಾಲೇಜಿನ ಮತ ಎಣಿಕೆ ಕೇಂದ್ರದ ಬಳಿ ಶನಿವಾರ ತಡರಾತ್ರಿಯವರೆಗೂ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಎಸ್ಎಸ್ಎಂಆರ್ವಿ ಕಾಲೇಜಿನ ಮತ ಎಣಿಕೆ ಕೇಂದ್ರ ಬಳಿ ಜಮಾಯಿಸಿ, ಪರಸ್ಪರ ತಮ್ಮ ತಮ್ಮ ಅಭ್ಯರ್ಥಿಗಳ ಪರ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

ಇನ್ನೂ ಮೊದಲ ಸುತ್ತಿನಿಂದಲೂ ಜಯನಗರ ಕ್ಷೇತ್ರದ ಮತ ಎಣಿಕೆ ಹಾವು-ಏಣಿಯಾಟ ನಡೆಯುತ್ತಲೇ ಇತ್ತು. 16 ಸುತ್ತಿನ ಮತ ಎಣಿಕೆ ಕಾರ್ಯ ಮುಗಿದ ಬಳಿಕ ಕಾಂಗ್ರೆಸ್ನ ಸೌಮ್ಯಾರೆಡ್ಡಿ ಅವರು 294 ಮತಗಳಿಂದ ಮುನ್ನಡೆ ಸಾಧಿಸಿರುವುದನ್ನು ಚುನಾವಣಾ ಫಲಿತಾಂಶದ ವೆಬ್ಸೈಟ್ನಲ್ಲಿ ಪ್ರಕಟಿಸಲಾಯಿತು. ಬಿಜೆಪಿ ಅಭ್ಯರ್ಥಿ ಸಿ.ಕೆ.ರಾಮಮೂರ್ತಿ ಅವರು ಅಂಚೆ ಮತಗಳ ಮರು ಎಣಿಕೆಗೆ ಒತ್ತಾಯಿಸಿದರು. ಹೀಗಾಗಿ ತಡರಾತ್ರಿಯವರೆಗೂ ಒಟ್ಟು ಮೂರು ಬಾರಿ ಮರು ಎಣಿಕೆ ಮಾಡಲಾಯಿತು.
ಇತ್ತ ಮೊದಲ ಹಾಗೂ ಎರಡನೇ ಸುತ್ತಿನ ಮತ ಏಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿಯವರು ಮುನ್ನಡೆಯನ್ನ ಸಾಧಿಸಿದ್ದರು. ಇನ್ನೂ ಕೊನೆಯದಾಗಿ ಮರು ಎಣಿಕೆಯಲ್ಲಿ ಮೊದಲಿಗೆ ತಿರಸ್ಕೃತಗೊಳಿಸಿದ್ದ 200 ಅಂಚೆ ಮತಗಳನ್ನು ಸಿಂಧುಗೊಳಿಸಿದ್ದರಿಂದ ಬಿಜೆಪಿ ಅಭ್ಯರ್ಥಿ 16 ಮತಗಳ ಮುನ್ನಡೆಯನ್ನ ಸಾಧಿಸಿದರು. ಈ ವೇಳೆ ಕಾಂಗ್ರೆಸ್ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಚುನಾವಣಾಧಿಕಾರಿಗಳು ಫಲಿತಾಂಶವನ್ನ ಪ್ರಕಟಿಸಲಿಲ್ಲ.
ಇನ್ನೂ ಜಿಲ್ಲಾ ಚುನಾವಣಾಧಿಕಾರಿಯೂ ತುಷಾರ್ ಗಿರಿನಾಥ್ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ, ಇವಿಎಂ ಮತ್ತು ಅಂಚೆ ಮತಗಳನ್ನು ಪರಿಶೀಲಿಸಿ, ಬಿಜೆಪಿ ಅಭ್ಯರ್ಥಿ ಸಿ.ಕೆ.ರಾಮಮೂರ್ತಿ ಅವರು 16 ಮತಗಳಿಂದ ಜಯ ಗಳಿಸಿದ್ದಾರೆಂದು ಘೋಷಿಸಿದರು.
-
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ












Click it and Unblock the Notifications